AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಸುವುದು ಹೇಗೆ? ಧಾರವಾಡದಲ್ಲೊಂದು ಮಾದರಿ ಕಾರ್ಯಾಗಾರ

Eco-Friendly Ganesha: ಪಿಒಪಿ ಗಣೇಶ ವಿಗ್ರಹಗಳಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಕೆಲವ ಸಂಸ್ಥೆಗಳಿಂದ ಮನೆಗಳಲ್ಲಿಯೇ ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಹೇಗೆ ತಯಾರಿಸಬೇಕು ಎಂಬ ಕಾರ್ಯಾಗಾರವನ್ನು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದೆ. ಜನರು ಕೂಡ ಅಷ್ಟೇ ಆಸಕ್ತಿಯಿಂದ ಭಾಗಿಯಾಗಿದ್ದರು. ಇಲ್ಲಿವೆ ನೋಡಿ ಫೋಟೋಸ್​.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 22, 2026 | 6:38 PM

Share
ಗಣೇಶ ಚತುರ್ಥಿ

ಗಣೇಶ ಚತುರ್ಥಿ

1 / 7
ಬೆಂಗಳೂರಿನ ಆಪ್ತಿ ಫೈನ್ ಆರ್ಟ್ಸ್ ಹಾಗೂ ಧಾರವಾಡದ ಜೋಸಿ ಟ್ಯುಟೋರಿಯಲ್ ಸಂಸ್ಥೆಗಳು ಜಂಟಿಯಾಗಿ ಸಾರ್ವಜನಿಕರಿಗೆ ಮನೆಯಲ್ಲೇ ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಸುವ ಉಚಿತ ಕಾರ್ಯಾಗಾರವನ್ನು ಧಾರವಾಡದ ಮಾಳಮಡ್ಡಿಯಲ್ಲಿ ಆಯೋಜಿಸಿವೆ. ತಮ್ಮ ಕೈಗಳಿಂದಲೇ ಭಕ್ತಿಪೂರ್ವಕವಾಗಿ ಗಣೇಶನನ್ನು ರೂಪಿಸುವ ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರಿನ ಆಪ್ತಿ ಫೈನ್ ಆರ್ಟ್ಸ್ ಹಾಗೂ ಧಾರವಾಡದ ಜೋಸಿ ಟ್ಯುಟೋರಿಯಲ್ ಸಂಸ್ಥೆಗಳು ಜಂಟಿಯಾಗಿ ಸಾರ್ವಜನಿಕರಿಗೆ ಮನೆಯಲ್ಲೇ ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಸುವ ಉಚಿತ ಕಾರ್ಯಾಗಾರವನ್ನು ಧಾರವಾಡದ ಮಾಳಮಡ್ಡಿಯಲ್ಲಿ ಆಯೋಜಿಸಿವೆ. ತಮ್ಮ ಕೈಗಳಿಂದಲೇ ಭಕ್ತಿಪೂರ್ವಕವಾಗಿ ಗಣೇಶನನ್ನು ರೂಪಿಸುವ ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

2 / 7
ಕಾರ್ಯಾಗಾರದಲ್ಲಿ ಪಾಲ್ಗೊಂಡವರಿಗೆ ಮೊದಲು ನಾಲ್ಕು ಬಗೆಯ ಆಕರ್ಷಕ ಗಣೇಶ ಮೂರ್ತಿಗಳ ಮಾದರಿಗಳನ್ನು ತೋರಿಸಲಾಗುತ್ತದೆ. ಜನರಿಗೆ ತಮಗೆ ಇಷ್ಟವಾದ ರೂಪವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದ್ದು, ಅದಕ್ಕೆ ತಕ್ಕಂತೆ ಮೊದಲೇ ಹದಗೊಳಿಸಿ ಸಿದ್ಧವಾಗಿಟ್ಟಿರುವ ನೈಸರ್ಗಿಕ ಜೇಡಿಮಣ್ಣನ್ನು ವಿತರಿಸಿ ತಯಾರಿಕೆಯ ಮೊದಲ ಹಂತಕ್ಕೆ ಚಾಲನೆ ನೀಡಲಾಗುತ್ತದೆ.

ಕಾರ್ಯಾಗಾರದಲ್ಲಿ ಪಾಲ್ಗೊಂಡವರಿಗೆ ಮೊದಲು ನಾಲ್ಕು ಬಗೆಯ ಆಕರ್ಷಕ ಗಣೇಶ ಮೂರ್ತಿಗಳ ಮಾದರಿಗಳನ್ನು ತೋರಿಸಲಾಗುತ್ತದೆ. ಜನರಿಗೆ ತಮಗೆ ಇಷ್ಟವಾದ ರೂಪವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದ್ದು, ಅದಕ್ಕೆ ತಕ್ಕಂತೆ ಮೊದಲೇ ಹದಗೊಳಿಸಿ ಸಿದ್ಧವಾಗಿಟ್ಟಿರುವ ನೈಸರ್ಗಿಕ ಜೇಡಿಮಣ್ಣನ್ನು ವಿತರಿಸಿ ತಯಾರಿಕೆಯ ಮೊದಲ ಹಂತಕ್ಕೆ ಚಾಲನೆ ನೀಡಲಾಗುತ್ತದೆ.

3 / 7
ತರಬೇತಿ ನೀಡುವ ನುರಿತ ಕಲಾವಿದರು ಮಣ್ಣಿನಿಂದ ಗಣಪತಿಯ ಪೀಠ, ಹೊಟ್ಟೆ, ಮುಖ, ಸೊಂಡಿಲು, ಕಿವಿ ಹಾಗೂ ಆಯುಧಗಳನ್ನು ಅತ್ಯಂತ ಸರಳವಾಗಿ ಹೇಗೆ ರೂಪಿಸಬೇಕು ಎಂಬುದನ್ನು ಹಂತ ಹಂತವಾಗಿ ಪ್ರಾಯೋಗಿಕವಾಗಿ ಕಲಿಸಿಕೊಡುತ್ತಾರೆ. ಯಾವುದೇ ಜಟಿಲತೆಯಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಸುಲಭವಾಗಿ ಮೂರ್ತಿ ಕಡೆಯುವ ವಿಧಾನವನ್ನು ಇಲ್ಲಿ ತಿದ್ದಿ ತೀಡಲಾಗುತ್ತದೆ.

ತರಬೇತಿ ನೀಡುವ ನುರಿತ ಕಲಾವಿದರು ಮಣ್ಣಿನಿಂದ ಗಣಪತಿಯ ಪೀಠ, ಹೊಟ್ಟೆ, ಮುಖ, ಸೊಂಡಿಲು, ಕಿವಿ ಹಾಗೂ ಆಯುಧಗಳನ್ನು ಅತ್ಯಂತ ಸರಳವಾಗಿ ಹೇಗೆ ರೂಪಿಸಬೇಕು ಎಂಬುದನ್ನು ಹಂತ ಹಂತವಾಗಿ ಪ್ರಾಯೋಗಿಕವಾಗಿ ಕಲಿಸಿಕೊಡುತ್ತಾರೆ. ಯಾವುದೇ ಜಟಿಲತೆಯಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಸುಲಭವಾಗಿ ಮೂರ್ತಿ ಕಡೆಯುವ ವಿಧಾನವನ್ನು ಇಲ್ಲಿ ತಿದ್ದಿ ತೀಡಲಾಗುತ್ತದೆ.

4 / 7
ಕೈಗಳಿಂದ ಸುಂದರವಾಗಿ ಮೈದಳೆದ ಗಣಪತಿಯ ವಿಗ್ರಹಗಳಿಗೆ ಅಂತಿಮ ಸ್ಪರ್ಶ ನೀಡಿದ ಬಳಿಕ, ಅವು ಬಿರುಕು ಬಿಡದಂತೆ ನೆರಳಿನಲ್ಲಿ ನಿಧಾನವಾಗಿ ಒಣಗಿಸಲಾಗುತ್ತದೆ. ನೈಸರ್ಗಿಕ ಮಣ್ಣಿನಿಂದ ರೂಪುಗೊಂಡ ಈ ವಿಗ್ರಹಗಳು ಸಂಪೂರ್ಣವಾಗಿ ಗಟ್ಟಿಯಾಗುವವರೆಗೆ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಕಾಪಾಡಿಕೊಳ್ಳುವ ಸೂಕ್ಷ್ಮ ವಿಧಾನವನ್ನು ಇಲ್ಲಿ ತಿಳಿಸಿಕೊಡಲಾಗುತ್ತದೆ.

