AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Raw Tomato: ಹಸಿರು ಟೊಮೆಟೊ ಕಾಯಿ ತಿನ್ನುವುದರಿಂದ ಆರೋಗ್ಯ ಪ್ರಯೋಜನೆಗಳೇನು?

ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ?

ಸಾಧು ಶ್ರೀನಾಥ್​
|

Updated on: Dec 09, 2023 | 6:06 AM

Share
ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ (Raw Tomato) ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ? ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ (Health Benefits). ಇವು ದೇಹಕ್ಕೆ ತುಂಬಾ ಒಳ್ಳೆಯದು. ಹಸಿರು ಟೊಮೆಟೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಹೆಚ್ಚಾಗಿರುತ್ತದೆ.

ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ (Raw Tomato) ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ? ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ (Health Benefits). ಇವು ದೇಹಕ್ಕೆ ತುಂಬಾ ಒಳ್ಳೆಯದು. ಹಸಿರು ಟೊಮೆಟೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಹೆಚ್ಚಾಗಿರುತ್ತದೆ.

1 / 5
ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಕಚ್ಚಾ ಟೊಮೆಟೊಗಳು ಕ್ಯಾಲ್ಸಿಯಂ, ಪೊಟ್ಯಾಸಿಯಂ, ವಿಟಮಿನ್ ಎ, ಸಿ ಮತ್ತು ಫೈಟೊಕೆಮಿಕಲ್​ಗಳನ್ನು ಸಹ ಹೊಂದಿರುತ್ತವೆ. ಈಗ ಹಸಿ ಟೊಮೆಟೊ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿಯೋಣ.

ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಕಚ್ಚಾ ಟೊಮೆಟೊಗಳು ಕ್ಯಾಲ್ಸಿಯಂ, ಪೊಟ್ಯಾಸಿಯಂ, ವಿಟಮಿನ್ ಎ, ಸಿ ಮತ್ತು ಫೈಟೊಕೆಮಿಕಲ್​ಗಳನ್ನು ಸಹ ಹೊಂದಿರುತ್ತವೆ. ಈಗ ಹಸಿ ಟೊಮೆಟೊ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿಯೋಣ.

2 / 5

ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಲೈಕೋಪೀನ್ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಬಲವಾಗಿರುತ್ತವೆ. ಈ ಹಸಿರು ಟೊಮೆಟೊಗಳನ್ನು ಆಗಾಗ ಚಿಕ್ಕ ಮಕ್ಕಳಿಗೆ ನೀಡುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತವೆ.

ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಲೈಕೋಪೀನ್ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಬಲವಾಗಿರುತ್ತವೆ. ಈ ಹಸಿರು ಟೊಮೆಟೊಗಳನ್ನು ಆಗಾಗ ಚಿಕ್ಕ ಮಕ್ಕಳಿಗೆ ನೀಡುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತವೆ.

3 / 5

ಹಸಿರು ಟೊಮೆಟೊಗಳಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೃಷ್ಟಿ ಸುಧಾರಿಸುತ್ತದೆ. ಅಲ್ಲದೆ ಇವುಗಳಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ತ್ವಚೆಯನ್ನು ಪೋಷಿಸಿ ಕೂದಲು ಆರೋಗ್ಯವಾಗಿರುವಂತೆ ಮಾಡುತ್ತದೆ.

ಹಸಿರು ಟೊಮೆಟೊಗಳಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೃಷ್ಟಿ ಸುಧಾರಿಸುತ್ತದೆ. ಅಲ್ಲದೆ ಇವುಗಳಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ತ್ವಚೆಯನ್ನು ಪೋಷಿಸಿ ಕೂದಲು ಆರೋಗ್ಯವಾಗಿರುವಂತೆ ಮಾಡುತ್ತದೆ.

4 / 5

ಹಸಿರು ಟೊಮೆಟೊಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ, ಅವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹಸಿ ಟೊಮೆಟೊ  ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಂತೆಯೇ, ಅವುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಆಯಾ ಕಾಲಮಾನದ ರೋಗಗಳನ್ನು ತಡೆಯುತ್ತದೆ.

ಹಸಿರು ಟೊಮೆಟೊಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ, ಅವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹಸಿ ಟೊಮೆಟೊ ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಂತೆಯೇ, ಅವುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಆಯಾ ಕಾಲಮಾನದ ರೋಗಗಳನ್ನು ತಡೆಯುತ್ತದೆ.

5 / 5
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!