AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dance: ನೃತ್ಯ ಮಾಡುವುದರಿಂದ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ನೃತ್ಯ (Dance) ನಿಮ್ಮ ದೇಹ ಮತ್ತು ಮನಸ್ಸು ಎರಡಕ್ಕೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ತಜ್ಞರ ಪ್ರಕಾರ, ಅರ್ಧ ಗಂಟೆ ನೃತ್ಯ ಮಾಡುವುದರಿಂದ 10,000 ಕ್ಯಾಲೊರಿಗಳನ್ನು ಬರ್ನ್ ಮಾಡಬಹುದು.

TV9 Web
| Edited By: sandhya thejappa|

Updated on: Dec 28, 2021 | 8:30 AM

Share
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಅಥವಾ ನಿಮ್ಮ ದೇಹವನ್ನು ಫಿಟ್ ಆಗಿ ಇಡಲು ಬಯಸಿದರೆ, ನೃತ್ಯವು ಇದಕ್ಕೆ ಅತ್ಯುತ್ತಮ ಮಾಧ್ಯಮವಾಗಿದೆ. ನೃತ್ಯವು ನಿಮ್ಮ ಕ್ಯಾಲೊರಿಗಳನ್ನು ವೇಗವಾಗಿ ಸುಡುತ್ತದೆ ಮತ್ತು ನಿಮ್ಮ ದೇಹವನ್ನು ಟೋನ್ ಮಾಡುವ ಮೂಲಕ ನಿಮ್ಮನ್ನು ಸದಾ ಆರೋಗ್ಯವಾಗಿಡುವಂತೆ ಮಾಡುತ್ತದೆ.

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ಅಥವಾ ನಿಮ್ಮ ದೇಹವನ್ನು ಫಿಟ್ ಆಗಿ ಇಡಲು ಬಯಸಿದರೆ, ನೃತ್ಯವು ಇದಕ್ಕೆ ಅತ್ಯುತ್ತಮ ಮಾಧ್ಯಮವಾಗಿದೆ. ನೃತ್ಯವು ನಿಮ್ಮ ಕ್ಯಾಲೊರಿಗಳನ್ನು ವೇಗವಾಗಿ ಸುಡುತ್ತದೆ ಮತ್ತು ನಿಮ್ಮ ದೇಹವನ್ನು ಟೋನ್ ಮಾಡುವ ಮೂಲಕ ನಿಮ್ಮನ್ನು ಸದಾ ಆರೋಗ್ಯವಾಗಿಡುವಂತೆ ಮಾಡುತ್ತದೆ.

1 / 5
 ನೃತ್ಯವು ನಿಮ್ಮ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ದೇಹದಲ್ಲಿ ನಮ್ಯತೆಯನ್ನು ತರುತ್ತದೆ. ಇದರಿಂದಾಗಿ ದೇಹದ ಯಾವುದೇ ಭಾಗದಲ್ಲಿ ಬಿಗಿತದ ಸಮಸ್ಯೆ ಇರುವುದಿಲ್ಲ.

ನೃತ್ಯವು ನಿಮ್ಮ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ದೇಹದಲ್ಲಿ ನಮ್ಯತೆಯನ್ನು ತರುತ್ತದೆ. ಇದರಿಂದಾಗಿ ದೇಹದ ಯಾವುದೇ ಭಾಗದಲ್ಲಿ ಬಿಗಿತದ ಸಮಸ್ಯೆ ಇರುವುದಿಲ್ಲ.

2 / 5
ನೃತ್ಯ ಮಾಡುವಾಗ ಅನೇಕ ರೀತಿಯ ಭಂಗಿಗಳನ್ನು ಮಾಡಲಾಗುತ್ತದೆ. ವಿಶೇಷವಾಗಿ ಕಥಕ್, ಭರತನಾಟ್ಯದಂತಹ ಶಾಸ್ತ್ರೀಯ ನೃತ್ಯದಲ್ಲಿ ಕಣ್ಣುಗಳು ಪ್ರದಕ್ಷಿಣಾಕಾರವಾಗಿ ಮತ್ತು ವಿರೋಧಿ ಪ್ರದಕ್ಷಿಣಾಕಾರವಾಗಿ ತಿರುಗುತ್ತಿರುವಾಗ ಉಸಿರನ್ನು ದೀರ್ಘವಾಗಿ ಹಿಡಿದಿಟ್ಟುಕೊಳ್ಳುವುದು, ಉಸಿರು ಬಿಡುವುದು, ದೀರ್ಘವಾದ ಉಸಿರನ್ನು ತೆಗೆದುಕೊಳ್ಳುವುದು ಮುಂತಾದ ಹಲವು ಹಂತಗಳಿವೆ. ಈ ಹಂತಗಳು ವ್ಯಾಯಾಮವಾಗಿ ಕಾರ್ಯನಿರ್ವಹಿಸುತ್ತವೆ. ಇದು ಉಸಿರಾಟದ ಕಾಯಿಲೆಗಳು ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಅದೇ ಸಮಯದಲ್ಲಿ, ಪಾದಗಳು ನಿರಂತರವಾಗಿ ಲಯದ ಪ್ರಕಾರ ಚಲಿಸುತ್ತವೆ. ಇದರಿಂದಾಗಿ ಕೀಲುಗಳಲ್ಲಿ ನೋವಿನ ಸಮಸ್ಯೆ ಇರುವುದಿಲ್ಲ ಮತ್ತು ಕಾಲುಗಳಲ್ಲಿ ವಕ್ರತೆ ಬರುವುದಿಲ್ಲ.

