AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷ ಕಳೆದರೂ ಇಲ್ಲಿ ದೀಪ ಆರಲ್ಲ, ಹೂ ಬಾಡಲ್ಲ; ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

Hasanamba Temple: ವರ್ಷದ ಬಳಿಕ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್ ಮಾಡಲಾಗಿದೆ. ನಾಳೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ 12 ದಿನ ಬೆಳಗ್ಗೆ 6ರಿಂದ ಹಾಸನಾಂಬೆ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಬರುವ ಭಕ್ತರಿಗೆ ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಮಂಜುನಾಥ ಕೆಬಿ
| Edited By: |

Updated on: Nov 02, 2023 | 12:51 PM

Share
ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ, ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಹಾಸನಾಂಬೆ ನೋಡುವ ಭಾಗ್ಯ ಮತ್ತೆ ಕೂಡಿ ಬಂದಿದೆ. ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್​.ರಾಜಣ್ಣ ಉಪಸ್ಥಿತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ  ಅಪರಾಹ್ನ 12 ಗಂಟೆ 23  ನಿಮಿಷ ಕ್ಕೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಮಾಡಲಾಗಿದೆ.​​​

ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ, ವರ್ಷಕ್ಕೊಮ್ಮೆ ದರ್ಶನ ಕರುಣಿಸೋ ಹಾಸನಾಂಬೆ ನೋಡುವ ಭಾಗ್ಯ ಮತ್ತೆ ಕೂಡಿ ಬಂದಿದೆ. ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್​.ರಾಜಣ್ಣ ಉಪಸ್ಥಿತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಪರಾಹ್ನ 12 ಗಂಟೆ 23 ನಿಮಿಷ ಕ್ಕೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಮಾಡಲಾಗಿದೆ.​​​

1 / 7
ಹೊರಗೆ ಕದಳಿ ಕಡಿಯುತ್ತಲೆ ಒಳಗೆ ಅರ್ಚಕರು ಬಾಗಿಲು ತೆರೆದರು. ಗಣ್ಯರು ಗರ್ಭಗುಡಿಯ ಒಳಗೆ ಆರದ ಜ್ಯೋತಿ ಕಣ್ತುಂಬಿಕೊಂಡ‌ರು. ವರ್ಷದ ಹಿಂದೆ ಹಚ್ಚಿಟ್ಟ ದೀಪ ಆರೋದಿಲ್ಲ, ಹೂ ಬಾಡಲ್ಲವೆಂಬ ನಂಬಿಕೆಯಂತೆ ದೀಪ ಉರಿಯುತ್ತಿತ್ತು, ಹೂ ಘಮಿಸುತ್ತಿತ್ತು.

ಹೊರಗೆ ಕದಳಿ ಕಡಿಯುತ್ತಲೆ ಒಳಗೆ ಅರ್ಚಕರು ಬಾಗಿಲು ತೆರೆದರು. ಗಣ್ಯರು ಗರ್ಭಗುಡಿಯ ಒಳಗೆ ಆರದ ಜ್ಯೋತಿ ಕಣ್ತುಂಬಿಕೊಂಡ‌ರು. ವರ್ಷದ ಹಿಂದೆ ಹಚ್ಚಿಟ್ಟ ದೀಪ ಆರೋದಿಲ್ಲ, ಹೂ ಬಾಡಲ್ಲವೆಂಬ ನಂಬಿಕೆಯಂತೆ ದೀಪ ಉರಿಯುತ್ತಿತ್ತು, ಹೂ ಘಮಿಸುತ್ತಿತ್ತು.

2 / 7
ನಾಳೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ 12 ದಿನ ಬೆಳಗ್ಗೆ 6ರಿಂದ ಹಾಸನಾಂಬೆ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಬರುವ ಭಕ್ತರಿಗೆ ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ನಾಳೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ 12 ದಿನ ಬೆಳಗ್ಗೆ 6ರಿಂದ ಹಾಸನಾಂಬೆ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹಾಸನಾಂಬೆ ದರ್ಶನ ಪಡೆಯಲು ಬರುವ ಭಕ್ತರಿಗೆ ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

3 / 7
14 ದಿನ ದೇವಿ ದರ್ಶನ ನೀಡಲಿದ್ದು, ಹಾಸನಾಂಬೆ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ವಿವಿಧ ಬಗೆಯ ಹೂಗಳು.. ಕಬ್ಬು, ಜೋಳ, ತೆಂಗಿನ ಕಾಯಿಗಳಿಂದ ದೇಗುಲ ಸಿಂಗಾರಗೊಂಡಿದೆ. ಭಕ್ತರು ಸಾಲಾಗಿ ಬರಲು ಸಕಲ ಸಿದ್ಧತೆ ಮಾಡಲಾಗಿದೆ. ನಾಳೆಯಿಂದ ತಾಯಿ ಹಾಸನಾಂಬೆ ತನ್ನ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

