AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಡಗೆರೆ ಚಾಮುಂಡೇಶ್ವರಿ ದೇವಸ್ಥಾನ‌ದಲ್ಲಿ ಹೊಸ ಪ್ರಯೋಗ: ಮಕ್ಕಳಿಗಾಗಿ ಹೊಸ ಪ್ರಪಂಚ ಸೃಷ್ಟಿ

ಗೌಡಗೆರೆಯ ಶ್ರೀ ಚಾಮುಂಡೇಶ್ವರಿ ದೇವಾಲಯವು ಧಾರ್ಮಿಕ ಕೇಂದ್ರವಾಗಿರುವುದರ ಜೊತೆಗೆ, ಈಗ ಮಕ್ಕಳಿಗಾಗಿ ಶೈಕ್ಷಣಿಕ ಪ್ರದರ್ಶನವನ್ನು ಹೊಂದಿದೆ. ಮಂಗಳ ಗ್ರಹ, ಚಂದ್ರಲೋಕ, ರಾಕೆಟ್ ಉಡಾವಣೆ ಮುಂತಾದ ವಿಷಯಗಳನ್ನು ವೈಜ್ಞಾನಿಕವಾಗಿ ಪ್ರದರ್ಶಿಸಲಾಗಿದೆ. ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಈ ಪ್ರದರ್ಶನ ಮಕ್ಕಳಿಗೆ ಆಕರ್ಷಕವಾಗಲಿದೆ. ಹಿಂದೂ ಧರ್ಮದ ಕಲಾಕೃತಿಗಳನ್ನು ಒಳಗೊಂಡ ಈ ಪ್ರದರ್ಶನವು ಮಕ್ಕಳಿಗೆ ಉಚಿತವಾಗಿದೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Nov 26, 2024 | 6:42 PM

Share
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯ ರಾಮನಗರ ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ರಾಜ್ಯದ ಮೂಲೆ ಮೂಲೆಗಳಿಂದ ಜನ ಆ ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಧಾರ್ಮಿಕ ಕ್ಷೇತ್ರವಾಗಿದ್ದರೂ ಮಕ್ಕಳ ಜ್ಞಾನಕ್ಕೆ ನೆರವಾಗಲು ನಿಂತಿರುವ ಆ ಜಾಗದಲ್ಲಿ ಈಗ ಹೊಸ ಪ್ರಪಂಚವನ್ನೇ ಸೃಷ್ಟಿ ಮಾಡಲಾಗಿದೆ. ಆ ಕುರಿತಾದ ಫೋಟೋಗಳು ಇಲ್ಲಿವೆ. 

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯ ರಾಮನಗರ ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ರಾಜ್ಯದ ಮೂಲೆ ಮೂಲೆಗಳಿಂದ ಜನ ಆ ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಧಾರ್ಮಿಕ ಕ್ಷೇತ್ರವಾಗಿದ್ದರೂ ಮಕ್ಕಳ ಜ್ಞಾನಕ್ಕೆ ನೆರವಾಗಲು ನಿಂತಿರುವ ಆ ಜಾಗದಲ್ಲಿ ಈಗ ಹೊಸ ಪ್ರಪಂಚವನ್ನೇ ಸೃಷ್ಟಿ ಮಾಡಲಾಗಿದೆ. ಆ ಕುರಿತಾದ ಫೋಟೋಗಳು ಇಲ್ಲಿವೆ. 

1 / 6
ಗೌಡಗೆರೆಯ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ದಂಡು ಆಗಮಿಸುತ್ತಿದೆ. ಆ ದೇವಿಯ ಪವಾಡವೋ ಮಹಿಮೆಯೋ, ಭಕ್ತರು ಅಂದುಕೊಂಡಿದ್ದೆಲ್ಲಾ ಘಟಿಸುತ್ತದೆ ಎಂಬ ಪ್ರತೀತಿ ಇದೆ. ಹೀಗಾಗಿ ದಿನಗಳೆದಂತೆ ಭಕ್ತರ ದಂಡು ದುಪ್ಪಟ್ಟಾಗುತ್ತಿದೆ. 

ಗೌಡಗೆರೆಯ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರ ದಂಡು ಆಗಮಿಸುತ್ತಿದೆ. ಆ ದೇವಿಯ ಪವಾಡವೋ ಮಹಿಮೆಯೋ, ಭಕ್ತರು ಅಂದುಕೊಂಡಿದ್ದೆಲ್ಲಾ ಘಟಿಸುತ್ತದೆ ಎಂಬ ಪ್ರತೀತಿ ಇದೆ. ಹೀಗಾಗಿ ದಿನಗಳೆದಂತೆ ಭಕ್ತರ ದಂಡು ದುಪ್ಪಟ್ಟಾಗುತ್ತಿದೆ. 

