AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರೂ ಮಾತಾಡ್ತಿದ್ದ ಆ ಕಾಲ ಬಂದೇ ಬಿಡ್ತು: ಆನ್​​ಲೈನ್​​​ನಲ್ಲೇ ನಡೆಯಿತು ನಿಶ್ಚಿತಾರ್ಥ

ಇತ್ತೀಚಿಗೆ ಎಲ್ಲವೂ ಆನ್​ಲೈನ್ (Online) ಮಯವಾಗಿ ಬಿಟ್ಟಿದೆ. ಊಟ, ಬಟ್ಟೆಯಿಂದ ಹಿಡಿದು ಎಲ್ಲವೂ ಕೂತಲ್ಲೇ ಆನ್​ಲೈನ್​ನಲ್ಲಿಯೇ ನಡೆಯುತ್ತೆ. ಹೀಗಾಗಿ ಮುಂದಿನ ದಿನಗಳಲ್ಲಿ ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ, ಮದುವೆ ಮಾಡುವ ಕಾಲ ಬರಹುದು ಎಂದು ಹಳ್ಳಿಗಳಲ್ಲಿ ಜನರು ಮಾತಾಡುತ್ತಿರುತ್ತಾರೆ. ಇದೀಗ ಆ ಕಾಲ ಬಂದೇ ಬಿಟ್ಟಿದೆ. ಹೌದು...ಕೆಲಸದ ಒತ್ತಡ ಮತ್ತು ರಜೆ (Leave) ಸಿಗದ ಕಾರಣ ವಿದೇಶದಲ್ಲಿರುವ ವರ ದೇಶಕ್ಕೆ ಬರಲಾಗದೇ ಆನ್‌ಲೈನ್ ವಿಡಿಯೋ ಕಾಲ್​​ನಲ್ಲೇ ಯುವಕ-ಯುವತಿಯ ನಿಶ್ಚಿತಾರ್ಥ (Engagement) ನೆರವೇರಿದೆ. ಅಚ್ಚರಿ ಅಂದ್ರೆ ಇದು ಬೇರೆ ದೇಶದಲ್ಲಿ ನಡೆದಿಲ್ಲ. ಬದಲಾಗಿ ಕರ್ನಾಟಕದಲ್ಲಿ. ಅಚ್ಚರಿ ಅನ್ನಿಸಿದರೂ ಸತ್ಯ.

ರಮೇಶ್ ಬಿ. ಜವಳಗೇರಾ
|

Updated on: Dec 16, 2025 | 9:45 PM

Share
ಜಗತ್ತು ಡಿಜಿಟಲ್ ಆಗುತ್ತಿದ್ದಂತೆಯೇ ಎಲ್ಲವೂ ಆನ್‌ಲೈನ್ ಮಯವಾಗಿದೆ. ಊಟ, ಶಾಪಿಂಗ್ ಹೀಗೆ ಎಲ್ಲವೂ ಆನ್‌ಲೈನ್‌ನಲ್ಲೇ ಆರ್ಡರ್ ಮಾಡುವ ಕಾಲವಿದು. ಇದು ಇಷ್ಟಕ್ಕೆ ಸೀಮಿತವಾಗದೇ ನಿಶ್ಚಿತಾರ್ಥ, ಮದುವೆಯೂ ಆನ್ಲೈನ್‌ಗೆ ಕಾಲಿಟ್ಟಿದೆ. ಮಾಗಡಿ (Magadi) ಮೂಲದ ಯುವಕ ಹಾಗೂ ಉಡುಪಿ ಮೂಲದ ಯುವತಿ ಆನ್ಲೈನ್‌ನಲ್ಲಿ ಎಂಗೇಜ್‌ಮೆಂಟ್ (Online Engagement) ಮಾಡಿಕೊಂಡಿರೋದು ಇದಕ್ಕೆ ಸಾಕ್ಷಿಯಾಗಿದೆ.

