AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curry Leaves Tea: ಕರಿಬೇವಿನ ಚಹಾ ಸೇವಿಸಿದ್ದೀರಾ? ಇದರ ಪ್ರಯೋಜನಗಳು ಹೀಗಿವೆ

ಒಗ್ಗರಣೆ ಹಾಕುವಾಗ ನಾಲ್ಕು ಕರಿಬೇವಿನ ಎಲೆಗಳನ್ನು ಹಾಕಿದರೆ ಸಾಕು ಆ ಪದಾರ್ಥದ ರುಚಿ ಇನ್ನಷ್ಟು ಹೆಚ್ಚುತ್ತದೆ. ಇಂತಹ ಕರಿಬೇವಿನ ಚಹವನ್ನು ಎಂದಾದರು ನೀವು ಸೇವಿಸಿದ್ದೀರಾ? ಇದರ ಪ್ರಯೋಜನಗಳನ್ನು ತಿಳಿದಿದ್ದೀರಾ? ಇಲ್ಲವೆಂದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಲಿದೆ.

Rakesh Nayak Manchi
|

Updated on: Aug 07, 2023 | 6:03 AM

Share
ಸಾಮಾನ್ಯವಾಗಿ, ಕರಿಬೇವಿನ ಎಲೆಗಳನ್ನು ಅಡುಗೆ ಪದಾರ್ಥಗಳ ಪರಿಮಳವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಈ ಎಲೆಗಳಲ್ಲಿ ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ವಿಟಮಿನ್ ಸಿ, ವಿಟಮಿನ್ ಎ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ದಕ್ಷಿಣ ಭಾರತದಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ.

ಸಾಮಾನ್ಯವಾಗಿ, ಕರಿಬೇವಿನ ಎಲೆಗಳನ್ನು ಅಡುಗೆ ಪದಾರ್ಥಗಳ ಪರಿಮಳವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಈ ಎಲೆಗಳಲ್ಲಿ ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ವಿಟಮಿನ್ ಸಿ, ವಿಟಮಿನ್ ಎ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ದಕ್ಷಿಣ ಭಾರತದಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ.

1 / 7
ದಕ್ಷಿಣದ ಅನೇಕ ಜನರು ಫಿಟ್ನೆಸ್​ಗಾಗಿ ಕರಿಬೇವಿನ ಜ್ಯೂಸ್ ಕುಡಿಯುತ್ತಾರೆ. ಆದರೆ ಕರಿಬೇವಿನ ಎಲೆಯಿಂದಲೂ ಟೀ ಮಾಡಬಹುದು ಎಂಬುದು ಗೊತ್ತಾ? ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಚಹಾವು ಅನೇಕ ರೀತಿಯ ದೈಹಿಕ ಸಮಸ್ಯೆಗಳಿಂದ ರಕ್ಷಿಸುತ್ತದೆ. ಅವುಗಳ ಬಗ್ಗೆ ತಿಳಿಯೋಣ.

ದಕ್ಷಿಣದ ಅನೇಕ ಜನರು ಫಿಟ್ನೆಸ್​ಗಾಗಿ ಕರಿಬೇವಿನ ಜ್ಯೂಸ್ ಕುಡಿಯುತ್ತಾರೆ. ಆದರೆ ಕರಿಬೇವಿನ ಎಲೆಯಿಂದಲೂ ಟೀ ಮಾಡಬಹುದು ಎಂಬುದು ಗೊತ್ತಾ? ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ಚಹಾವು ಅನೇಕ ರೀತಿಯ ದೈಹಿಕ ಸಮಸ್ಯೆಗಳಿಂದ ರಕ್ಷಿಸುತ್ತದೆ. ಅವುಗಳ ಬಗ್ಗೆ ತಿಳಿಯೋಣ.

2 / 7
ಕರಿಬೇವಿನ ಎಲೆಯಲ್ಲಿರುವ ಪೋಷಕಾಂಶಗಳು: ಕರಿಬೇವಿನ ಎಲೆಗಳಲ್ಲಿ ಕಬ್ಬಿಣ, ರಂಜಕ, ಕ್ಯಾಲ್ಸಿಯಂ, ವಿಟಮಿನ್ ಎ, ಕ್ಯಾರೋಟಿನ್, ವಿಟಮಿನ್ ಸಿ ಮುಂತಾದ ಅನೇಕ ಪೋಷಕಾಂಶಗಳಿರುವುದರಿಂದ ಇದನ್ನು ಆಹಾರದ ಭಾಗವಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದು ದೇಹಕ್ಕೂ ಒಳ್ಳೆಯದು.

