AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಸಂಭ್ರಮದ ಗಣೇಶೋತ್ಸವ; ಪ್ರಮುಖ ದೇವಸ್ಥಾನಗಳಲ್ಲಿ ಹೇಗಿತ್ತು ವಿಘ್ನ ನಿವಾರಕನ ಪೂಜೆ

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ವಿಘ್ನ ನಿವಾರಕನಿಗೆ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಅದರಂತೆ ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಹೇಗಿತ್ತು ಗಣೇಶನ ಪೂಜೆ? ಇಲ್ಲಿದೆ ವಿವರ

ಕಿರಣ್ ಹನುಮಂತ್​ ಮಾದಾರ್
|

Updated on: Sep 07, 2024 | 3:23 PM

Share
ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ಮುಂಜಾನೆ 3 ಗಂಟೆಯಿಂದ ಗಣಪನಿಗೆ ವಿಶೇಷ ಪೂಜೆ ನಡೆಯುತ್ತಿದೆ. ಗಣಪನಿಗೆ ಕ್ಷೀರಾಭಿಷೇಕ, ಮೊಸರು ಹಾಗೂ ಪಂಚಾಮೃತ ಅಭಿಷೇಕ, ಹಾಗೂ ಇಂದು ವಿಶೇಷವಾಗಿ ಗಣಪನಿಗೆ ನಾಣ್ಯಗಳಿಂದ ಅಭಿಷೇಕ ಮಾಡಲಾಯಿತು. ಈ ಹಿನ್ನಲೆ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ಮುಂಜಾನೆ 3 ಗಂಟೆಯಿಂದ ಗಣಪನಿಗೆ ವಿಶೇಷ ಪೂಜೆ ನಡೆಯುತ್ತಿದೆ. ಗಣಪನಿಗೆ ಕ್ಷೀರಾಭಿಷೇಕ, ಮೊಸರು ಹಾಗೂ ಪಂಚಾಮೃತ ಅಭಿಷೇಕ, ಹಾಗೂ ಇಂದು ವಿಶೇಷವಾಗಿ ಗಣಪನಿಗೆ ನಾಣ್ಯಗಳಿಂದ ಅಭಿಷೇಕ ಮಾಡಲಾಯಿತು. ಈ ಹಿನ್ನಲೆ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.

1 / 5
ಗಣೇಶ ಚತುರ್ಥಿಯ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬಂದಿದ್ದು, ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಗಳನ್ನು ಗಣೇಶನಿಗೆ ಅರ್ಪಣೆ ಮಾಡಿದರು.

ಗಣೇಶ ಚತುರ್ಥಿಯ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬಂದಿದ್ದು, ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಗಳನ್ನು ಗಣೇಶನಿಗೆ ಅರ್ಪಣೆ ಮಾಡಿದರು.

2 / 5
ಗದಗ ನಗರದಲ್ಲಿ ಗಣೇಶ ಹಬ್ಬದ ಸಂಭ್ರಮ ಬಲು ಜೋರಾಗಿದ್ದು, ಶ್ರೀ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಸಡಗರ ಮನೆ ಮಾಡಿದೆ. ಇನ್ನು ಇಲ್ಲಿರುವ ರಾಜ್ಯದ ಏಕೈಕ ಕಪ್ಪು ಶಿಲೆಯ ಬಲಮುರಿ ಗಣಪತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ, ಹೋಮ- ಹವನ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಬಂದಂತಹ ಭಕ್ತರಿಗೆ ದೇವಸ್ಥಾನ ಕಮಿಟಿ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಗದಗ ನಗರದಲ್ಲಿ ಗಣೇಶ ಹಬ್ಬದ ಸಂಭ್ರಮ ಬಲು ಜೋರಾಗಿದ್ದು, ಶ್ರೀ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಸಡಗರ ಮನೆ ಮಾಡಿದೆ. ಇನ್ನು ಇಲ್ಲಿರುವ ರಾಜ್ಯದ ಏಕೈಕ ಕಪ್ಪು ಶಿಲೆಯ ಬಲಮುರಿ ಗಣಪತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ, ಹೋಮ- ಹವನ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಬಂದಂತಹ ಭಕ್ತರಿಗೆ ದೇವಸ್ಥಾನ ಕಮಿಟಿ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

