
ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ.

‘ಗೋಲ್ಡನ್ ಸ್ಟಾರ್’ ಗಣೇಶ್ ನಾಯಕರಾಗಿ ಅಭಿನಯಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕರ್ನಾಟಕದಲ್ಲಿ ಸೂಪರ್ ಹಿಟ್ ಆದ ಬೆನ್ನಲ್ಲೇ ಅಬುದಾಬಿ ಮತ್ತು ದುಬೈನಲ್ಲೂ ಪ್ರದರ್ಶನ ಕಂಡಿದೆ. ಆ ಫೋಟೋಗಳು ಲಭ್ಯವಾಗಿವೆ.

ದುಬೈನಲ್ಲಿ ಇರುವ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ದುಬೈನಲ್ಲಿ ಇತ್ತೀಚೆಗೆ ರಶ್ಮಿ ವೆಂಕಟೇಶ್, ಸೆಂದಿಲ್ ಹಾಗೂ ತಂಡದವರು ಈ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

ವಿಶೇಷ ಪ್ರದರ್ಶನದಲ್ಲಿ ಗಣೇಶ್, ಮಾಳವಿಕಾ ನಾಯರ್, ರಂಗಾಯಣ ರಘು, ಶ್ರೀನಿವಾಸ್ ರಾಜು, ಪ್ರಶಾಂತ್ ಜಿ. ರುದ್ರಪ್ಪ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಿದ್ದರು. ವಿದೇಶದಲ್ಲಿ ಕನ್ನಡದ ಕಂಪು ಹರಡಿದರು.

ಅಂದಾಜು 750ಕ್ಕೂ ಅಧಿಕ ಕನ್ನಡಿಗರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದರು. ಸಿನಿಮಾದ ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿಪಟ್ಟರು. ‘ನೀವು ನೀಡಿದ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ’ ಎಂದರು ಗಣೇಶ್.