AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಮಹಾಕುಂಭದಲ್ಲಿ ಮಿಂದೆದ್ದು ತೃಪ್ತರಾಗಿ ಖುಷಿ ಹಂಚಿಕೊಂಡ ಗೌತಮ್ ಅದಾನಿ

ನವದೆಹಲಿ, ಜನವರಿ 21: ಭಾರತದ ಎರಡನೇ ಅತಿದೊಡ್ಡ ಶ್ರೀಮಂತರಾದ ಗೌತಮ್ ಅದಾನಿ ಅವರು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಂಡಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಸಮೇತ ತೆರಳಿದ್ದ ಅವರು ಉತ್ತರಪ್ರದೇಶ ರಾಜ್ಯದ ಆಡಳಿತವನ್ನು ಪ್ರಶಂಸಿಸಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2025 | 5:50 PM

Share
144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

1 / 5
ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

2 / 5
ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

3 / 5
ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

4 / 5
ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು