AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಮಹಾಕುಂಭದಲ್ಲಿ ಮಿಂದೆದ್ದು ತೃಪ್ತರಾಗಿ ಖುಷಿ ಹಂಚಿಕೊಂಡ ಗೌತಮ್ ಅದಾನಿ

ನವದೆಹಲಿ, ಜನವರಿ 21: ಭಾರತದ ಎರಡನೇ ಅತಿದೊಡ್ಡ ಶ್ರೀಮಂತರಾದ ಗೌತಮ್ ಅದಾನಿ ಅವರು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಂಡಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ ಗಂಗೆಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಸಮೇತ ತೆರಳಿದ್ದ ಅವರು ಉತ್ತರಪ್ರದೇಶ ರಾಜ್ಯದ ಆಡಳಿತವನ್ನು ಪ್ರಶಂಸಿಸಿದ್ದಾರೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2025 | 5:50 PM

Share
144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

144 ವರ್ಷಗಳಿಗೊಮ್ಮೆ ಬರುವ ಪ್ರಯಾಗರಾಜ್ ಮಹಾಕುಂಭ ದೇಶ ವಿದೇಶಗಳಿಂದ ಲೆಕ್ಕವಿಲ್ಲದಷ್ಟು ಜನರನ್ನು ಸೆಳೆಯುತ್ತದೆ. ಲಕ್ಷಾಂತರ ಸಂಖ್ಯೆಯಲ್ಲಿ ಸಾಧು ಸಂತರು ಪ್ರಯಾಗ್​ರಾಜ್​ನಲ್ಲಿ ಗಂಗೆಯಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ದೇಶದ ಎರಡನೇ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ತಮ್ಮ ಕುಟುಂಬ ಸಮೇತರಾಗಿ ಮಹಾಕುಂಭದಲ್ಲಿ ಪಾಲ್ಗೊಂಡರು.

1 / 5
ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

ಗೌತಮ್ ಅದಾನಿ ತಮ್ಮ ಕುಟುಂಬದೊಂದಿಗೆ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮ್​ನಲ್ಲಿ ಪೂಜೆ ಸಲ್ಲಿಸಿದರು. ಪತ್ನಿ, ಮಗ, ಸೊಸೆ ಮೊದಲಾದ ಅವರ ಕುಟುಂಬ ಸದಸ್ಯರೂ ಜೊತೆಗಿದ್ದು ಪ್ರಾರ್ಥನೆ ಸಲ್ಲಿಸಿದರು. ಕುಟುಂಬ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ವಿಶೇಷ.

2 / 5
ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

ಇವತ್ತು ಪ್ರಯಾಗರಾಜ್​ನ ಪುಣ್ಯ ಭೂಮಿಯನ್ನು ಸ್ಪರ್ಶಿಸಿ ಪಾವನನಾಗಿದ್ದೇನೆ. ಬಹಳ ಅದ್ಭುತ ಅನುಭವ ಇದು. ಈ ಅನುಭವ ಪದಗಳಲ್ಲಿ ವರ್ಣಿಸಲಸದಳ ಎಂದು ಹೇಳಿದ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಮಹಾಕುಂಭವನ್ನು ಸಮರ್ಪಕವಾಗಿ ಆಯೋಜಿಸಿದ್ದಕ್ಕೆ ಧನ್ಯವಾದ ಹೇಳಿದರು. ಗಂಗಾ ಮಾತೆಯ ಆಶೀರ್ವಾದಕ್ಕಿಂತ ಮಿಗಿಲಾದುದು ಇನ್ನೋಂದಿಲ್ಲ ಎಂದರು.

3 / 5
ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

ಮಹಾಕುಂಭ ಆಯೋಜನೆ ಮಾಡಿದ ಆಡಳಿತವರ್ಗ, ಪೊಲೀಸ್, ಸ್ವಚ್ಛತಾ ವಿಭಾಗ ಇವರಿಗೂ ಧನ್ಯವಾದ ಹೇಳುತ್ತೇನೆ. ಕಾರ್ಪೊರೇಟ್ ಸಂಸ್ಥೆಗಳಿಗೆ ಇದು ಒಂದು ಕೇಸ್ ಸ್ಟಡಿಯಾಗಿದೆ ಎಂದು ಗೌತಮ್ ಅದಾನಿ ಈ ಸಂದರ್ಭದಲ್ಲಿ ಹೇಳಿದರು.

4 / 5
ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

ಯುಪಿಯಲ್ಲಿ ದೊಡ್ಡ ಅವಕಾಶಗಳಿವೆ. ಇಲ್ಲಿನ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಅದಾನಿ ಗ್ರೂಪ್​ನಿಂದ ಈ ರಾಜ್ಯಕ್ಕೆ ಕೊಡುಗೆ ಇದೆ. ಯುಪಿಯಲ್ಲಿ ಹೂಡಿಕೆ ಮಾಡಲು ತಮ್ಮ ಸಂಸ್ಥೆ ಬದ್ಧವಾಗಿದೆ ಎಂದು ಅದಾನಿ ತಿಳಿಸಿದರು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