HD Deve Gowda Birthday: ಪ್ರಧಾನಿಯಾದ ಏಕೈಕ ಕನ್ನಡಿಗ ಹೆಚ್​ಡಿ ದೇವೇಗೌಡರ ಅಪರೂಪದ ಚಿತ್ರಗಳು

ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ದೇವೇಗೌಡರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ.

| Updated By: ಆಯೇಷಾ ಬಾನು

Updated on: May 18, 2023 | 8:41 AM

ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ದೇವೇಗೌಡರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. 1996 ರಿಂದ 97 ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ಹಾಗೂ 1994 ರಿಂದ 96 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿರುವ ಇವರು ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.

ಭಾರತದ 11 ನೇ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ದೇವೇಗೌಡರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. 1996 ರಿಂದ 97 ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿ ಹಾಗೂ 1994 ರಿಂದ 96 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿರುವ ಇವರು ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.

1 / 10
1933ರ ಮೇ 18ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಹೆಚ್​ಡಿಡಿ 20 ವರ್ಷದ ಯುವಕನಾಗಿದ್ದಾಗಲೇ ರಾಜಕಾರಣಕ್ಕೆ ಧುಮುಕಿದರು. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಸೇರಿದ್ದರು.

1933ರ ಮೇ 18ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಹೆಚ್​ಡಿಡಿ 20 ವರ್ಷದ ಯುವಕನಾಗಿದ್ದಾಗಲೇ ರಾಜಕಾರಣಕ್ಕೆ ಧುಮುಕಿದರು. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಸೇರಿದ್ದರು.

2 / 10
ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು.

ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು.

3 / 10
ದೊಡ್ಡೇಗೌಡ ಮತ್ತು ಶ್ರೀಮತಿ ದೇವಮ್ಮ ಅವರ ಪುತ್ರರಾಗಿ ಜನಿಸಿದ ಶ್ರೀದೇವೇಗೌಡರಿಗೆ ತಾವು ಸರಳ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದಕ್ಕೆ ಹೆಮ್ಮೆ ಇದೆ. ಶೀಮತಿ ಚೆನ್ನಮ್ಮ ಅವರನ್ನು ವಿವಾಹವಾದ ದೇವೇಗೌಡ ದಂಪತಿಗಳಿಗೆ ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದಾರೆ.

ದೊಡ್ಡೇಗೌಡ ಮತ್ತು ಶ್ರೀಮತಿ ದೇವಮ್ಮ ಅವರ ಪುತ್ರರಾಗಿ ಜನಿಸಿದ ಶ್ರೀದೇವೇಗೌಡರಿಗೆ ತಾವು ಸರಳ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದಕ್ಕೆ ಹೆಮ್ಮೆ ಇದೆ. ಶೀಮತಿ ಚೆನ್ನಮ್ಮ ಅವರನ್ನು ವಿವಾಹವಾದ ದೇವೇಗೌಡ ದಂಪತಿಗಳಿಗೆ ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದಾರೆ.

4 / 10
ಸಮಾಜದ ಎಲ್ಲ ವರ್ಗಗಳ ಜನರ ಅಹವಾಲುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿ ಪರಿಹಾರ ನೀಡಲು ಯತ್ನಿಸುವ ತಮ್ಮ ಗುಣದಿಂದ ದೇವೇಗೌಡರು ’ಮಣ್ಣಿನ ಮಗ’ ಎಂದು ಹೆಸರುವಾಸಿಯಾಗಿದ್ದಾರೆ. ಈ ಚಿತ್ರ 1994ರಲ್ಲಿ ಹೆಚ್​ಡಿ ದೇವೇಗೌಡರು ಸಿಎಂ ಆಗಿದ್ದಾಗ ತೆಗೆದ ಚಿತ್ರ.

ಸಮಾಜದ ಎಲ್ಲ ವರ್ಗಗಳ ಜನರ ಅಹವಾಲುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿ ಪರಿಹಾರ ನೀಡಲು ಯತ್ನಿಸುವ ತಮ್ಮ ಗುಣದಿಂದ ದೇವೇಗೌಡರು ’ಮಣ್ಣಿನ ಮಗ’ ಎಂದು ಹೆಸರುವಾಸಿಯಾಗಿದ್ದಾರೆ. ಈ ಚಿತ್ರ 1994ರಲ್ಲಿ ಹೆಚ್​ಡಿ ದೇವೇಗೌಡರು ಸಿಎಂ ಆಗಿದ್ದಾಗ ತೆಗೆದ ಚಿತ್ರ.

