AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ: ನೀರಿನ ನಡುಗಡ್ಡೆಗಳಾದ ಚೆಂಡಿಯಾ ಗ್ರಾಮದ ಮನೆಗಳು

ಕರ್ನಾಟಕ ಹಲವೆಡೆ ಮಳೆರಾಯನ ಅಬ್ಬರ ಮುಂದುವರೆದಿದೆ. ಕೆಲವೆಡೆ ವರುಣಾರ್ಭಟಕ್ಕೆ ಜಮೀನುಗಳು ಜಲಾವೃತವಾಗಿವೆ. ಮನೆಗಳಂತೂ ನೀರಿನ ನಡುವೆ ಇರುವ ದ್ವೀಪಗಳಂತಾಗಿವೆ. ಜನರು ನೀರಿನಲ್ಲಿಯೇ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಮನೆಯ ಮುಂದೆ ಹಳ್ಳದಂತಹ ವಾತಾವಾರಣ ನಿರ್ಮಾಣವಾಗಿದೆ. ಕಷ್ಟಪಟ್ಟು ರೈತ ಬೆಳೆದಿದ್ದ ಅಡಕೆ ಮರಗಳು ಜಲಾವೃತವಾಗಿರುವ ಚಿತ್ರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಂಡುಬಂದಿದೆ.

ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jul 06, 2024 | 3:40 PM

Share
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಹೊನ್ನವಾರ ತಾಲೂಕಿನ ಭಸ್ಕೆರೆಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 500 ಎಕರೆಯಲ್ಲಿ ಬೆಳೆದಿರೋ ಅಡಕೆ ಮರಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡ ಅನ್ನದಾತ ಕಂಗಲಾಗಿ ನಿಂತಿದ್ದಾನೆ. ಇಷ್ಟೆ ಅಲ್ಲದೇ, ಗ್ರಾಮದ ಪಕ್ಕದಲ್ಲಿ ಹರಿಯೋ ಹಳ್ಳ ಆರ್ಭಟಿಸುತ್ತಿದ್ದು, 200 ಮನೆಗಳಿಗೆ ಜಲದಿಗ್ಬಂಧನವಾಗೋ ಭೀತಿ ಎದುರಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಹೊನ್ನವಾರ ತಾಲೂಕಿನ ಭಸ್ಕೆರೆಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 500 ಎಕರೆಯಲ್ಲಿ ಬೆಳೆದಿರೋ ಅಡಕೆ ಮರಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡ ಅನ್ನದಾತ ಕಂಗಲಾಗಿ ನಿಂತಿದ್ದಾನೆ. ಇಷ್ಟೆ ಅಲ್ಲದೇ, ಗ್ರಾಮದ ಪಕ್ಕದಲ್ಲಿ ಹರಿಯೋ ಹಳ್ಳ ಆರ್ಭಟಿಸುತ್ತಿದ್ದು, 200 ಮನೆಗಳಿಗೆ ಜಲದಿಗ್ಬಂಧನವಾಗೋ ಭೀತಿ ಎದುರಾಗಿದೆ.

1 / 6
ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದ ಮನೆಗಳಂತೂ ನೀರಿನ ನಡುಗಡ್ಡೆಗಳಂತೆ ಕಾಣಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ಇಲ್ಲಿನ ಜನ ಮಳೆ ನೀರಿನಲ್ಲೇ ವಾಸಿಸಬೇಕಾದ ದುಸ್ಥಿತಿ ಎದುರಾಗಿದೆ. ಇಂದು ಬೆಳ್ಳಂಬೆಳಗ್ಗೆಯೇ ನಾಲ್ಕೈದು ಮನೆಗಳು ಜಲಾವೃತವಾಗಿದ್ದು, ಇಲ್ಲಿನ ಜನ ನೀರಿನಲ್ಲೇ ಓಡಾಡ್ತಿದ್ದಾರೆ.

ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದ ಮನೆಗಳಂತೂ ನೀರಿನ ನಡುಗಡ್ಡೆಗಳಂತೆ ಕಾಣಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ಇಲ್ಲಿನ ಜನ ಮಳೆ ನೀರಿನಲ್ಲೇ ವಾಸಿಸಬೇಕಾದ ದುಸ್ಥಿತಿ ಎದುರಾಗಿದೆ. ಇಂದು ಬೆಳ್ಳಂಬೆಳಗ್ಗೆಯೇ ನಾಲ್ಕೈದು ಮನೆಗಳು ಜಲಾವೃತವಾಗಿದ್ದು, ಇಲ್ಲಿನ ಜನ ನೀರಿನಲ್ಲೇ ಓಡಾಡ್ತಿದ್ದಾರೆ.

2 / 6
ಉಡುಪಿ ಜಿಲ್ಲೆಯಲ್ಲೂ ವರುಣಾರ್ಭಟ ಜೋರಾಗಿದೆ. ಉದ್ಯಾವರದ ಪಾಪನಾಶಿನಿ ನದಿ ಮೈತುಂಬಿ ಹರೀತಿದೆ. ಕುಂದಾಪುರ ತಾಲೂಕಿನ ಹೊಸ ಅಂಗಡಿ ತೊಂಬಟ್ಟು ಬಳಿಯ ಇರ್ಕಿಗದ್ದೆ ಫಾಲ್ಸ್ ಧುಮ್ಮಿಕ್ಕುತ್ತಿದೆ. ಜಿಲ್ಲೆಯಲ್ಲಿನ ಮಳೆ ಗಮನದಲ್ಲಿ ಇಟ್ಟುಕೊಂಡು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲೂ ವರುಣಾರ್ಭಟ ಜೋರಾಗಿದೆ. ಉದ್ಯಾವರದ ಪಾಪನಾಶಿನಿ ನದಿ ಮೈತುಂಬಿ ಹರೀತಿದೆ. ಕುಂದಾಪುರ ತಾಲೂಕಿನ ಹೊಸ ಅಂಗಡಿ ತೊಂಬಟ್ಟು ಬಳಿಯ ಇರ್ಕಿಗದ್ದೆ ಫಾಲ್ಸ್ ಧುಮ್ಮಿಕ್ಕುತ್ತಿದೆ. ಜಿಲ್ಲೆಯಲ್ಲಿನ ಮಳೆ ಗಮನದಲ್ಲಿ ಇಟ್ಟುಕೊಂಡು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.