2 / 6
ಹಾಗಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಏನಾದರು ಮಾಡಬೇಕು ಎಂಬ ಉದ್ದೇಶ ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿಗೂ ಇತ್ತು. ಹೀಗಾಗಿ ತಂದೆ, ತಾಯಿ ಜೊತೆ ಬರುವ ಮಕ್ಕಳಿಗೆ ಏನಾದ್ರೂ ಒಂದು ವಿಶೇಷ ಸಂಗತಿ ಮಾಡಬೇಕು ಎಂದುಕೊಂಡ ಮಲ್ಲೇಶ್ ಗುರೂಜಿ, ಚಾಮುಂಡೇಶ್ವರಿ ಪಾದದ ಕೆಳಗೆ ಒಂದು ಇಡೀ ಜಗತ್ತನ್ನೇ ಸೃಷ್ಟಿ ಮಾಡಿದ್ದಾರೆ.‌

ಹಾಗಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಏನಾದರು ಮಾಡಬೇಕು ಎಂಬ ಉದ್ದೇಶ ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿಗೂ ಇತ್ತು. ಹೀಗಾಗಿ ತಂದೆ, ತಾಯಿ ಜೊತೆ ಬರುವ ಮಕ್ಕಳಿಗೆ ಏನಾದ್ರೂ ಒಂದು ವಿಶೇಷ ಸಂಗತಿ ಮಾಡಬೇಕು ಎಂದುಕೊಂಡ ಮಲ್ಲೇಶ್ ಗುರೂಜಿ, ಚಾಮುಂಡೇಶ್ವರಿ ಪಾದದ ಕೆಳಗೆ ಒಂದು ಇಡೀ ಜಗತ್ತನ್ನೇ ಸೃಷ್ಟಿ ಮಾಡಿದ್ದಾರೆ.‌

3 / 6
ಮಕ್ಕಳಿಗೆ ಇದು ಶೈಕ್ಷಣಿಕ ಸ್ಥಳವಾಗಬೇಕು ಎಂಬ ದೃಷ್ಟಿಕೋನದಿಂದ ಧಾರ್ಮಿಕ ಕ್ಷೇತ್ರವಾಗಿದ್ರೂ ವೈಜ್ಞಾನಿಕ ರೀತಿ, ನೀತಿಗಳ ಮಾದರಿಯನ್ನು ದೇವಸ್ಥಾನದಲ್ಲಿ ಸೃಷ್ಡಿ ಮಾಡಲಾಗಿದೆ. ಮಂಗಳ ಗ್ರಹ, ಚಂದ್ರಲೋಕ, ರಾಕೇಟ್ ಉಡಾವಣೆಯಿಂದ ಹಿಡಿದು ಭೌಗೋಳಿಕವಾಗಿ ಮಕ್ಕಳು ಕಲಿಯಬಹುದಾದ ಹಲವು ಆಚಾರ ವಿಚಾರವಳನ್ನು ದೇವಸ್ಥಾನದಲ್ಲಿ ಅಳವಡಿಕೆ ಮಾಡಲಾಗಿದೆ.

ಮಕ್ಕಳಿಗೆ ಇದು ಶೈಕ್ಷಣಿಕ ಸ್ಥಳವಾಗಬೇಕು ಎಂಬ ದೃಷ್ಟಿಕೋನದಿಂದ ಧಾರ್ಮಿಕ ಕ್ಷೇತ್ರವಾಗಿದ್ರೂ ವೈಜ್ಞಾನಿಕ ರೀತಿ, ನೀತಿಗಳ ಮಾದರಿಯನ್ನು ದೇವಸ್ಥಾನದಲ್ಲಿ ಸೃಷ್ಡಿ ಮಾಡಲಾಗಿದೆ. ಮಂಗಳ ಗ್ರಹ, ಚಂದ್ರಲೋಕ, ರಾಕೇಟ್ ಉಡಾವಣೆಯಿಂದ ಹಿಡಿದು ಭೌಗೋಳಿಕವಾಗಿ ಮಕ್ಕಳು ಕಲಿಯಬಹುದಾದ ಹಲವು ಆಚಾರ ವಿಚಾರವಳನ್ನು ದೇವಸ್ಥಾನದಲ್ಲಿ ಅಳವಡಿಕೆ ಮಾಡಲಾಗಿದೆ.

4 / 6
ಡಿಸಂಬರ್ 1ರಂದು ಚಾಮುಂಡೇಶ್ವರಿ ದೇವಾಸ್ಥಾನದಲ್ಲಿ ಲಕ್ಷ ದೀಪೋತ್ಸವ ನಡೆಯಲಿದ್ದು, ಕೇರಳದ ತಂಡವೊಂದು ವಿಶೇಷವಾಗಿ ಈ ಕಾರ್ಯಕ್ರಮ ನಡೆಸಿಕೊಡಲು ಬರುತ್ತಿದೆ. ದೇಶದ ಹಲವು ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಸರ್ವ ರೀತಿಯ ತಯಾರಿಗಳನ್ನು ದೇವಸ್ಥಾನದಲ್ಲಿ ಮಾಡಿಕೊಂಡಿದ್ದು, ಪೋಷಕರ ಜೊತೆ ಬರುವ ಮಕ್ಕಳು ಖುಷಿಯಾಗಲು ಒಂದು ರೀತಿಯ ಎಕ್ಸಿಬಿಷನ್ ಇಲ್ಲಿ ತೆರೆದಂತಾಗಿದೆ.