ಕೈಗಳಿಂದ ಸುಂದರವಾಗಿ ಮೈದಳೆದ ಗಣಪತಿಯ ವಿಗ್ರಹಗಳಿಗೆ ಅಂತಿಮ ಸ್ಪರ್ಶ ನೀಡಿದ ಬಳಿಕ, ಅವು ಬಿರುಕು ಬಿಡದಂತೆ ನೆರಳಿನಲ್ಲಿ ನಿಧಾನವಾಗಿ ಒಣಗಿಸಲಾಗುತ್ತದೆ. ನೈಸರ್ಗಿಕ ಮಣ್ಣಿನಿಂದ ರೂಪುಗೊಂಡ ಈ ವಿಗ್ರಹಗಳು ಸಂಪೂರ್ಣವಾಗಿ ಗಟ್ಟಿಯಾಗುವವರೆಗೆ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಕಾಪಾಡಿಕೊಳ್ಳುವ ಸೂಕ್ಷ್ಮ ವಿಧಾನವನ್ನು ಇಲ್ಲಿ ತಿಳಿಸಿಕೊಡಲಾಗುತ್ತದೆ.

5 / 7
ಈ ಕಾರ್ಯಾಗಾರದಲ್ಲಿ ತಯಾರಾಗುವ ವಿಗ್ರಹಗಳಿಗೆ ಯಾವುದೇ ಹಾನಿಕಾರಕ ರಾಸಾಯನಿಕ ಬಣ್ಣಗಳನ್ನು ಬಳಿಯುವುದಿಲ್ಲ. ನೈಸರ್ಗಿಕ ಮಣ್ಣಿನ ನೈಜ ಸೌಂದರ್ಯವೇ ವಿಗ್ರಹಕ್ಕೆ ದೈವಿಕ ಕಳೆಯನ್ನು ತುಂಬುತ್ತದೆ.

ಈ ಕಾರ್ಯಾಗಾರದಲ್ಲಿ ತಯಾರಾಗುವ ವಿಗ್ರಹಗಳಿಗೆ ಯಾವುದೇ ಹಾನಿಕಾರಕ ರಾಸಾಯನಿಕ ಬಣ್ಣಗಳನ್ನು ಬಳಿಯುವುದಿಲ್ಲ. ನೈಸರ್ಗಿಕ ಮಣ್ಣಿನ ನೈಜ ಸೌಂದರ್ಯವೇ ವಿಗ್ರಹಕ್ಕೆ ದೈವಿಕ ಕಳೆಯನ್ನು ತುಂಬುತ್ತದೆ.

6 / 7
ತಮ್ಮ ಕೈಯಾರೆ ಮಣ್ಣಿನಿಂದ ಮಾಡಿದ ಮುದ್ದಾದ ಗಣೇಶನನ್ನು ಭಕ್ತಿಯಿಂದ ಪೂಜಿಸಿ, ಮನೆಯಲ್ಲೇ ಸುಲಭವಾಗಿ ವಿಸರ್ಜಿಸುವ ಮೂಲಕ ಪರಿಸರ ಕಾಳಜಿಯ ಸಂದೇಶವನ್ನು ಸಾರಲು ಈ ಕಾರ್ಯಾಗಾರ ಸಾಕ್ಷಿಯಾಗಿದೆ.

ತಮ್ಮ ಕೈಯಾರೆ ಮಣ್ಣಿನಿಂದ ಮಾಡಿದ ಮುದ್ದಾದ ಗಣೇಶನನ್ನು ಭಕ್ತಿಯಿಂದ ಪೂಜಿಸಿ, ಮನೆಯಲ್ಲೇ ಸುಲಭವಾಗಿ ವಿಸರ್ಜಿಸುವ ಮೂಲಕ ಪರಿಸರ ಕಾಳಜಿಯ ಸಂದೇಶವನ್ನು ಸಾರಲು ಈ ಕಾರ್ಯಾಗಾರ ಸಾಕ್ಷಿಯಾಗಿದೆ.

7 / 7
Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!