AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​ ರವಿ-ಅಪೂರ್ವಾ ಜೋಡಿಯ ‘ಪುರುಷೋತ್ತಮ’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ; ಶೀಘ್ರವೇ ಟ್ರೇಲರ್​

ಜಿಮ್ ರವಿ ಅವರನ್ನು ಸಿನಿಮಾ ಕ್ಷೇತ್ರ ಆಕರ್ಷಿಸಿದೆ. ಹಾಗಾಗಿ ಅವರು ‘ಪುರುಷೋತ್ತಮ’ ಚಿತ್ರದಲ್ಲಿ ಹೀರೋ ಆಗಿದ್ದಾರೆ. ಅವರಿಗೆ ನಟಿ ಅಪೂರ್ವಾ ಜೋಡಿ ಆಗಿದ್ದಾರೆ.

TV9 Web
| Edited By: |

Updated on: Apr 01, 2022 | 7:15 AM

Share
ಖ್ಯಾತ ಬಾಡಿ ಬಿಲ್ಡರ್​ ಜಿಮ್ ರವಿ ಅವರು ಮೊದಲ ಬಾರಿಗೆ ನಾಯಕನಾಗಿ ನಟಿಸಿದ ಸಿನಿಮಾ ‘ಪುರುಷೋತ್ತಮ’. ಈ ಸಿನಿಮಾವನ್ನು ಅವರೇ ನಿರ್ಮಾಣ ಮಾಡಿದ್ದಾರೆ. ಬಿಡುಗಡೆಗೆ ಸಿದ್ಧವಾಗಿರುವ ಈ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿದೆ. ಯುಎ ಪ್ರಮಾಣ ಪತ್ರ ಪಡೆದುಕೊಂಡಿರುವುದಕ್ಕೆ ಚಿತ್ರತಂಡಕ್ಕೆ ಖುಷಿ ಇದೆ. ಆದಷ್ಟು ಬೇಗ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Gym Ravi and Apoorva starrer Purushottama movie gets UA certificate from Censor Board

1 / 6
ಈಗಾಗಲೇ ಈ ಸಿನಿಮಾವನ್ನು ಕೆಲವರು ನೋಡಿದ್ದಾರೆ. ತಂತ್ರಜ್ಞರು, ಲ್ಯಾಬ್ ಸಹಾಯಕರು, ವಿತರಕರು ಮತ್ತು ಕೆಲವು ಕ್ರೀಡಾ ವಲಯದವರಿಗೆ ‘ಪುರುಷೋತ್ತಮ’ ಚಿತ್ರವನ್ನು ತೋರಿಸಲಾಗಿದೆ. ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿರುವುದರಿಂದ ಈ ಚಿತ್ರತಂಡದ ಆತ್ಮವಿಶ್ವಾಸ ಹೆಚ್ಚಿದೆ. ನೋಡಿದವರಿಂದ ಇದೊಂದು ಸಾಮಾಜಿಕ ಕಳಕಳಿಯ ಚಿತ್ರವೆಂದು ಪ್ರಶಂಸೆ ಸಿಕ್ಕಿದೆ.

Gym Ravi and Apoorva starrer Purushottama movie gets UA certificate from Censor Board

2 / 6
ಏಪ್ರಿಲ್ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಚಿತ್ರದಲ್ಲಿ ನಾಯಕ ಜಿಮ್​ ರವಿ ಅವರದ್ದು ಲಾಯರ್ ಪಾತ್ರ. ಈ ಚಿತ್ರದ ‘ಸಂಸಾರ ಅಂದ್ಮಲೆ..’ ಹಾಡು ಯೂಟ್ಯೂಬ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಟ್ರೇಲರ್​ಗೆ ಇದಕ್ಕಿಂತಲೂ ಉತ್ತಮ ರೆಸ್ಪಾನ್ಸ್​ ಸಿಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

