ಉಡುಪಿ, ಮಂಗಳೂರಿನಲ್ಲಿ ಭಾರಿ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಮಂಗಳೂರಿನಲ್ಲಿಬ್ಬರು ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಮಡಿಕೇರಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಸ್ತೆ, ಸೇತುವೆಗಳು ಮುಳುಗಿವೆ. ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

|

Updated on:Jun 27, 2024 | 10:37 AM

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

1 / 9
ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನದಿಗಳು, ಹಳ್ಳ, ತೊರೆಗಳು ಉಕ್ಕಿ ಹರಿಯುತ್ತಿವೆ. ಭಾಗಮಂಡಲ-ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಮಳೆಯಿಂದಾಗಿ ನೂತನ ಉದ್ಯಾನವನ, ಭಾಗಮಂಡಲ-ನಾಪೋಕ್ಲು ರಸ್ತೆ ಮುಳುಗಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನದಿಗಳು, ಹಳ್ಳ, ತೊರೆಗಳು ಉಕ್ಕಿ ಹರಿಯುತ್ತಿವೆ. ಭಾಗಮಂಡಲ-ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಮಳೆಯಿಂದಾಗಿ ನೂತನ ಉದ್ಯಾನವನ, ಭಾಗಮಂಡಲ-ನಾಪೋಕ್ಲು ರಸ್ತೆ ಮುಳುಗಿದೆ.

2 / 9
ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಮ್ಮತ್ತಿ ಗ್ರಾಮದಲ್ಲಿ ಮರ ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಮರ ಬಿದ್ದಿದ್ದರಿಂದ ವಿದ್ಯುತ್ ಕಂಬ ಕೂಡ ತುಂಡಾಗಿ ಬಿದ್ದು ಕಾರು ಜಖಂಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಮ್ಮತ್ತಿ ಗ್ರಾಮದಲ್ಲಿ ಮರ ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಮರ ಬಿದ್ದಿದ್ದರಿಂದ ವಿದ್ಯುತ್ ಕಂಬ ಕೂಡ ತುಂಡಾಗಿ ಬಿದ್ದು ಕಾರು ಜಖಂಗೊಂಡಿದೆ.

3 / 9
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

4 / 9
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಜೈನರಗುರಿ ಎಂಬಲ್ಲಿ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಕುಸಿದಿದೆ. ಮನೆಯವರು ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ. ಮಜೀದ್ ಮತ್ತು ಅವರ ಇಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿದ್ದು ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ತಂದೆ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿದ್ದು ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಜೈನರಗುರಿ ಎಂಬಲ್ಲಿ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಕುಸಿದಿದೆ. ಮನೆಯವರು ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ. ಮಜೀದ್ ಮತ್ತು ಅವರ ಇಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿದ್ದು ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ತಂದೆ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿದ್ದು ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

5 / 9
ಭಾರಿ ಮಳೆಯಿಂದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

ಭಾರಿ ಮಳೆಯಿಂದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

6 / 9
ಉಡುಪಿಯಲ್ಲಿ ಮುಂಗಾರು ಮಳೆ ಜೋರಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡಿ ಭಾರೀ ಮಳೆ ಸುರಿದಿದೆ. ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಎದುರಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಎದುರಾಗುತ್ತೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು.

ಉಡುಪಿಯಲ್ಲಿ ಮುಂಗಾರು ಮಳೆ ಜೋರಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡಿ ಭಾರೀ ಮಳೆ ಸುರಿದಿದೆ. ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಎದುರಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಎದುರಾಗುತ್ತೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು.

7 / 9
ಕಾಫಿನಾಡು, ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿನ್ನೆಯಿಂದಲೂ ಬಿಟ್ಟು-ಬಿಟ್ಟು ಸುರಿದ ಮಳೆಯಿಂದಾಗಿ ಮಲೆನಾಡಿಗರ ಜೀವನ ಅಸ್ತವ್ಯಸ್ತಗೊಂಡಿತ್ತು. ಮಲೆನಾಡು ತಾಲೂಕುಗಳಾದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರೀ ಮಳೆ ಬಿದ್ದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಮಳೆಯಾಗಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು.

ಕಾಫಿನಾಡು, ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿನ್ನೆಯಿಂದಲೂ ಬಿಟ್ಟು-ಬಿಟ್ಟು ಸುರಿದ ಮಳೆಯಿಂದಾಗಿ ಮಲೆನಾಡಿಗರ ಜೀವನ ಅಸ್ತವ್ಯಸ್ತಗೊಂಡಿತ್ತು. ಮಲೆನಾಡು ತಾಲೂಕುಗಳಾದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರೀ ಮಳೆ ಬಿದ್ದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಮಳೆಯಾಗಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು.

8 / 9
ಮಂಗಳೂರಿನಲ್ಲಿ ಭಾರಿ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಪಾಂಡೇಶ್ವರದಲ್ಲಿ ವಿದ್ಯುತ್​ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದೆ. ಆಟೋ ಚಾಲಕನನ್ನ ರಕ್ಷಿಸಲು ಹೋಗಿ ದುರ್ಘಟನೆ ಸಂಭವಿಸಿದ್ದು ವಿದ್ಯುತ್​ ಪ್ರವಹಿಸಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.

ಮಂಗಳೂರಿನಲ್ಲಿ ಭಾರಿ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಪಾಂಡೇಶ್ವರದಲ್ಲಿ ವಿದ್ಯುತ್​ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದೆ. ಆಟೋ ಚಾಲಕನನ್ನ ರಕ್ಷಿಸಲು ಹೋಗಿ ದುರ್ಘಟನೆ ಸಂಭವಿಸಿದ್ದು ವಿದ್ಯುತ್​ ಪ್ರವಹಿಸಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.

9 / 9

Published On - 8:47 am, Thu, 27 June 24

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್