AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ದೇಶಿ ಗೋವಿನ ಸಗಣಿಯಿಂದ ಗಣೇಶ ವಿಗ್ರಹ ನಿರ್ಮಾಣ

ಗಣೇಶನ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು ಯುವಕರಿಂದ ಹಿರಿಯರವರೆಗೂ ವಿಘ್ನ ವಿನಾಯಕನನ್ನ ಮನೆಗೆ ತಂದು ಪೂಜಿಸಲು ಸಿದ್ದರಾಗಿದ್ದಾರೆ. ಗಣೇಶ ಹಬ್ಬಕ್ಕಾಗಿ ಮನೆಗಳಲ್ಲಿ ತಯಾರಿ ಜೋರಾಗಿಯೇ ನಡೆಯುತ್ತಿದೆ. ಮಣ್ಣಿನ ಗಣೇಶ ವಿಗ್ರಹಕ್ಕೆ ಬೇಡಿಕೆ ಹೆಚ್ಚಾಗಿದೆ. ಇದರ ನಡುವೆ ಸಗಣಿಯಿಂದ ಗಣೇಶ ವಿಗ್ರಹಗಳನ್ನು ತಯಾರಿಸಲಾಗುತ್ತಿದ್ದು, ಕಣ್ಮನ ಸಳೆಯುತ್ತಿವೆ.

ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on: Sep 04, 2024 | 10:21 AM

Share
 Ganesha chaturthi 2024: Ganesha idol made from cow dung, Kannada News

ಗಣೇಶನ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು ಯುವಕರಿಂದ ಹಿರಿಯರವರೆಗೂ ವಿಘ್ನ ವಿನಾಯಕನನ್ನ ಮನೆಗೆ ತಂದು ಪೂಜಿಸಲು ಸಿದ್ದರಾಗಿದ್ದಾರೆ. ಗಣೇಶ ಹಬ್ಬಕ್ಕಾಗಿ ಮನೆಗಳಲ್ಲಿ ತಯಾರಿ ಜೋರಾಗಿಯೇ ನಡೆಯುತ್ತಿದೆ. ಮಣ್ಣಿನ ಗಣೇಶ ವಿಗ್ರಹಕ್ಕೆ ಬೇಡಿಕೆ ಹೆಚ್ಚಾಗಿದೆ. ಇದರ ನಡುವೆ ಸಗಣಿಯಿಂದ ಗಣೇಶ ವಿಗ್ರಹಗಳನ್ನು ತಯಾರಿಸಲಾಗುತ್ತಿದ್ದು, ಕಣ್ಮನ ಸಳೆಯುತ್ತಿವೆ.

1 / 7
 Ganesha chaturthi 2024: Ganesha idol made from cow dung, Kannada News

ಗಣೇಶನನ್ನು ಪೂಜಿಸುವ ಭಕ್ತರಿಗಾಗಿ ಪರಿಸರ ಸ್ನೇಹಿ ದೇಶಿಯ ಗೋವಿನ ಸಗಣಿಯಿಂದ ಗಣೇಶ ವಿಗ್ರಹಗಳು ನಿರ್ಮಾಣವಾಗಿದ್ದು ವಿನೂತನ ಗಣೇಶ ವಿಗ್ರಹಗಳು ಕಣ್ಮನ ಸೆಳೆಯುತ್ತಿವೆ. ಗೋವಿನ ಸಗಣಿಯಿಂದ ಗಣೇಶನ ವಿಗ್ರಹಗಳನ್ನು ತಯಾರಿಸಲಾಗುತ್ತಿದೆ.

2 / 7
 Ganesha chaturthi 2024: Ganesha idol made from cow dung, Kannada News

ಪರಿಸರ ಸ್ನೇಹಿ ಗಣೇಶನನ್ನ ಕೂರಿಸುವಂತೆ ಪರಿಸರ ಪ್ರೇಮಿಗಳು ಮತ್ತು ಸರ್ಕಾರ ಜಾಗೃತಿ ಮೂಡಿಸುತ್ತಿದೆ. ಗಣೇಶನ ವಿಸರ್ಜನೆಯಿಂದ ಕೆರೆ, ಬಾವಿ ನೀರಿಗೆ ಹಾನಿಯಾಗುವುದನ್ನು ತಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಮಣ್ಯದ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ ಸಗಣಿಯಿಂದ ಗಣೇಶ ವಿಗ್ರಹ ತಯಾರಿಸಲಾಗುತ್ತಿದೆ.

