AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮೈ ತುಂಬಿ ಹರಿಯುತ್ತಿವೆ ಕರ್ನಾಟಕದ ಫಾಲ್ಸ್​ಗಳು, ಸುಂದರ ದೃಶ್ಯಗಳು ಇಲ್ಲಿವೆ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕೆರೆ, ನದಿ, ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಕೆಲ ಕಡೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತ್ತೊಂದಷ್ಟು ಕಡೆ ರಸ್ತೆಗಳು ಮುಳುಗಿ ಸಂಪರ್ಕ ಕಡಿತಗೊಂಡಿದೆ. ಇವುಗಳ ನಡುವೆ ಮೈ ತುಂಬಿ ಹರಿಯುತ್ತಿರುವ ಜಲಪಾತಗಳು ಮನಸ್ಸಿಗೆ ಉಲ್ಲಾಸ ನೀಡುತ್ತಿದೆ,

ಆಯೇಷಾ ಬಾನು
|

Updated on: Jul 18, 2024 | 10:37 AM

Share
ಕಬಿನಿ ಹಾಗೂ ಕೆಆರ್​ಎಸ್​​ನಿಂದ ಹೊರಹರಿವು ಹೆಚ್ಚಳ ಹಿನ್ನೆಲೆ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ತುಂಬಿ ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಭರಚುಕ್ಕಿ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ.

ಕಬಿನಿ ಹಾಗೂ ಕೆಆರ್​ಎಸ್​​ನಿಂದ ಹೊರಹರಿವು ಹೆಚ್ಚಳ ಹಿನ್ನೆಲೆ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ತುಂಬಿ ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಭರಚುಕ್ಕಿ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ.

1 / 6
ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಹೆಬ್ಬಾಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಹೆಬ್ಬಾಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

2 / 6
ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಫಾಲ್ಸ್ ಗಳಿಗೆ ಜೀವ ಕಳೆ ಬಂದಿದೆ. ಝರಿ ,ಫಾಲ್ಸ್, ಹೊನ್ನಮ್ಮನ ಹಳ್ಳ ಮೈದುಂಬಿ ಹರಿಯುತ್ತಿದೆ.

ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಫಾಲ್ಸ್ ಗಳಿಗೆ ಜೀವ ಕಳೆ ಬಂದಿದೆ. ಝರಿ ,ಫಾಲ್ಸ್, ಹೊನ್ನಮ್ಮನ ಹಳ್ಳ ಮೈದುಂಬಿ ಹರಿಯುತ್ತಿದೆ.

3 / 6
ಮೈಸೂರಿನಲ್ಲಿರುವ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂ ನಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನಂಜನಗೂಡಿನ ಹಳ್ಳದಕೇರಿ, ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ, ಬೊಕ್ಕಳ್ಳಿ, ಕಡಜಟ್ಟಿ ಗ್ರಾಮಗಳಿಗೆ ಆತಂಕ ಎದುರಾಗಿದೆ.

ಮೈಸೂರಿನಲ್ಲಿರುವ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂ ನಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನಂಜನಗೂಡಿನ ಹಳ್ಳದಕೇರಿ, ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ, ಬೊಕ್ಕಳ್ಳಿ, ಕಡಜಟ್ಟಿ ಗ್ರಾಮಗಳಿಗೆ ಆತಂಕ ಎದುರಾಗಿದೆ.

4 / 6
ಬೆಳಗಾವಿಯ ಧಾಮಣೆ ತಿಲಾರಿ ಫಾಲ್ಸ್​ ಕೂಡ ಮೈತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಬೆಳಗಾವಿಯ ಧಾಮಣೆ ತಿಲಾರಿ ಫಾಲ್ಸ್​ ಕೂಡ ಮೈತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

5 / 6
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೀರ್ಥಕೆರೆ ಫಾಲ್ಸ್ ಮೈತುಂಬಿ ಹರಿಯುತ್ತಿದೆ. ದಟ್ಟ ಕಾನನದ ನಡುವೆ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ ಫಾಲ್ಸ್ ಭೋರ್ಗರೆಯುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೀರ್ಥಕೆರೆ ಫಾಲ್ಸ್ ಮೈತುಂಬಿ ಹರಿಯುತ್ತಿದೆ. ದಟ್ಟ ಕಾನನದ ನಡುವೆ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ ಫಾಲ್ಸ್ ಭೋರ್ಗರೆಯುತ್ತಿದೆ.

6 / 6
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