ಕರಿಬೇವಿನ ಎಲೆಯಲ್ಲಿರುವ ಪೋಷಕಾಂಶಗಳು: ಕರಿಬೇವಿನ ಎಲೆಗಳಲ್ಲಿ ಕಬ್ಬಿಣ, ರಂಜಕ, ಕ್ಯಾಲ್ಸಿಯಂ, ವಿಟಮಿನ್ ಎ, ಕ್ಯಾರೋಟಿನ್, ವಿಟಮಿನ್ ಸಿ ಮುಂತಾದ ಅನೇಕ ಪೋಷಕಾಂಶಗಳಿರುವುದರಿಂದ ಇದನ್ನು ಆಹಾರದ ಭಾಗವಾಗಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದು ದೇಹಕ್ಕೂ ಒಳ್ಳೆಯದು.

3 / 7
ಕರಿಬೇವಿನ ಚಹಾದಲ್ಲಿ ಅನೇಕ ಪೋಷಕಾಂಶಗಳಿವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕರಿಬೇವಿನ ಎಲೆಗಳ ಟೀ ಕುಡಿಯುವುದರಿಂದ ದೇಹಕ್ಕೆ ಬೇಕಾದ ಆ್ಯಂಟಿಆಕ್ಸಿಡೆಂಟ್ ಹೆಚ್ಚುತ್ತದೆ. ಈ ಚಹಾವು ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುತ್ತದೆ ಮತ್ತು ಚರ್ಮದ ಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ಇದು ಉತ್ತಮ ಮಟ್ಟದ ಫೀನಾಲಿಕ್ಸ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಉತ್ಕರ್ಷಣ ನಿರೋಧಕಗಳು ದೇಹವನ್ನು ಸೋಂಕು ಮತ್ತು ಉರಿಯೂತದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ಕರಿಬೇವಿನ ಚಹಾದಲ್ಲಿ ಅನೇಕ ಪೋಷಕಾಂಶಗಳಿವೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕರಿಬೇವಿನ ಎಲೆಗಳ ಟೀ ಕುಡಿಯುವುದರಿಂದ ದೇಹಕ್ಕೆ ಬೇಕಾದ ಆ್ಯಂಟಿಆಕ್ಸಿಡೆಂಟ್ ಹೆಚ್ಚುತ್ತದೆ. ಈ ಚಹಾವು ಸ್ವತಂತ್ರ ರಾಡಿಕಲ್​ಗಳನ್ನು ತೆಗೆದುಹಾಕುತ್ತದೆ ಮತ್ತು ಚರ್ಮದ ಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ಇದು ಉತ್ತಮ ಮಟ್ಟದ ಫೀನಾಲಿಕ್ಸ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಉತ್ಕರ್ಷಣ ನಿರೋಧಕಗಳು ದೇಹವನ್ನು ಸೋಂಕು ಮತ್ತು ಉರಿಯೂತದಿಂದ ರಕ್ಷಿಸಲು ಸಹಾಯ ಮಾಡುತ್ತದೆ.

4 / 7
ಕರಿಬೇವಿನ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತವೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಕರಿಬೇವಿನ ಎಲೆಯಿಂದ ತಯಾರಿಸಿದ ಟೀ ಸೇವಿಸಬಹುದು. ಇದು ಜೀರ್ಣಕಾರಿ ಕಿಣ್ವಗಳನ್ನು ಒಳಗೊಂಡಿರುವುದರಿಂದ ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಈ ಚಹಾವನ್ನು ಕುಡಿಯುವುದರಿಂದ ಮಲಬದ್ಧತೆ, ಗ್ಯಾಸ್ ಮತ್ತು ಭೇದಿಯಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಕರಿಬೇವಿನ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅನೇಕ ಪೋಷಕಾಂಶಗಳನ್ನು ಹೊಂದಿರುತ್ತವೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಕರಿಬೇವಿನ ಎಲೆಯಿಂದ ತಯಾರಿಸಿದ ಟೀ ಸೇವಿಸಬಹುದು. ಇದು ಜೀರ್ಣಕಾರಿ ಕಿಣ್ವಗಳನ್ನು ಒಳಗೊಂಡಿರುವುದರಿಂದ ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಈ ಚಹಾವನ್ನು ಕುಡಿಯುವುದರಿಂದ ಮಲಬದ್ಧತೆ, ಗ್ಯಾಸ್ ಮತ್ತು ಭೇದಿಯಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.

