- TV9 Kannada Photo gallery Kannada News | Heavy rain accompanied by wind: Huge coconut tree Fallen, 2 cars damaged
ಗಾಳಿ ಸಹಿತ ಭಾರೀ ಮಳೆ: ಧರೆಗೆ ಉರುಳಿದ ಬೃಹತ್ ತೆಂಗಿನ ಮರ, 2 ಕಾರು ಜಖಂ
ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ.
Updated on: May 29, 2023 | 9:23 PM

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ ಯಾರೂ ಇರಲಿಲ್ಲ. ತೆಂಗಿನ ಮರ ಬಿದ್ದಿದ್ದರಿಂದ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದೆ.

ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಹಾಸನ ಜಿಲ್ಲೆಯಲ್ಲೂ ವರುಣ ಅಬ್ಬರಿಸಿದ್ದು, ನಗರ ಸೇರಿದಂತೆ ಹಲವೆಡೆ ದಿಡೀರ್ ಮಳೆಯಿಂದ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳ ಪರದಾಡಿದ್ದಾರೆ. ಸುಮಾರು ಒಂದು ಗಂಟೆ ಮಳೆ ಸುರಿದೆ.

ಕೋಟೆನಾಡು ಚಿತ್ರದುರ್ಗಕ್ಕೂ ಮಳೆ ಕಾಟ ತಪ್ಪಿಲ್ಲ. ಬರದನಾಡಿನ ಭೂಮಿಗೆ ಜಡಿ ಮಳೆ ತಂಪೆರೆದಿದ್ದು, ರೈತರಲ್ಲಿ ಮುಖದಲ್ಲಿ ಖುಷಿ ಮೂಡಿಸಿದೆ.

ನೆಲಮಂಗಲದ ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕೂಡ ಮಳೆ ಆಗಿದೆ. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ತುಂಬಿ ಹರಿದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More