ಏಪ್ರಿಲ್ ಎರಡನೇ ವಾರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಈ ಚಿತ್ರದಲ್ಲಿ ನಾಯಕ ಜಿಮ್​ ರವಿ ಅವರದ್ದು ಲಾಯರ್ ಪಾತ್ರ. ಈ ಚಿತ್ರದ ‘ಸಂಸಾರ ಅಂದ್ಮಲೆ..’ ಹಾಡು ಯೂಟ್ಯೂಬ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಟ್ರೇಲರ್​ಗೆ ಇದಕ್ಕಿಂತಲೂ ಉತ್ತಮ ರೆಸ್ಪಾನ್ಸ್​ ಸಿಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

3 / 6
ಈ ಹಿಂದೆ ‘ದಿಲ್ದಾರ್​’ ಮತ್ತು ‘ನಾನು ನಮ್ಮುಡ್ಗಿ ಖರ್ಚ್‌ಗೊಂದು ಮಾಫಿಯ’ ಚಿತ್ರಗಳನ್ನು ನಿರ್ದೆಶನ ಮಾಡಿ ಅನುಭವ ಹೊಂದಿರುವ ಅಮರನಾಥ್ ಎಸ್.ವಿ. ಅವರು ‘ಪುರುಷೋತ್ತಮ’ ಸಿನಿಮಾಗೆ ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ.

ಈ ಹಿಂದೆ ‘ದಿಲ್ದಾರ್​’ ಮತ್ತು ‘ನಾನು ನಮ್ಮುಡ್ಗಿ ಖರ್ಚ್‌ಗೊಂದು ಮಾಫಿಯ’ ಚಿತ್ರಗಳನ್ನು ನಿರ್ದೆಶನ ಮಾಡಿ ಅನುಭವ ಹೊಂದಿರುವ ಅಮರನಾಥ್ ಎಸ್.ವಿ. ಅವರು ‘ಪುರುಷೋತ್ತಮ’ ಸಿನಿಮಾಗೆ ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ಅಪೂರ್ವಾ ನಟಿಸಿದ್ದಾರೆ.

4 / 6
ಅಪೂರ್ವಾ, ಜಿಮ್​ ರವಿ ಮಾತ್ರವಲ್ಲದೇ ಎ.ವಿ. ಹರೀಶ್, ಮೈಸೂರು ಪಭು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಡುಗಳಿಗೆ ಆನಂದ್ ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ಅಮರನಾಥ್ ಎಸ್.ವಿ. ಸಾಹಿತ್ಯ ಬರೆದಿದ್ದು, ಶ್ರೀಧರ್‌ ವಿ. ಸಂಭ್ರಮ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಅಪೂರ್ವಾ, ಜಿಮ್​ ರವಿ ಮಾತ್ರವಲ್ಲದೇ ಎ.ವಿ. ಹರೀಶ್, ಮೈಸೂರು ಪಭು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಡುಗಳಿಗೆ ಆನಂದ್ ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ಅಮರನಾಥ್ ಎಸ್.ವಿ. ಸಾಹಿತ್ಯ ಬರೆದಿದ್ದು, ಶ್ರೀಧರ್‌ ವಿ. ಸಂಭ್ರಮ್ ಸಂಗೀತ ನಿರ್ದೇಶನ ಮಾಡಿದ್ದಾರೆ.

5 / 6
‘ಪುರುಷೋತ್ತಮ’ ಸಿನಿಮಾಗೆ ಕುಮಾರ್ ಎಂ. ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್ ಕಿಟ್ಟು ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಕಲೈ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೇ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ.

‘ಪುರುಷೋತ್ತಮ’ ಸಿನಿಮಾಗೆ ಕುಮಾರ್ ಎಂ. ಅವರು ಛಾಯಾಗ್ರಹಣ ಮಾಡಿದ್ದಾರೆ. ಅರ್ಜುನ್ ಕಿಟ್ಟು ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಕಲೈ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಮೇ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ.

6 / 6
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