5 / 7
ಗರ್ಭಾವಸ್ಥೆಯಲ್ಲಿ ಚಹಾ ಸೇವಿಸಿದರೆ ವಾಂತಿ, ವಾಕರಿಕೆ ಮತ್ತು ಬೆಳಗಿನ ಬೇನೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಕರಿಬೇವಿನ ಸುವಾಸನೆಯು ಒತ್ತಡವನ್ನು ನಿವಾರಿಸಿ ಮನಸ್ಸನ್ನು ಶಾಂತಗೊಳಿಸುತ್ತದೆ. ನೀವು ದಿನವಿಡೀ ತುಂಬಾ ದಣಿದಿದ್ದರೆ, ಸಂಜೆ ಒಂದು ಕಪ್ ಕರಿಬೇವಿನ ಚಹಾವನ್ನು ಕುಡಿಯುವುದು ನಿಮಗೆ ಅದ್ಭುತವಾದ ವಿಶ್ರಾಂತಿಯನ್ನು ನೀಡುತ್ತದೆ. ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಇದರ ಚಹಾವನ್ನು ಕುಡಿಯಬಹುದು. ಇದು ಕಣ್ಣಿನ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಎ ಅನ್ನು ಹೊಂದಿರುತ್ತದೆ.

ಗರ್ಭಾವಸ್ಥೆಯಲ್ಲಿ ಚಹಾ ಸೇವಿಸಿದರೆ ವಾಂತಿ, ವಾಕರಿಕೆ ಮತ್ತು ಬೆಳಗಿನ ಬೇನೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಕರಿಬೇವಿನ ಸುವಾಸನೆಯು ಒತ್ತಡವನ್ನು ನಿವಾರಿಸಿ ಮನಸ್ಸನ್ನು ಶಾಂತಗೊಳಿಸುತ್ತದೆ. ನೀವು ದಿನವಿಡೀ ತುಂಬಾ ದಣಿದಿದ್ದರೆ, ಸಂಜೆ ಒಂದು ಕಪ್ ಕರಿಬೇವಿನ ಚಹಾವನ್ನು ಕುಡಿಯುವುದು ನಿಮಗೆ ಅದ್ಭುತವಾದ ವಿಶ್ರಾಂತಿಯನ್ನು ನೀಡುತ್ತದೆ. ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಇದರ ಚಹಾವನ್ನು ಕುಡಿಯಬಹುದು. ಇದು ಕಣ್ಣಿನ ಆರೋಗ್ಯಕ್ಕೆ ಅಗತ್ಯವಾದ ವಿಟಮಿನ್ ಎ ಅನ್ನು ಹೊಂದಿರುತ್ತದೆ.

6 / 7
ಕರಿಬೇವಿನ ಚಹಾ ಮಾಡುವುದು ಹೇಗೆ: 20 ರಿಂದ 30 ಕರಿಬೇವಿನ ಎಲೆಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಮತ್ತು ನೀರು ಅರ್ಧದಷ್ಟು ಇರುವಾಗ ಅದನ್ನು ಫಿಲ್ಟರ್ ಮಾಡಿ. ಇದಕ್ಕೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ.

ಕರಿಬೇವಿನ ಚಹಾ ಮಾಡುವುದು ಹೇಗೆ: 20 ರಿಂದ 30 ಕರಿಬೇವಿನ ಎಲೆಗಳನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ಮತ್ತು ನೀರು ಅರ್ಧದಷ್ಟು ಇರುವಾಗ ಅದನ್ನು ಫಿಲ್ಟರ್ ಮಾಡಿ. ಇದಕ್ಕೆ ನಿಂಬೆ ರಸ ಮತ್ತು ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ.

7 / 7
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?