AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಸಂಭ್ರಮದ ಗಣೇಶೋತ್ಸವ; ಪ್ರಮುಖ ದೇವಸ್ಥಾನಗಳಲ್ಲಿ ಹೇಗಿತ್ತು ವಿಘ್ನ ನಿವಾರಕನ ಪೂಜೆ

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ವಿಘ್ನ ನಿವಾರಕನಿಗೆ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಅದರಂತೆ ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಹೇಗಿತ್ತು ಗಣೇಶನ ಪೂಜೆ? ಇಲ್ಲಿದೆ ವಿವರ

ಕಿರಣ್ ಹನುಮಂತ್​ ಮಾದಾರ್
|

Updated on: Sep 07, 2024 | 3:23 PM

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ಮುಂಜಾನೆ 3 ಗಂಟೆಯಿಂದ ಗಣಪನಿಗೆ ವಿಶೇಷ ಪೂಜೆ ನಡೆಯುತ್ತಿದೆ. ಗಣಪನಿಗೆ ಕ್ಷೀರಾಭಿಷೇಕ, ಮೊಸರು ಹಾಗೂ ಪಂಚಾಮೃತ ಅಭಿಷೇಕ, ಹಾಗೂ ಇಂದು ವಿಶೇಷವಾಗಿ ಗಣಪನಿಗೆ ನಾಣ್ಯಗಳಿಂದ ಅಭಿಷೇಕ ಮಾಡಲಾಯಿತು. ಈ ಹಿನ್ನಲೆ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜಧಾನಿ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಾಲಯದಲ್ಲಿ ಮುಂಜಾನೆ 3 ಗಂಟೆಯಿಂದ ಗಣಪನಿಗೆ ವಿಶೇಷ ಪೂಜೆ ನಡೆಯುತ್ತಿದೆ. ಗಣಪನಿಗೆ ಕ್ಷೀರಾಭಿಷೇಕ, ಮೊಸರು ಹಾಗೂ ಪಂಚಾಮೃತ ಅಭಿಷೇಕ, ಹಾಗೂ ಇಂದು ವಿಶೇಷವಾಗಿ ಗಣಪನಿಗೆ ನಾಣ್ಯಗಳಿಂದ ಅಭಿಷೇಕ ಮಾಡಲಾಯಿತು. ಈ ಹಿನ್ನಲೆ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.

1 / 5
ಗಣೇಶ ಚತುರ್ಥಿಯ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬಂದಿದ್ದು, ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಗಳನ್ನು ಗಣೇಶನಿಗೆ ಅರ್ಪಣೆ ಮಾಡಿದರು.

ಗಣೇಶ ಚತುರ್ಥಿಯ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬಂದಿದ್ದು, ರೈತರು ತಮ್ಮ ಜಮಿನಿನಲ್ಲಿ ಬೆಳೆದ ಬೆಳೆಗಳನ್ನು ಗಣೇಶನಿಗೆ ಅರ್ಪಣೆ ಮಾಡಿದರು.

2 / 5
ಗದಗ ನಗರದಲ್ಲಿ ಗಣೇಶ ಹಬ್ಬದ ಸಂಭ್ರಮ ಬಲು ಜೋರಾಗಿದ್ದು, ಶ್ರೀ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಸಡಗರ ಮನೆ ಮಾಡಿದೆ. ಇನ್ನು ಇಲ್ಲಿರುವ ರಾಜ್ಯದ ಏಕೈಕ ಕಪ್ಪು ಶಿಲೆಯ ಬಲಮುರಿ ಗಣಪತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ, ಹೋಮ- ಹವನ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಬಂದಂತಹ ಭಕ್ತರಿಗೆ ದೇವಸ್ಥಾನ ಕಮಿಟಿ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಗದಗ ನಗರದಲ್ಲಿ ಗಣೇಶ ಹಬ್ಬದ ಸಂಭ್ರಮ ಬಲು ಜೋರಾಗಿದ್ದು, ಶ್ರೀ ಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದಲ್ಲಿ ಸಡಗರ ಮನೆ ಮಾಡಿದೆ. ಇನ್ನು ಇಲ್ಲಿರುವ ರಾಜ್ಯದ ಏಕೈಕ ಕಪ್ಪು ಶಿಲೆಯ ಬಲಮುರಿ ಗಣಪತಿಗೆ ಬೆಳಗ್ಗೆಯಿಂದ ವಿಶೇಷ ಪೂಜೆ, ಹೋಮ- ಹವನ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಬಂದಂತಹ ಭಕ್ತರಿಗೆ ದೇವಸ್ಥಾನ ಕಮಿಟಿ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

