‘ಈ ಸಲ ಕಪ್​​ ನಂದು’: ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ, ಫೋಟೋಸ್​ ನೋಡಿ

Edited By:

Updated on: Aug 18, 2025 | 10:23 AM

ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ವಿಭಿನ್ನ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ರಾಜಗೋಪಾಲ್​ ಎಂಬುವವರು ಸಿದ್ಧಮಾಡಿರುವ ಆರ್​​ಸಿಬಿ ಕಪ್​ ಹಿಡುಕೊಂಡಿರುವ ಗಣೇಶ ಎಲ್ಲರ ಗಮನಸೆಳೆಯುತ್ತಿದೆ. ಅದರ ಫೋಟೋಸ್​ ಇಲ್ಲಿದೆ.

1 / 6
ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಗಣೇಶ ಹಬ್ಬ ಬಂತ್ತು ಅಂದರೆ ನಗರದ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ ಗಮನ ಸೆಳೆಯಬೇಕು ಎನ್ನುವುದು ಕಾಮನ್. ಹಾಗಾಗಿ ಇಲ್ಲೊಂದು ಕಡೆ ಮಣ್ಣಿನಲ್ಲಿ ಆರ್​​ಸಿಬಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಸಿದ್ಧವಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

2 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಕೆರೆ ಮಣ್ಣಿನಿಂದ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಲಾಗಿದೆ. ಆ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಲಾಗುತ್ತಿದೆ.  

3 / 6
ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

ಈ ಭಾರಿಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಡಿಫರೆಂಟ್ ಗಣೇಶ ಮೂರ್ತಿ ತರಬೇಕು, ಅದ್ದೂರಿ ಸೆಟ್ ಹಾಕಬೇಕು ಅಂತ ಯುವಕರು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಯುವಕರಿಗಾಗಿಯೇ ಪಟ್ಟಣದ ರಾಜಗೋಪಾಲ್ ಕುಟುಂಬ ಕೆರೆ ಮಣ್ಣಿನಿಂದ ವಿವಿಧ ಬಗೆಯ ಮೂರ್ತಿಗಳನ್ನ ತಯಾರು ಮಾಡಿದ್ದಾರೆ. ಅದರಲ್ಲೂ 14 ವರ್ಷಗಳ ಬಳಿಕ ಆರ್​ಸಿಬಿ ಕಪ್ ಗೆದ್ದ ಖುಷಿಗೆ ಗಣೇಶ ಕೈಯಲ್ಲಿ ಐಪಿಎಲ್ ಕಪ್ ಹಿಡಿದಿರುವ ರೀತಿಯಲ್ಲಿ ಮೂರ್ತಿ ತಯಾರಿಸಲಾಗಿದ್ದು, ಯುವಕರು ಫಿದಾ ಆಗಿದ್ದಾರೆ.

4 / 6
ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

ಆರ್​ಸಿಬಿ ಗಣೇಶ ಮಾತ್ರವಲ್ಲದೆ ಹನುಮಾನ್, ರಥದ ಇಲಿಗಳ ಗಣೇಶ, ವಿಷ್ಣು ಅವತಾರ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳು ಎಲ್ಲರನ್ನೂ ಆಕರ್ಷಿಸುತ್ತಿವೆ. ಜೇಡಿ ಮಣ್ಣು ಮತ್ತು ಪೇಪರ್ ಮೂಲಕ ಇವುಗಳನ್ನು ತಯಾರು ಮಾಡಲಾಗಿದೆ. ಅಲ್ಲದೆ ಈ ಗಣೇಶ ಮೂರ್ತಿಗಳಿಗೆ ಕೆಮಿಕಲ್ ಮಿಶ್ರಿತ ಬಣ್ಣದ ಬದಲಿಗೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಬಣ್ಣಗಳನ್ನು ಬಳಸಿದ್ದು, ಪರಿಸರ ಪ್ರೇಮಿಗಳ ಗಮನವೂ ಸೆಳೆಯುತ್ತಿವೆ.

5 / 6
ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

ಕಳೆದ ಮೂರು ತಲೆ ಮಾರುಗಳಿಂದ ವಿಜಯಪುರ ಪಟ್ಟಣದ ರಾಜಗೋಪಾಲ್ ಎಂಬುವವರ ಕುಟುಂಬ ವರ್ಷ ಪೂರ್ತಿ ಗಣೇಶಗಳನ್ನ ನಿರ್ಮಾಣ ಮಾಡುವ ಕೆಲಸವನ್ನ ಮಾಡಿಕೊಂಡು ಬರುತ್ತಿದ್ದಾರೆ. ಇವರು ತಯಾರಿಸುವ ಗಣೇಶ ಮೂರ್ತಿಗಳಿಗೆ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವಡೆ ಬೇಡಿಕೆ ಇದೆ.

6 / 6
ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

ಗಣೇಶ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಯುವಕರ ಕಣ್ಮನ ಸೆಳೆಯಲು ವಿವಿಧ ಬಗೆಯ ಮೂರ್ತಿಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. 

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us