ಜಗತ್ತು ಡಿಜಿಟಲ್ ಆಗುತ್ತಿದ್ದಂತೆಯೇ ಎಲ್ಲವೂ ಆನ್‌ಲೈನ್ ಮಯವಾಗಿದೆ. ಊಟ, ಶಾಪಿಂಗ್ ಹೀಗೆ ಎಲ್ಲವೂ ಆನ್‌ಲೈನ್‌ನಲ್ಲೇ ಆರ್ಡರ್ ಮಾಡುವ ಕಾಲವಿದು. ಇದು ಇಷ್ಟಕ್ಕೆ ಸೀಮಿತವಾಗದೇ ನಿಶ್ಚಿತಾರ್ಥ, ಮದುವೆಯೂ ಆನ್ಲೈನ್‌ಗೆ ಕಾಲಿಟ್ಟಿದೆ. ಮಾಗಡಿ (Magadi) ಮೂಲದ ಯುವಕ ಹಾಗೂ ಉಡುಪಿ ಮೂಲದ ಯುವತಿ ಆನ್ಲೈನ್‌ನಲ್ಲಿ ಎಂಗೇಜ್‌ಮೆಂಟ್ (Online Engagement) ಮಾಡಿಕೊಂಡಿರೋದು ಇದಕ್ಕೆ ಸಾಕ್ಷಿಯಾಗಿದೆ.

1 / 7
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನ ಆನ್‌ಲೈನ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉಡುಪಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಈ ನಿಶ್ಚಿತಾರ್ಥ ನಡೆದಿದ್ದು, ವರನ ಅನುಪಸ್ಥಿತಿಯಲ್ಲಿ ಎರಡೂ ಕುಟುಂಬಗಳು ಈ ಕಾರ್ಯಕ್ರಮ ನೆರವೇರಿಸಿವೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನ ಆನ್‌ಲೈನ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಉಡುಪಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಈ ನಿಶ್ಚಿತಾರ್ಥ ನಡೆದಿದ್ದು, ವರನ ಅನುಪಸ್ಥಿತಿಯಲ್ಲಿ ಎರಡೂ ಕುಟುಂಬಗಳು ಈ ಕಾರ್ಯಕ್ರಮ ನೆರವೇರಿಸಿವೆ.

2 / 7
ಅಂದಹಾಗೆ ಬ್ಯಾಹ್ಮಣ ಸಂಪ್ರದಾಯದಂತೆ ನಿಶ್ಚಿತಾರ್ಥ ನೆರವೇರಿದೆ. ಆನ್ ಲೈನ್ ವಿಡಿಯೋ ಮೂಲಕವೇ ಯುವಕ-ಯುವತಿ ಇಬ್ಬರು ಉಂಗುರವನ್ನ ಕ್ಯಾಮೆರಾಗಳಿಗೆ ತೋರಿಸಿ ಎಂಗೇಜ್ಮೇಟ್ ‌ಮಾಡಿಕೊಂಡಿದ್ದಾರೆ.

ಅಂದಹಾಗೆ ಬ್ಯಾಹ್ಮಣ ಸಂಪ್ರದಾಯದಂತೆ ನಿಶ್ಚಿತಾರ್ಥ ನೆರವೇರಿದೆ. ಆನ್ ಲೈನ್ ವಿಡಿಯೋ ಮೂಲಕವೇ ಯುವಕ-ಯುವತಿ ಇಬ್ಬರು ಉಂಗುರವನ್ನ ಕ್ಯಾಮೆರಾಗಳಿಗೆ ತೋರಿಸಿ ಎಂಗೇಜ್ಮೇಟ್ ‌ಮಾಡಿಕೊಂಡಿದ್ದಾರೆ.

3 / 7
ಕ್ಯಾಮರಾಗೆ ಆರತಿ ಬೆಳಗಿ ಮಂತ್ರಾಕ್ಷತೆ ಹಾಕಿ ನೆರೆದಿದ್ದವರು ಶುಭ ಹಾರೈಸಿದ್ರು. ಇನ್ನು ಕೆನಡಾದ ಕಾಲಮಾನ 12 ಗಂಟೆ ವ್ಯತ್ಯಾಸವಿದ್ದು ಉಡುಪಿಯಲ್ಲಿ ಹಗಲು ಹಾಗೂ ಕೆನಡಾದಲ್ಲಿ ಮಧ್ಯರಾತ್ರಿ ವೇಳೆ ನಿಶ್ಚಿತಾರ್ಥ ನೆರವೇರಿದೆ.

ಕ್ಯಾಮರಾಗೆ ಆರತಿ ಬೆಳಗಿ ಮಂತ್ರಾಕ್ಷತೆ ಹಾಕಿ ನೆರೆದಿದ್ದವರು ಶುಭ ಹಾರೈಸಿದ್ರು. ಇನ್ನು ಕೆನಡಾದ ಕಾಲಮಾನ 12 ಗಂಟೆ ವ್ಯತ್ಯಾಸವಿದ್ದು ಉಡುಪಿಯಲ್ಲಿ ಹಗಲು ಹಾಗೂ ಕೆನಡಾದಲ್ಲಿ ಮಧ್ಯರಾತ್ರಿ ವೇಳೆ ನಿಶ್ಚಿತಾರ್ಥ ನೆರವೇರಿದೆ.