3 / 7
 Ganesha chaturthi 2024: Ganesha idol made from cow dung, Kannada News

ಸಗಣಿಯಿಂದ ಗಣೇಶ ವಿಗ್ರಹ ತಯಾರಿಕೆಯಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ. ಕಳೆದ ಮೂರು ವರ್ಷದಿಂದ ಗೋವಿನ ಸಗಣಿಯಲ್ಲಿ ವಿವಿಧ ಬಗೆಯ ಗಣೇಶ ವಿಗ್ರಹಗಳನ್ನು ತಯಾರು ಮಾಡಿ ಮಾರುಕಟ್ಟೆಗೆ ಗೋಶಾಲೆ ಸಿಬ್ಬಂದಿ ಕಳುಹಿಸುತ್ತಿದೆ. ಅದರಂತೆ ಈ ಭಾರಿಯೂ ಸಗಣಿಯಿಂದ ಗಣೇಶ ವಿಗ್ರಹಗಳು ತಯಾರಾಗಿದ್ದು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ.

4 / 7
 Ganesha chaturthi 2024: Ganesha idol made from cow dung, Kannada News

ಮಣ್ಣಿನ ಗಣೇಶನ ಮಾದರಿಯಲ್ಲಿ ಸಗಣಿಯಿಂದ ಗಣೇಶನ ವಿಗ್ರಹಗಳನ್ನು ಸಿದ್ದಪಡಿಸಿದ್ದು ನೀರಿನ ಬಣ್ಣಗಳಿಂದ ಗಣೇಶನಿಗೆ ಅಲಂಕಾರವನ್ನ ಮಾಡಲಾಗಿದೆ. ಜೊತೆಗೆ ಈಗಾಗಲೆ ಕಳೆದ ಎರಡು ವರ್ಷಗಳಿಂದ ಗೋಶಾಲೆಯಲ್ಲಿ ಸಗಣಿ ಗಣೇಶನ ವಿಗ್ರಹಗಳನ್ನು ತಯಾರು ಮಾಡುತ್ತಿರುವುದರಿಂದ ಬೆಂಗಳೂರು ನಗರ ಸೇರಿದಂತೆ ವಿವಿಧೆಡೆಯಿಂದ ಸಗಣಿ ಗಣೇಶನ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದೆ.

5 / 7
 Ganesha chaturthi 2024: Ganesha idol made from cow dung, Kannada News

ಸಗಣಿ ಗಣೇಶನ ವಿಗ್ರಹವನ್ನು ಕೂರಿಸಿದರೆ ಒಳ್ಳೆಯದಾಗುತ್ತದೆ. ಪರಿಸರಕ್ಕೆ ಹಾನಿಯಾಗದೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಣೆ ಮಾಡಿದಂತಾಗುತ್ತದೆ ಎಂದು ಪರಿಸರ ಪ್ರೇಮಿಗಳು ಸಗಣಿ ಗಣೇಶ ವಿಗ್ರಹಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

6 / 7
 Ganesha chaturthi 2024: Ganesha idol made from cow dung, Kannada News

ಒಟ್ಟಾರೆಯಾಗಿ ಗಣೇಶ ಚತುರ್ಥಿ ಸಮೀಪಿಸುತ್ತಿರುವ ಬೆನ್ನಲ್ಲೆ ಮಾರುಕಟ್ಟೆಗೆ ವಿವಿಧ ಬಗೆಯ ಪರಿಸರ ಸ್ನೇಹಿ ಗಣೇಶ ವಿಗ್ರಹಗಳಯ ಲಗ್ಗೆಯಿಡುತ್ತಿವೆ. ಪರಿಸರ ಸ್ನೇಹಿ ಗಣಪನನ್ನು ಪೂಜಿಸುವ ಮೂಲಕ ಈ ಭಾರಿಯ ಗಣೇಶನ ಹಬ್ಬವನ್ನ ಮತ್ತಷ್ಟು ಪರಿಸರ ಸ್ನೇಹಿಯಾಗಿ ಆಚರಿಸಿ.

7 / 7
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?