3 / 5
ಕರಾವಳಿಯಲ್ಲಿಯೂ ಕೂಡ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಶರವು ಮಹಾಗಣಪತಿ ದೇವಸ್ಥಾನ, ಸೌತಡ್ಕ ಗಣಪತಿ ದೇವಸ್ಥಾನ ಸೇರಿದಂತೆ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಶರವು ಮಹಾಗಣಪತಿಗೆ ವಿಶೇಷ ಪೂಜೆ, ಹೋಮ ಹವನ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಗಣ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿಯೂ ಕೂಡ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಶರವು ಮಹಾಗಣಪತಿ ದೇವಸ್ಥಾನ, ಸೌತಡ್ಕ ಗಣಪತಿ ದೇವಸ್ಥಾನ ಸೇರಿದಂತೆ ವಿಶೇಷ ಪೂಜೆ ನಡೆಯುತ್ತಿದೆ. ಇನ್ನು ಶರವು ಮಹಾಗಣಪತಿಗೆ ವಿಶೇಷ ಪೂಜೆ, ಹೋಮ ಹವನ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಗಣ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ.

4 / 5
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆಯಲ್ಲಿರುವ ವಿಶ್ವದ ಏಕೈಕ ಬೃಹತ್ ಸಾಲಿಗ್ರಾಮ ಶಿಲಾ‌ ವಿನಾಯಕ, ಬೆಳ್ಳಿ ಕವಚದಲ್ಲಿ ಕಂಗೊಳಿಸುತ್ತಿದ್ದು, ಇದನ್ನು ತ್ರಿಮೂರ್ತಿಗಳಿಂದ ಸ್ಥಾಪಿಸಲಾಗಿದೆ ಎನ್ನುವ ಪ್ರತೀತಿಯಿದೆ. ಕಲಿಯುಗದಲ್ಲೂ ರಾಜಕಾರಣಿಗಳ ಅಚ್ಚು ಮೆಚ್ಚಿನ ವಿನಾಯಕ ಇದಾಗಿದ್ದು, ಗಣೇಶ ಚತುರ್ಥಿ ಹಿನ್ನೆಲೆ ಐದು ದಿನಗಳ ಕಾಲ ವಿಶೇಷ ಪೂಜೆ ಹಾಗೂ ವಿನಾಯಕ ರಥೋತ್ಸವ ನಡೆಯುತ್ತದೆ. ಇಂದು ದೇವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿತ್ತು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆಯಲ್ಲಿರುವ ವಿಶ್ವದ ಏಕೈಕ ಬೃಹತ್ ಸಾಲಿಗ್ರಾಮ ಶಿಲಾ‌ ವಿನಾಯಕ, ಬೆಳ್ಳಿ ಕವಚದಲ್ಲಿ ಕಂಗೊಳಿಸುತ್ತಿದ್ದು, ಇದನ್ನು ತ್ರಿಮೂರ್ತಿಗಳಿಂದ ಸ್ಥಾಪಿಸಲಾಗಿದೆ ಎನ್ನುವ ಪ್ರತೀತಿಯಿದೆ. ಕಲಿಯುಗದಲ್ಲೂ ರಾಜಕಾರಣಿಗಳ ಅಚ್ಚು ಮೆಚ್ಚಿನ ವಿನಾಯಕ ಇದಾಗಿದ್ದು, ಗಣೇಶ ಚತುರ್ಥಿ ಹಿನ್ನೆಲೆ ಐದು ದಿನಗಳ ಕಾಲ ವಿಶೇಷ ಪೂಜೆ ಹಾಗೂ ವಿನಾಯಕ ರಥೋತ್ಸವ ನಡೆಯುತ್ತದೆ. ಇಂದು ದೇವರ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬಂದಿತ್ತು.

5 / 5
Follow us
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?