4 / 7
ಇಬ್ಬರ ವಿವಾಹ ಜನವರಿ 7 ಮತ್ತು 8 ರಂದು ಫಿಕ್ಸ್ ಆಗಿದೆ. ಹೀಗಾಗಿ ಇಬ್ಬರು ಮೊದಲಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ರು. ಆದರೆ ನಿಶ್ಚಿತಾರ್ಥಕ್ಕೆ ರಜೆ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಸಹಾ ಆನ್ ಲೈನ್ ವಿಡಿಯೋ ಮೂಲಕವೇ ಉಡುಪಿಯ ಸರಸ್ವತಿ ಸಭಾಭವನದಲ್ಲಿ ನೆರವೇರಿದೆ.

ಇಬ್ಬರ ವಿವಾಹ ಜನವರಿ 7 ಮತ್ತು 8 ರಂದು ಫಿಕ್ಸ್ ಆಗಿದೆ. ಹೀಗಾಗಿ ಇಬ್ಬರು ಮೊದಲಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ರು. ಆದರೆ ನಿಶ್ಚಿತಾರ್ಥಕ್ಕೆ ರಜೆ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಸಹಾ ಆನ್ ಲೈನ್ ವಿಡಿಯೋ ಮೂಲಕವೇ ಉಡುಪಿಯ ಸರಸ್ವತಿ ಸಭಾಭವನದಲ್ಲಿ ನೆರವೇರಿದೆ.

5 / 7
ಅಂದಹಾಗೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಭಾವಿ ಗ್ರಾಮದ ಶ್ರೀಧರ್ ಮೂರ್ತಿ ಹಾಗೂ ಗೌರಿ ಅವರ ಜೇಷ್ಠ ಪುತ್ರ ಸುಹಾಸ್, ಬೆಂಗಳೂರಿನಲ್ಲಿ ವ್ಯಾಸಂಗ ಮುಗಿಸಿ ಕಳೆದ ಕೆಲ ತಿಂಗಳಿಂದ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಅಪ್ಲಿಕೇಶನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಂದಹಾಗೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಭಾವಿ ಗ್ರಾಮದ ಶ್ರೀಧರ್ ಮೂರ್ತಿ ಹಾಗೂ ಗೌರಿ ಅವರ ಜೇಷ್ಠ ಪುತ್ರ ಸುಹಾಸ್, ಬೆಂಗಳೂರಿನಲ್ಲಿ ವ್ಯಾಸಂಗ ಮುಗಿಸಿ ಕಳೆದ ಕೆಲ ತಿಂಗಳಿಂದ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಅಪ್ಲಿಕೇಶನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

6 / 7
 ಇನ್ನು ಉಡುಪಿ ನಿವಾಸಿ ರವೀಂದ್ರ ರಾವ್ ಹಾಗಯು ಕಾತ್ಯಾಯಿನಿ ದಂಪತಿಗಳ ಜೇಷ್ಠ ಪುತ್ರು ಮೇಘಾ, ಮುಂಬೈನಾ ಬ್ಯಾಂಕ್ ವೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಇನ್ನು ಇಬ್ಬರು ಆನ್​​ಲೈನ್​​ ನಿಶ್ವಿತಾರ್ಥಕ್ಕೆ ಸಂಬಂಧಿಗಳು ಶುಭ ಹಾರೈಸಿದರು.

ಇನ್ನು ಉಡುಪಿ ನಿವಾಸಿ ರವೀಂದ್ರ ರಾವ್ ಹಾಗಯು ಕಾತ್ಯಾಯಿನಿ ದಂಪತಿಗಳ ಜೇಷ್ಠ ಪುತ್ರು ಮೇಘಾ, ಮುಂಬೈನಾ ಬ್ಯಾಂಕ್ ವೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಇನ್ನು ಬ್ರಾಹ್ಮಣ ಸಂಪ್ರದಾಯದಂತೆ ಎರಡೂ ಕುಟುಂಬಸ್ಥರು ನಿಶ್ಚಿತಾರ್ಥ ನೆರವೇರಿಸಿದ್ದು, ಎಲ್‌ಇಡಿ ಸ್ಕ್ರೀನ್‌ಗೆ ಆರತಿ ಬೆಳಗಿ ಮಂತ್ರಾಕ್ಷತೆ ಹಾಕಿ ವಧು, ವರನಿಗೆ ಹಿರಿಯರು ಶುಭ ಕೋರಿದ್ದಾರೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