ಹಾಸನ: ಸಕಲೇಶಪುರದ ಹಾರ್ಲೇ ಎಸ್ಟೇಟ್ ಬಳಿ ಭಯಾನಕ ಭೂ ಕುಸಿತ, ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

Edited By:

Updated on: Jul 30, 2024 | 10:18 AM

ಹಾಸನ, ಜುಲೈ 30: ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್​ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

1 / 5
ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್​​ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.

ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್​​ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.

2 / 5

ಹಾಸನ ಹಾಸನ ಜಿಲ್ಲೆಯ ಹಲವೆಡೆ ಸೋಮವಾರ ಸಂಜೆಯಿಂದಲೇ ಭಾರೀ‌ ಮಳೆಯಾಗುತ್ತಿದೆ. ಆದರೂ ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿಲ್ಲ. ಸಕಲೇಶಪುರ ತಾಲ್ಲೂಕಿನ ಹಲವು ಕಡೆ ಸಂಪರ್ಕ ಕಡಿತಗೊಂಡಿದೆ.

3 / 5

ಸಕಲೇಶಪುರ ತಾಲ್ಲೂಕಿನ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿ ಅವಾಂತರ ಸೃಷ್ಟಿಯಾಗಿದೆ. ದಾರಿಗಳೇ ಜಲಾವೃತವಾಗಿ ಜನರ ಆತಂಕ ಹೆಚ್ಚಾಗಿದೆ. ಜನರ ಪರದಾಟದ ನಡುವೆಯೂ ಜಿಲ್ಲಾಡಳಿತ ರಜೆ ನೀಡದಿರುವುದು ಅಚ್ಚರಿಗೆ ಕಾರಣವಾಗಿದೆ. ಭಾರಿ ಮಳೆಯ ನಡುವೆ ಶಾಲೆಗಳಿಗೆ ತೆರಳಲು ವಿದ್ಯಾರ್ಥಿಗಳು, ಶಿಕ್ಷಕರು ಪರದಾಡುವಂತಾಗಿದೆ.

4 / 5

ಹಾಸನ ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಬಿ ಹರಿಯುತ್ತಿರುವ ನದಿ ತೊರೆಗಳನ್ನು ಹಾದುಕೊಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಹೋಗಬೇಕಾಗಿದೆ.

5 / 5

ಮಳೆಗೆ ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಮುಳುಗಡೆ ಹಿನ್ನೆಲೆ ಕೆಲ ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುತ್ತಿದ್ದಾರೆ.

Loading...
Unable to load recommendations.
Follow Us