Karnataka Rains: ದಕ್ಷಿಣ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ
ಬೆಂಗಳೂರು, ಜೂನ್ 18: ದಕ್ಷಿಣ ಕರ್ನಾಟಕದ ಹಲವೆಡೆ ಮಳೆ ಆರ್ಭಟ ಜೋರಾಗಿದ್ದು, ಮಂಗಳೂರು ಹಾಗೂ ಚಿಕ್ಕಮಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಮಂಗಳವಾರ ಬೆಳಗ್ಗೆ ಮಂಗಳೂರಿನ ಕಣ್ಣೂರಿನಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದರೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊಸೂರು ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆಗೆ ಗಿಡ್ಡಪ್ಪ ಎಂಬವರ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿದ್ದ ವಸ್ತುಗಳು, ದವಸ-ಧಾನ್ಯ ಸರ್ವನಾಶವಾಗಿದ್ದು, ಕುಟುಂಬ ಕಂಗಾಲಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7