3 / 6
ಉಡುಪಿಯ ಪಡುಕರೆ ಬೀಚ್​ನಲ್ಲಿ ರಕ್ಕಸ ಗಾತ್ರ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಇನ್ನೂ ಜಾಸ್ತಿಯಾದ್ರೆ ರಸ್ತೆ ಸಂಪರ್ಕ ಕಡಿತವಾಗೋ ಭೀತಿ ಎದುರಾಗಿದೆ. ಈ ಮಧ್ಯೆ ಪ್ರವಾಸಿಗರು ಸಮುದ್ರ ತಡೆಗೋಡೆಯ ಮಧ್ಯೆ ನಿಂತು ಪ್ರವಾಸಿಗರ ರಿಸ್ಕಿ ತೆಗೆದುಕೊಳ್ತಿದ್ದಾರೆ.

ಉಡುಪಿಯ ಪಡುಕರೆ ಬೀಚ್​ನಲ್ಲಿ ರಕ್ಕಸ ಗಾತ್ರ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಇನ್ನೂ ಜಾಸ್ತಿಯಾದ್ರೆ ರಸ್ತೆ ಸಂಪರ್ಕ ಕಡಿತವಾಗೋ ಭೀತಿ ಎದುರಾಗಿದೆ. ಈ ಮಧ್ಯೆ ಪ್ರವಾಸಿಗರು ಸಮುದ್ರ ತಡೆಗೋಡೆಯ ಮಧ್ಯೆ ನಿಂತು ಪ್ರವಾಸಿಗರ ರಿಸ್ಕಿ ತೆಗೆದುಕೊಳ್ತಿದ್ದಾರೆ.

4 / 6
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜೋರು ಮಳೆಯಾಗ್ತಿದೆ. ಇದೇ ಕಾರಣಕ್ಕೆ ಬೆಳಗಾವಿ ತಾಲೂಕಿನ ಹಲವು ಭಾಗದಲ್ಲಿ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ತುರಮರಿ ಗ್ರಾಮದಲ್ಲಿ ಮಳೆ ಅಬ್ಬರಕ್ಕೆ ಭತ್ತದ ಗದ್ದೆ ಮತ್ತು ಕಬ್ಬಿನ ಗದ್ದೆ ಹಳ್ಳದಂತೆ ಮಾರ್ಪಟ್ಟಿವೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜೋರು ಮಳೆಯಾಗ್ತಿದೆ. ಇದೇ ಕಾರಣಕ್ಕೆ ಬೆಳಗಾವಿ ತಾಲೂಕಿನ ಹಲವು ಭಾಗದಲ್ಲಿ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ತುರಮರಿ ಗ್ರಾಮದಲ್ಲಿ ಮಳೆ ಅಬ್ಬರಕ್ಕೆ ಭತ್ತದ ಗದ್ದೆ ಮತ್ತು ಕಬ್ಬಿನ ಗದ್ದೆ ಹಳ್ಳದಂತೆ ಮಾರ್ಪಟ್ಟಿವೆ.

5 / 6
ದಾವಣಗೆರೆ ಜಿಲ್ಲೆ ಉಕ್ಕಡಗಾತ್ರಿಯಲ್ಲಿ ತುಂಗಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಉಕ್ಕಡಗಾತ್ರಿ ಸ್ನಾನಘಟ್ಟ ಹಾಗೂ ಅಂಗಡಿಗಳು ಮುಳುಗಡೆಯಾಗಿವೆ. ಇತ್ತ ಜಗಳೂರು ತಾಲೂಕಿನ 5 ದಶಕದ ಕನಸು ನನಸಾಗಿದ್ದು,  30 ಕೆರೆಗೆ ತುಂಗಭದ್ರ ನದಿ ನೀರು ಹರಿಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಭದ್ರಾ ಡ್ಯಾಂಗೆ ಒಂದೇ ದಿನ 2.6 ಅಡಿ ನೀರು ಹರಿದುಬಂದಿದೆ.

ದಾವಣಗೆರೆ ಜಿಲ್ಲೆ ಉಕ್ಕಡಗಾತ್ರಿಯಲ್ಲಿ ತುಂಗಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಉಕ್ಕಡಗಾತ್ರಿ ಸ್ನಾನಘಟ್ಟ ಹಾಗೂ ಅಂಗಡಿಗಳು ಮುಳುಗಡೆಯಾಗಿವೆ. ಇತ್ತ ಜಗಳೂರು ತಾಲೂಕಿನ 5 ದಶಕದ ಕನಸು ನನಸಾಗಿದ್ದು, 30 ಕೆರೆಗೆ ತುಂಗಭದ್ರ ನದಿ ನೀರು ಹರಿಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಭದ್ರಾ ಡ್ಯಾಂಗೆ ಒಂದೇ ದಿನ 2.6 ಅಡಿ ನೀರು ಹರಿದುಬಂದಿದೆ.

6 / 6
Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!