- Kannada News Photo gallery Hassan Simple marriage: new Couple gave Water Purifiers to 26 schools with the remaining money, taja suddi
ಸರಳ ಮದುವೆ: ಉಳಿದ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ ನವಜೋಡಿ
ಹಾಸನದ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಶಿವಕುಮಾರ್ ಮತ್ತು ಮಂಡ್ಯದ ಸಂಗೀತಾ ಅವರು ಸರಳ ವಿವಾಹದಿಂದ 5 ಲಕ್ಷ ರೂಪಾಯಿ ಉಳಿಸಿ, 26 ಶಾಲೆಗಳಿಗೆ ಶುದ್ಧ ನೀರಿನ ಯಂತ್ರಗಳನ್ನು ದಾನ ಮಾಡಿದ್ದಾರೆ. ಹೊ.ತಿ.ಹುಚ್ಚಪ್ಪ ಅವರ ಪ್ರೇರಣೆಯಿಂದ ಈ ಕಾರ್ಯ ಮಾಡಿದ್ದಾರೆ ಎಂದು ನವಜೋಡಿ ತಿಳಿಸಿದ್ದಾರೆ. ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Updated on: Nov 13, 2024 | 6:39 PM
Share

ಅತ್ಯಂತ ಅದ್ದೂರಿ ಮತ್ತು ಆಡಂಭರದ ಈ ಕಾಲದಲ್ಲಿ ಇಲ್ಲೊಂದು ಜೋಡಿ ಸರಳ ಮದುವೆಯಾಗಿದ್ದಾರೆ. ಜೊತೆಗೆ ತಮಗೆ ಬಂದ ಹಣದಿಂದ ವಿಷೇಶ ಕೊಡುಗೆ ಕೂಡ ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಇಂಜಿನಿಯರ್ ಆಗಿರುವ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11ರಂದು ಸರಳ ವಿವಾಹವಾಗಿದ್ದಾರೆ. ಆ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ್ದಾರೆ.

ಈ ನವಜೋಡಿ ಉಳಿಸಿದ 5 ಲಕ್ಷಕ್ಕೂ ಹೆಚ್ಚಿನ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ್ದಾರೆ. ಆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಕೆಲಸ ಮಾಡಲು ನವಜೋಡಿಗೆ ರೈತಪರ ಹೋರಾಟಗಾರರಾದ ತಾತ ಹೊ.ತಿ.ಹುಚ್ಚಪ್ಪ ಅವರು ಪ್ರೇರಣೆ ಎಂದಿದ್ದಾರೆ.

ಹೊನ್ನವಳ್ಳಿ ಗ್ರಾಮದಲ್ಲಿ ಹೊ.ತಿ.ಹುಚ್ಚಪ್ಪ ತಾತ ದತ್ತು ಪಡೆದಿದ್ದ ಶಾಲೆ ಸೇರಿದಂತೆ ತಾಲೂಕಿನ ಕಸಬ ಹೋಬಲಿಯ 26 ಶಾಲೆಗಳಿಗೆ ಉಚಿತವಾಗಿ ಶುದ್ಧ ನೀರಿನ ಯಂತ್ರವನ್ನು ನೀಡಿದ್ದಾರೆ.
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್ನಲ್ಲೇ ಭೈರತಿ ಬಸವರಾಜ್ರನ್ನ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ
ಕಾಫಿ ಬಿಲ್ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