AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಈ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಇದಾದ ಬಳಿಕ ಈಗ ಮತ್ತೆ ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂಕುಸಿತವಾಗಿದೆ. ಇದರಿಂದ ಬೆಂಗಳೂರಿನಿಂದ ಮಂಗಳೂರು ಮತ್ತು ಮುರುಡೇಶ್ವರ ರೈಲು ಸಂಪರ್ಕ ಬಂದ್​ ಆಗಿದೆ.

ಮಂಜುನಾಥ ಕೆಬಿ
| Edited By: ವಿವೇಕ ಬಿರಾದಾರ|

Updated on:Aug 10, 2024 | 1:01 PM

Share
Hassan Landslide: Bengaluru-Mangaluru, Murudeshwar train cancel Kannada News

ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್​​ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ.

1 / 5
Hassan Landslide: Bengaluru-Mangaluru, Murudeshwar train cancel Kannada News

ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್​ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ.

2 / 5
Hassan Landslide: Bengaluru-Mangaluru, Murudeshwar train cancel Kannada News

ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದೆ. ರೈಲುಗಳು ದಿಢೀರ್ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು. ಸಾವಿರಾರು ಪ್ರಯಾಣಿಕರು ಬೆಳಗಿನ ಜಾವದವರೆಗೆ ರೈಲಿನಲ್ಲೇ ಕಳೆದರು. ಬೆಳಗ್ಗೆ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ವಾಹನಗಳ ವ್ಯವಸ್ಥೆ ಮಾಡಿತು.

3 / 5
Hassan Landslide: Bengaluru-Mangaluru, Murudeshwar train cancel Kannada News

ರೈಲುಗಳ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲು ಬಿಟ್ಟು ಬಸ್​ಗಳತ್ತ ಮುಖ ಮಾಡಿದ್ದಾರೆ. ಬಸ್​​ನಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

4 / 5
Hassan Landslide: Bengaluru-Mangaluru, Murudeshwar train cancel Kannada News

ಸಕಲೇಶಪುರ ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿತ್ತು. ಈ ಸಂದರ್ಭದಲ್ಲೂ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದಾಗಿತ್ತು.

5 / 5

Published On - 10:06 am, Sat, 10 August 24

Manjunath KB
Manjunath KB
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!