ನೃತ್ಯ ಮಾಡುವಾಗ ಅನೇಕ ರೀತಿಯ ಭಂಗಿಗಳನ್ನು ಮಾಡಲಾಗುತ್ತದೆ. ವಿಶೇಷವಾಗಿ ಕಥಕ್, ಭರತನಾಟ್ಯದಂತಹ ಶಾಸ್ತ್ರೀಯ ನೃತ್ಯದಲ್ಲಿ ಕಣ್ಣುಗಳು ಪ್ರದಕ್ಷಿಣಾಕಾರವಾಗಿ ಮತ್ತು ವಿರೋಧಿ ಪ್ರದಕ್ಷಿಣಾಕಾರವಾಗಿ ತಿರುಗುತ್ತಿರುವಾಗ ಉಸಿರನ್ನು ದೀರ್ಘವಾಗಿ ಹಿಡಿದಿಟ್ಟುಕೊಳ್ಳುವುದು, ಉಸಿರು ಬಿಡುವುದು, ದೀರ್ಘವಾದ ಉಸಿರನ್ನು ತೆಗೆದುಕೊಳ್ಳುವುದು ಮುಂತಾದ ಹಲವು ಹಂತಗಳಿವೆ. ಈ ಹಂತಗಳು ವ್ಯಾಯಾಮವಾಗಿ ಕಾರ್ಯನಿರ್ವಹಿಸುತ್ತವೆ. ಇದು ಉಸಿರಾಟದ ಕಾಯಿಲೆಗಳು ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಅದೇ ಸಮಯದಲ್ಲಿ, ಪಾದಗಳು ನಿರಂತರವಾಗಿ ಲಯದ ಪ್ರಕಾರ ಚಲಿಸುತ್ತವೆ. ಇದರಿಂದಾಗಿ ಕೀಲುಗಳಲ್ಲಿ ನೋವಿನ ಸಮಸ್ಯೆ ಇರುವುದಿಲ್ಲ ಮತ್ತು ಕಾಲುಗಳಲ್ಲಿ ವಕ್ರತೆ ಬರುವುದಿಲ್ಲ.

3 / 5
ನೃತ್ಯದ ಬಗ್ಗೆ ಒಲವು ಇರುವವರಲ್ಲಿ ಖಿನ್ನತೆ ದೂರವಾಗುತ್ತದೆ. ನೃತ್ಯವು ವ್ಯಕ್ತಿಯನ್ನು ರಂಜಿಸುತ್ತದೆ. ಆ ಮೂಲಕ ಜೀವನದಲ್ಲಿ ಒಂಟಿತನವನ್ನು ಹೋಗಲಾಡಿಸುತ್ತದೆ. ನೃತ್ಯ ಮಾಡುವ ವ್ಯಕ್ತಿಯು ಸಂತೋಷವಾಗಿರುತ್ತಾನೆ. ಇದರಿಂದಾಗಿ ಖಿನ್ನತೆ ಮತ್ತು ಒತ್ತಡದಿಂದ ಮುಕ್ತವಾಗಬಹುದು.

ನೃತ್ಯದ ಬಗ್ಗೆ ಒಲವು ಇರುವವರಲ್ಲಿ ಖಿನ್ನತೆ ದೂರವಾಗುತ್ತದೆ. ನೃತ್ಯವು ವ್ಯಕ್ತಿಯನ್ನು ರಂಜಿಸುತ್ತದೆ. ಆ ಮೂಲಕ ಜೀವನದಲ್ಲಿ ಒಂಟಿತನವನ್ನು ಹೋಗಲಾಡಿಸುತ್ತದೆ. ನೃತ್ಯ ಮಾಡುವ ವ್ಯಕ್ತಿಯು ಸಂತೋಷವಾಗಿರುತ್ತಾನೆ. ಇದರಿಂದಾಗಿ ಖಿನ್ನತೆ ಮತ್ತು ಒತ್ತಡದಿಂದ ಮುಕ್ತವಾಗಬಹುದು.

4 / 5
ಅಧಿಕ ಬಿಪಿಗೆ ಒತ್ತಡವೇ ಕಾರಣ ಎಂದು ನಂಬಲಾಗಿದೆ. ಆದರೆ ನೃತ್ಯವು ನಿಮ್ಮ ಒತ್ತಡವನ್ನು ನಿವಾರಿಸುತ್ತದೆ. ನೃತ್ಯ ಮಾಡುವುದರಿಂದ ಅಧಿಕ ಬಿಪಿ ಸಮಸ್ಯೆಯು ದೂರವಾಗುತ್ತದೆ. ಅದೇ ಸಮಯದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯದ ಆರೋಗ್ಯವನ್ನು ಇದು ಕಾಪಾಡುತ್ತದೆ.

ಅಧಿಕ ಬಿಪಿಗೆ ಒತ್ತಡವೇ ಕಾರಣ ಎಂದು ನಂಬಲಾಗಿದೆ. ಆದರೆ ನೃತ್ಯವು ನಿಮ್ಮ ಒತ್ತಡವನ್ನು ನಿವಾರಿಸುತ್ತದೆ. ನೃತ್ಯ ಮಾಡುವುದರಿಂದ ಅಧಿಕ ಬಿಪಿ ಸಮಸ್ಯೆಯು ದೂರವಾಗುತ್ತದೆ. ಅದೇ ಸಮಯದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯದ ಆರೋಗ್ಯವನ್ನು ಇದು ಕಾಪಾಡುತ್ತದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!