3 / 5
ಕರಾವಳಿಯಲ್ಲಿಯೂ ಕೂಡ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಶರವು ಮಹಾಗಣಪತಿ ದೇವಸ್ಥಾನ, ಸೌತಡ್ಕ ಗಣಪತಿ ದೇವಸ್ಥಾನ ಸೇರಿದಂತೆ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಶರವು ಮಹಾಗಣಪತಿಗೆ ವಿಶೇಷ ಪೂಜೆ, ಹೋಮ ಹವನ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಗಣ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿಯೂ ಕೂಡ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಶರವು ಮಹಾಗಣಪತಿ ದೇವಸ್ಥಾನ, ಸೌತಡ್ಕ ಗಣಪತಿ ದೇವಸ್ಥಾನ ಸೇರಿದಂತೆ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಶರವು ಮಹಾಗಣಪತಿಗೆ ವಿಶೇಷ ಪೂಜೆ, ಹೋಮ ಹವನ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಗಣ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ.

4 / 5
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆಯಲ್ಲಿರುವ ವಿಶ್ವದ ಏಕೈಕ ಬೃಹತ್ ಸಾಲಿಗ್ರಾಮ ಶಿಲಾ‌ ವಿನಾಯಕ, ಬೆಳ್ಳಿ ಕವಚದಲ್ಲಿ ಕಂಗೊಳಿಸುತ್ತಿದ್ದು, ಇದನ್ನು ತ್ರಿಮೂರ್ತಿಗಳಿಂದ ಸ್ಥಾಪಿಸಲಾಗಿದೆ ಎನ್ನುವ ಪ್ರತೀತಿಯಿದೆ. ಕಲಿಯುಗದಲ್ಲೂ ರಾಜಕಾರಣಿಗಳ ಅಚ್ಚು ಮೆಚ್ಚಿನ ವಿನಾಯಕ ಇದಾಗಿದ್ದು, ಗಣೇಶ ಚತುರ್ಥಿ ಹಿನ್ನೆಲೆ ಐದು ದಿನಗಳ ಕಾಲ ವಿಶೇಷ ಪೂಜೆ ಹಾಗೂ ವಿನಾಯಕ ರಥೋತ್ಸವ ನಡೆಯುತ್ತದೆ. ಇಂದು ದೇವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿತ್ತು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆಯಲ್ಲಿರುವ ವಿಶ್ವದ ಏಕೈಕ ಬೃಹತ್ ಸಾಲಿಗ್ರಾಮ ಶಿಲಾ‌ ವಿನಾಯಕ, ಬೆಳ್ಳಿ ಕವಚದಲ್ಲಿ ಕಂಗೊಳಿಸುತ್ತಿದ್ದು, ಇದನ್ನು ತ್ರಿಮೂರ್ತಿಗಳಿಂದ ಸ್ಥಾಪಿಸಲಾಗಿದೆ ಎನ್ನುವ ಪ್ರತೀತಿಯಿದೆ. ಕಲಿಯುಗದಲ್ಲೂ ರಾಜಕಾರಣಿಗಳ ಅಚ್ಚು ಮೆಚ್ಚಿನ ವಿನಾಯಕ ಇದಾಗಿದ್ದು, ಗಣೇಶ ಚತುರ್ಥಿ ಹಿನ್ನೆಲೆ ಐದು ದಿನಗಳ ಕಾಲ ವಿಶೇಷ ಪೂಜೆ ಹಾಗೂ ವಿನಾಯಕ ರಥೋತ್ಸವ ನಡೆಯುತ್ತದೆ. ಇಂದು ದೇವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿತ್ತು.

5 / 5
Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು