AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bones Health: ಈ ಹಣ್ಣುಗಳ ಸೇವನೆ ಮೂಳೆಗಳ ಬಲವರ್ಧನೆಗೆ ಸಹಕಾರಿ

Bones Health: ಹಿಂದೆಲ್ಲಾ ಕೀಲು ನೋವು ಅಥವಾ ಸ್ನಾಯು ಸೆಳೆತ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಈ ಸಮಸ್ಯೆಗಳು ಎಲ್ಲರನ್ನೂ ಕಾಡುತ್ತಿವೆ. ಕೆಲವೊಂದು ಹಣ್ಣುಗಳ ಸೇವನೆಯಿಂದ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು. ಸೇಬು, ಅನಾನಸ್, ಸ್ಟ್ರಾಬೆರಿ ಹಾಗೂ ಬಾಳೆಹಣ್ಣು ಮೂಳೆಗಳ ಬಲವರ್ಧನೆಗೆ ಸಹಕಾರಿಯಾಗಿವೆ.

shivaprasad.hs
|

Updated on: Apr 21, 2022 | 9:57 AM

Share
Bones Health: ಹಿಂದೆಲ್ಲಾ ಕೀಲು ನೋವು ಅಥವಾ ಸ್ನಾಯು ಸೆಳೆತ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಈ ಸಮಸ್ಯೆಗಳು ಎಲ್ಲರನ್ನೂ ಕಾಡುತ್ತಿವೆ. ಯುವ ಜನಾಂಗವೂ ಇದಕ್ಕೆ ಹೊರತಾಗಿಲ್ಲ. ಆದರೆ ಕೆಲವೊಂದು ಹಣ್ಣುಗಳ ಸೇವನೆಯಿಂದ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು. ಮೂಳೆಗಳನ್ನು ಹಣ್ಣುಗಳ ಸೇವನೆಯಿಂದ ದೃಢವಾಗಿಸಬಹುದು.

1 / 5
ಸೇಬು: ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಅದಕ್ಕಾಗಿಯೇ ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎನ್ನುತ್ತಾರೆ. ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುವ ಸೇಬುಗಳನ್ನು ತಿನ್ನುವುದು ಮೂಳೆಗಳನ್ನು ಬಲಪಡಿಸಲು ಉತ್ತಮ ಮಾರ್ಗವಾಗಿದೆ ಎನ್ನುತ್ತಾರೆ ತಜ್ಞರು.

2 / 5
ಅನಾನಸ್: ಇದರಲ್ಲಿರುವ ಪೊಟ್ಯಾಶಿಯಂ ದೇಹದಲ್ಲಿನ ಆಸಿಡ್ ಲೋಡ್ ಅನ್ನು ತಟಸ್ಥಗೊಳಿಸುತ್ತದೆ. ಇದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚುತ್ತದೆ. ಬೇಸಿಗೆಯಲ್ಲಿ ಇವುಗಳನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿ.

3 / 5
ಸ್ಟ್ರಾಬೆರಿ: ಮ್ಯಾಂಗನೀಸ್ ದೇಹಕ್ಕೆ ಬಹಳ ಮುಖ್ಯ. ಪೊಟ್ಯಾಸಿಯಮ್ ಮತ್ತು ವಿಟಮಿನ್-ಸಿ ಜತೆಗೆ, ಈ ಹಣ್ಣಿನಲ್ಲಿ ಮೂಳೆಗಳಿಗೆ ಅಗತ್ಯವಾದ ಕ್ಯಾಲ್ಸಿಯಂ ಕೂಡ ಇದೆ. ಬೇಸಿಗೆಯಲ್ಲಿ ನೀವು ಸ್ಟ್ರಾಬೆರಿ ಮತ್ತು ಹಾಲಿನೊಂದಿಗೆ ಮಾಡಿದ ಮಿಲ್ಕ್​ಶೇಕ್  ಕುಡಿಯಬಹುದು. ಹಾಲು ಕೂಡ ಮೂಳೆಗಳ ಬಲವರ್ಧನೆಗೆ ಸಹಕಾರಿ.

4 / 5
ಬಾಳೆಹಣ್ಣು: ಸಂಧಿವಾತ ಅಥವಾ ಸ್ನಾಯುಗಳ ಸೆಳೆತ ಹೊಂದಿರುವವರು ಪ್ರತಿದಿನ ಬಾಳೆಹಣ್ಣುಗಳನ್ನು ತಿನ್ನಬಹುದು. ತಜ್ಞರ ಪ್ರಕಾರ ಇದರಲ್ಲಿರುವ ಪೋಷಕಾಂಶಗಳು ಮೂಳೆ ಮತ್ತು ಹಲ್ಲುಗಳ ಬಲವರ್ಧನೆಗೆ ಪ್ರಮುಖ ಪಾತ್ರ ವಹಿಸುತ್ತವೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