ಡಿಸಂಬರ್ 1ರಂದು ಚಾಮುಂಡೇಶ್ವರಿ ದೇವಾಸ್ಥಾನದಲ್ಲಿ ಲಕ್ಷ ದೀಪೋತ್ಸವ ನಡೆಯಲಿದ್ದು, ಕೇರಳದ ತಂಡವೊಂದು ವಿಶೇಷವಾಗಿ ಈ ಕಾರ್ಯಕ್ರಮ ನಡೆಸಿಕೊಡಲು ಬರುತ್ತಿದೆ. ದೇಶದ ಹಲವು ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಸರ್ವ ರೀತಿಯ ತಯಾರಿಗಳನ್ನು ದೇವಸ್ಥಾನದಲ್ಲಿ ಮಾಡಿಕೊಂಡಿದ್ದು, ಪೋಷಕರ ಜೊತೆ ಬರುವ ಮಕ್ಕಳು ಖುಷಿಯಾಗಲು ಒಂದು ರೀತಿಯ ಎಕ್ಸಿಬಿಷನ್ ಇಲ್ಲಿ ತೆರೆದಂತಾಗಿದೆ.

5 / 6
ಅಲ್ಲದೇ ಇಡೀ ದೇವಾಸ್ಥಾನದಲ್ಲಿ ಹಿಂದೂ ದೇವರ ವಿಗ್ರಹವೂ ಸೇರಿದಂತೆ ಅನೇಕ ಕಲಾಕೃತಿಗಳನ್ನು ಪಠಾಣ್ ಎನ್ನುವವರು ಇದರ ಕೆಲಸ ಮಾಡಿದ್ದು, ಹಿಂದೂ ಧರ್ಮದ ಅನುಸಾರ ಕೆಲ ನಿಯಮಗಳನ್ನು ಪಾಲಿಸಿ ವಿಗ್ರಹಗಳ ನಿರ್ಮಾಣ ಮಾಡಿದ್ದಾರೆ. ವರ್ಷ ವರ್ಷ ನಡೆಯುವ ಲಕ್ಷ ದೀಪೋತ್ಸವದ ಪ್ರತಿ ವರ್ಷವೂ ವಿಶೇಷವಾದುದ್ದನ್ನು ಮಾಡುವ ಚಾಮುಂಡೇಶ್ವರಿ ದೇವಾಲಯ ಈ ಬಾರಿ ಶಾಶ್ವತವಾಗಿರುವಂತಹ ಅನೇಕ ಕಲಾಕೃತಿಗಳನ್ನು ನಿರ್ಮಿಸಿ ಮಕ್ಕಳಿಗೆ ಉಚಿತವಾಗಿ ನೋಡಲು ಅವಕಾಶ ಮಾಡಿಕೊಟ್ಟಿದ್ದಾರೆ.

ಅಲ್ಲದೇ ಇಡೀ ದೇವಾಸ್ಥಾನದಲ್ಲಿ ಹಿಂದೂ ದೇವರ ವಿಗ್ರಹವೂ ಸೇರಿದಂತೆ ಅನೇಕ ಕಲಾಕೃತಿಗಳನ್ನು ಪಠಾಣ್ ಎನ್ನುವವರು ಇದರ ಕೆಲಸ ಮಾಡಿದ್ದು, ಹಿಂದೂ ಧರ್ಮದ ಅನುಸಾರ ಕೆಲ ನಿಯಮಗಳನ್ನು ಪಾಲಿಸಿ ವಿಗ್ರಹಗಳ ನಿರ್ಮಾಣ ಮಾಡಿದ್ದಾರೆ. ವರ್ಷ ವರ್ಷ ನಡೆಯುವ ಲಕ್ಷ ದೀಪೋತ್ಸವದ ಪ್ರತಿ ವರ್ಷವೂ ವಿಶೇಷವಾದುದ್ದನ್ನು ಮಾಡುವ ಚಾಮುಂಡೇಶ್ವರಿ ದೇವಾಲಯ ಈ ಬಾರಿ ಶಾಶ್ವತವಾಗಿರುವಂತಹ ಅನೇಕ ಕಲಾಕೃತಿಗಳನ್ನು ನಿರ್ಮಿಸಿ ಮಕ್ಕಳಿಗೆ ಉಚಿತವಾಗಿ ನೋಡಲು ಅವಕಾಶ ಮಾಡಿಕೊಟ್ಟಿದ್ದಾರೆ.

6 / 6
Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್