14 ದಿನ ದೇವಿ ದರ್ಶನ ನೀಡಲಿದ್ದು, ಹಾಸನಾಂಬೆ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ವಿವಿಧ ಬಗೆಯ ಹೂಗಳು.. ಕಬ್ಬು, ಜೋಳ, ತೆಂಗಿನ ಕಾಯಿಗಳಿಂದ ದೇಗುಲ ಸಿಂಗಾರಗೊಂಡಿದೆ. ಭಕ್ತರು ಸಾಲಾಗಿ ಬರಲು ಸಕಲ ಸಿದ್ಧತೆ ಮಾಡಲಾಗಿದೆ. ನಾಳೆಯಿಂದ ತಾಯಿ ಹಾಸನಾಂಬೆ ತನ್ನ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

4 / 7
ಹಾಸನಾಂಬೆ ಸನ್ನಿಧಿ ಬಗೆಬಗೆಯ ಪುಷ್ಪಾಲಂಕಾರದೊಂದಿಗೆ ಕಂಗೊಳಿಸುತ್ತಿದೆ. ವಿದ್ಯುತ್ ದೀಪಾಲಂಕಾರಗಳು ಮೆರುಗು ಹೆಚ್ಚಿಸಿವೆ. 1 ವರ್ಷದ ಬಳಿಕ ಹಾಸನಾಂಬೆಯ ದರ್ಶನ ಮಾಡ್ತೀವಿ ಅನ್ನೋ ಖುಷಿ ಮನೆ ಮಾಡಿದೆ. ಇಂದಿನಿಂದ 14 ದಿನ ಹಾಸನಾಂಬೆಯ ಉತ್ಸವ ನಡೆಯಲಿದೆ.

ಹಾಸನಾಂಬೆ ಸನ್ನಿಧಿ ಬಗೆಬಗೆಯ ಪುಷ್ಪಾಲಂಕಾರದೊಂದಿಗೆ ಕಂಗೊಳಿಸುತ್ತಿದೆ. ವಿದ್ಯುತ್ ದೀಪಾಲಂಕಾರಗಳು ಮೆರುಗು ಹೆಚ್ಚಿಸಿವೆ. 1 ವರ್ಷದ ಬಳಿಕ ಹಾಸನಾಂಬೆಯ ದರ್ಶನ ಮಾಡ್ತೀವಿ ಅನ್ನೋ ಖುಷಿ ಮನೆ ಮಾಡಿದೆ. ಇಂದಿನಿಂದ 14 ದಿನ ಹಾಸನಾಂಬೆಯ ಉತ್ಸವ ನಡೆಯಲಿದೆ.

5 / 7
ಈ ಬಾರಿ ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸೋ ನಿರೀಕ್ಷೆ ಇದೆ. ಸುಮಾರು 10 ಕಿಲೋ ಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಈ ಬಾರಿ VIP, VVIP, ವಿಶೇಷ ನೇರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿ ಶಕ್ತಿ ಯೋಜನೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸೋ ನಿರೀಕ್ಷೆ ಇದೆ. ಸುಮಾರು 10 ಕಿಲೋ ಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಈ ಬಾರಿ VIP, VVIP, ವಿಶೇಷ ನೇರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

6 / 7
ಭಕ್ತರ ಅನುಕೂಲಕ್ಕಾಗಿ ಕ್ಯೂ ಆರ್ ಕೋಡ್ ವ್ಯವಸ್ಥೆ, ಕಾಣಿಕೆ ಹಾಕಲು ಇ ಹುಂಡಿಯನ್ನ ಸಹಾ ವ್ಯವಸ್ಥೆ ಮಾಡಲಾಗಿದೆ. ಇನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ರಂಗೋಲಿ ಸ್ಪರ್ಧೆ, ಹೆಲಿ ಟೂರಿಸಂ ವ್ಯವಸ್ಥೆಯೂ ಇದೆ. ಇಂದು ಮೊದಲ ದಿನವಾಗಿದ್ದು, ಸಾರ್ವಜನಿಕರಿಗೆ ದೇವಿಯ ದರ್ಶನ ಇರಲ್ಲ.

ಭಕ್ತರ ಅನುಕೂಲಕ್ಕಾಗಿ ಕ್ಯೂ ಆರ್ ಕೋಡ್ ವ್ಯವಸ್ಥೆ, ಕಾಣಿಕೆ ಹಾಕಲು ಇ ಹುಂಡಿಯನ್ನ ಸಹಾ ವ್ಯವಸ್ಥೆ ಮಾಡಲಾಗಿದೆ. ಇನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ರಂಗೋಲಿ ಸ್ಪರ್ಧೆ, ಹೆಲಿ ಟೂರಿಸಂ ವ್ಯವಸ್ಥೆಯೂ ಇದೆ. ಇಂದು ಮೊದಲ ದಿನವಾಗಿದ್ದು, ಸಾರ್ವಜನಿಕರಿಗೆ ದೇವಿಯ ದರ್ಶನ ಇರಲ್ಲ.

7 / 7
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?