AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health care: ಮಧುಮೇಹ ಇರುವವರು ಈ ಅಂಶಗಳನ್ನು ಗಮನಿಸಿ; ಇಲ್ಲದಿದ್ದರೆ ಅಪಾಯಗಳು ತಪ್ಪಿದ್ದಲ್ಲ

Health tips for Diabetes patient: ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಸಾಕಷ್ಟು ನೀರು ಕುಡಿಯಬೇಕು, ಒಳ್ಳೆಯ ನಿದ್ರೆ ಮಾಡಬೇಕು. ವ್ಯಾಯಾಮ, ನಡಿಗೆ ಮೊದಲಾದ ಚಟುವಟಿಕೆಯನ್ನು ನಿತ್ಯವೂ ನಡೆಸಬೇಕು. ಹಾಗೆಯೇ ತಿನ್ನುವ ಆಹಾರದಲ್ಲಿ ಸಕ್ಕರೆಯ ಮಟ್ಟ ಹೆಚ್ಚಿಸುವ ಆಹಾರ ಸೇವಿಸಬಾರದು. ಇಷ್ಟನ್ನು ನಿಯಮಿತವಾಗಿ ಮಾಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ.

shivaprasad.hs
|

Updated on:Apr 19, 2022 | 9:48 AM

Share
ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ತಿನ್ನುವ ಆಹಾರದ ಜೊತೆಗೆ ಈ ಅಭ್ಯಾಸಗಳ ಬಗ್ಗೆ ಜಾಗರೂಕರಾಗಿರಿ. ಇಲ್ಲದಿದ್ದರೆ ಸಣ್ಣಪುಟ್ಟ ಕೆಲಸ ಮಾಡಿದರೂ ಬೇಗ ಸುಸ್ತಾಗುತ್ತೀರಿ. ಜೊತೆಗೆ ಕೆಲವು ಆಹಾರ ಪದ್ಧತಿಗಳು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಸಮಸ್ಯೆ ತಂದೊಡ್ಡಬಹುದು. ಇವುಗಳನ್ನು ಗಮನಿಸಿ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ.

1 / 5
ಸಾಕಷ್ಟು ನೀರು ಕುಡಿಯದಿರುವುದು: ನೀವು ಸಾಕಷ್ಟು ನೀರು ಕುಡಿಯದಿದ್ದರೆ, ನಿಮ್ಮ ದೇಹವು ನಿರ್ಜಲೀಕರಣದಿಂದ ಬಳಲುತ್ತದೆ. ಪರಿಣಾಮವಾಗಿ ಬೇಗ ಆಯಾಸವಾಗುತ್ತದೆ. ಈ ಕಾರಣದಿಂದಲೇ ತಜ್ಞರು ದಿನಕ್ಕೆ ಕನಿಷ್ಠ 3 ಲೀಟರ್ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ.

2 / 5
ನಿದ್ರಾಹೀನತೆ: ಮಧುಮೇಹ ರೋಗಿಗಳು ತಮ್ಮ ನಿದ್ರೆಯ ಅವಧಿಯ ಬಗ್ಗೆ ಜಾಗರೂಕರಾಗಿರಬೇಕು. ತಜ್ಞರು ಶಿಫಾರಸು ಮಾಡಿದಂತೆ ಕನಿಷ್ಠ 8 ಗಂಟೆಗಳ ವಿಶ್ರಾಂತಿ ಪಡೆಯಿರಿ. ಇಲ್ಲದಿದ್ದರೆ ಆಯಾಸ ಹೆಚ್ಚಾಗಿ ಕಾಡುತ್ತದೆ. ನಿದ್ರಾಹೀನತೆ ದೀರ್ಘಾವಧಿಯಲ್ಲಿ ಸಮಸ್ಯೆ ತಂದೊಡ್ಡುತ್ತದೆ.

3 / 5
ಮಧುಮೇಹ ಹೊಂದಿರುವ ರೋಗಿಗಳು ಲಘು ವ್ಯಾಯಾಮ, ವಾಕಿಂಗ್ ಮತ್ತು ರನ್ನಿಂಗ್ ಸೇರಿದಂತೆ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡಬೇಕು. ಇದರಿಂದ ಬಹಳಷ್ಟು ಪ್ರಯೋಜನಗಳಿವೆ. ಆದರೆ, ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಹಾಗೆ ಮಾಡದಿರಿ.

4 / 5
ಮಧುಮೇಹ ಹೊಂದಿರುವ ಹೆಚ್ಚಿನ ಜನರು ತಮ್ಮ ನಾಲಿಗೆಯನ್ನು ನಿಯಂತ್ರಿಸುವುದಿಲ್ಲ. ಅರ್ಥಾತ್ ಸಿಹಿತಿಂಡಿಗಳು, ಎಣ್ಣೆಯಲ್ಲಿ ಕರಿದ, ಮಸಾಲೆ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇವು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಆದ್ದರಿಂದ ಸೇವಿಸುವ ಆಹಾರದ ಮೇಲೆ ಹಿಡಿತವಿರಲಿ.

5 / 5

Published On - 9:48 am, Tue, 19 April 22

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