- Kannada News Photo gallery Hassan Summer Heat: Belur Halebidu Tourists Struggle; resort to umbrellas and hats
ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ
ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್.
Updated on: Apr 26, 2026 | 3:40 PM
Share

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.

ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.

ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.

ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.

Tourist Cap 5

ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.
Related Photo Gallery
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ ಕೋರೆ ಸಲಗದ ಬಿಂದಾಸ್ ವಾಕ್!