5 / 10
ತಮ್ಮ 91ನೇ ವಯಸ್ಸಿನಲ್ಲೂ ಕನ್ನಡಕ ಬಳಸದೇ, ಧ್ವನಿಯಲ್ಲಿ ಬದಲಾವಣೆ ಇಲ್ಲದೆ ಆರೋಗ್ಯವಂತರಾಗಿರುವ ಹೆಚ್​ಡಿ ದೇವೇಗೌಡರು ಯೋಗ ಮಾಡುತ್ತಾರೆ. ಕಟ್ಟುನಿಟ್ಟಿನ ಜೀವನ ಶೈಲಿಯಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ.

ತಮ್ಮ 91ನೇ ವಯಸ್ಸಿನಲ್ಲೂ ಕನ್ನಡಕ ಬಳಸದೇ, ಧ್ವನಿಯಲ್ಲಿ ಬದಲಾವಣೆ ಇಲ್ಲದೆ ಆರೋಗ್ಯವಂತರಾಗಿರುವ ಹೆಚ್​ಡಿ ದೇವೇಗೌಡರು ಯೋಗ ಮಾಡುತ್ತಾರೆ. ಕಟ್ಟುನಿಟ್ಟಿನ ಜೀವನ ಶೈಲಿಯಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ.

6 / 10
1995ರ ಜನವರಿ ತಿಂಗಳಲ್ಲಿ ಹೆಚ್​ಡಿಡಿ ಸ್ವಿಟ್ಜರಲೆಂಡಿನಲ್ಲಿ ನಡೆದ ಅಂತಾರಾಷ್ಟ್ರೀಯ ಅರ್ಥಶಾಸ್ತ್ರಜ್ಞರ ಫೋರಂ ಸಮಾವೇಶದಲ್ಲಿ ಭಾಗವಹಿಸಿದರು. ನಂತರ ಇವರು ಸಿಂಗಾಪುರ ಪ್ರವಾಸಕ್ಕೆ ತೆರಳಿ ಕರ್ನಾಟಕಕ್ಕೆ ಸಾಕಷ್ಟು ವಿದೇಶಿ ಬಂಡವಾಳ ಹರಿದು ಬರಲು ಕಾರಣರಾದರು.

1995ರ ಜನವರಿ ತಿಂಗಳಲ್ಲಿ ಹೆಚ್​ಡಿಡಿ ಸ್ವಿಟ್ಜರಲೆಂಡಿನಲ್ಲಿ ನಡೆದ ಅಂತಾರಾಷ್ಟ್ರೀಯ ಅರ್ಥಶಾಸ್ತ್ರಜ್ಞರ ಫೋರಂ ಸಮಾವೇಶದಲ್ಲಿ ಭಾಗವಹಿಸಿದರು. ನಂತರ ಇವರು ಸಿಂಗಾಪುರ ಪ್ರವಾಸಕ್ಕೆ ತೆರಳಿ ಕರ್ನಾಟಕಕ್ಕೆ ಸಾಕಷ್ಟು ವಿದೇಶಿ ಬಂಡವಾಳ ಹರಿದು ಬರಲು ಕಾರಣರಾದರು.

7 / 10
1983 ರಿಂದ 1988 ರವರೆಗೆ ಅಸ್ತಿತ್ವದಲ್ಲಿದ್ದ ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದ ಸರಕಾರದಲ್ಲಿ ದೇವೇಗೌಡರು ಸಚಿವರಾಗಿ ಕೆಲಸ ಮಾಡಿದರು.

1983 ರಿಂದ 1988 ರವರೆಗೆ ಅಸ್ತಿತ್ವದಲ್ಲಿದ್ದ ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದ ಸರಕಾರದಲ್ಲಿ ದೇವೇಗೌಡರು ಸಚಿವರಾಗಿ ಕೆಲಸ ಮಾಡಿದರು.

8 / 10
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77)ಇವರನ್ನು ಬೆಂಗಳೂರಿನ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ (1975 ರಿಂದ 77)ಇವರನ್ನು ಬೆಂಗಳೂರಿನ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು.

9 / 10
ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ 30, 1996ರಂದು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ದೇವೇಗೌಡರು ರಾಜೀನಾಮೆ ನೀಡಿದ್ದರು.

ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ 30, 1996ರಂದು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ದೇವೇಗೌಡರು ರಾಜೀನಾಮೆ ನೀಡಿದ್ದರು.

10 / 10
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್