AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಏರ್ಪಡಿಸಿದ್ದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಯ ಝಲಕ್​ ಇಲ್ಲಿದೆ ನೋಡಿ

ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಭಾಗದಲ್ಲಿ ವಿವಿಧ ಕ್ರೀಡೆಗಳು ನಡೆಯುತ್ತವೆ. ಕೋಟೆನಾಡು ಚಿತ್ರದುರ್ಗದಲ್ಲಿ ಜೋಡೆತ್ತಿನ ಗಾಡಿ ಓಟದ ಸ್ಪರ್ದೆ ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಲ್ಲಿ ನಾಡಿನ ವಿವಿಧೆಡೆಯಿಂದ ಜೋಡೆತ್ತಿನ ಗಾಡಿ ಜತೆ ರೈತರ ಆಗಮಿಸಿ ಭಾಗಿಯಾಗಿದ್ದರು. ಇಲ್ಲಿದೆ ನೋಡಿ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಯ ಝಲಕ್.

ಕಿರಣ್ ಹನುಮಂತ್​ ಮಾದಾರ್
|

Updated on:Mar 24, 2023 | 3:20 PM

Share
ಜೋಡೆತ್ತಿನ ಗಾಡಿ ಓಟದ ಸ್ಪರ್ದೆಯಲ್ಲಿ ಜೋಡೆತ್ತುಗಳ ಭರ್ಜರಿ ಓಟ. ಅಪರೂಪದ ಗ್ರಾಮೀಣ ಕ್ರೀಡೆ ಕಣ್ತುಂಬಿಕೊಳ್ಳಲು ಸೇರಿರುವ ಜನಸ್ತೋಮ. ಸ್ಪರ್ಧೆಯಲ್ಲಿ ಗೆದ್ದು ಬೀಗಲು ಜೋಡೆತ್ತುಗಳಿಗೆ ಹುರಿದುಂಬಿಸುತ್ತಿರುವ ರೈತರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ.

ಜೋಡೆತ್ತಿನ ಗಾಡಿ ಓಟದ ಸ್ಪರ್ದೆಯಲ್ಲಿ ಜೋಡೆತ್ತುಗಳ ಭರ್ಜರಿ ಓಟ. ಅಪರೂಪದ ಗ್ರಾಮೀಣ ಕ್ರೀಡೆ ಕಣ್ತುಂಬಿಕೊಳ್ಳಲು ಸೇರಿರುವ ಜನಸ್ತೋಮ. ಸ್ಪರ್ಧೆಯಲ್ಲಿ ಗೆದ್ದು ಬೀಗಲು ಜೋಡೆತ್ತುಗಳಿಗೆ ಹುರಿದುಂಬಿಸುತ್ತಿರುವ ರೈತರು. ಈ ದೃಶ್ಯಗಳು ಕಂಡು ಬಂದಿದ್ದು ಕೋಟೆನಾಡು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ.

1 / 6
ಹೌದು ಈ ಗ್ರಾಮದ ವಾಲ್ಮೀಕಿ ಗೆಳೆಯರ ಬಳಗ ಜೋಡೆತ್ತಿನ ಓಟದ ಸ್ಪರ್ಧೆ ಆಯೋಜಿಸಿದೆ. ಚಳ್ಳಕೆರೆ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಗ್ರಾಮೀಣ ಕ್ರೀಡೆಗೆ ಚಾಲನೆ ನೀಡಿದರು. ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಈ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಹೌದು ಈ ಗ್ರಾಮದ ವಾಲ್ಮೀಕಿ ಗೆಳೆಯರ ಬಳಗ ಜೋಡೆತ್ತಿನ ಓಟದ ಸ್ಪರ್ಧೆ ಆಯೋಜಿಸಿದೆ. ಚಳ್ಳಕೆರೆ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಗ್ರಾಮೀಣ ಕ್ರೀಡೆಗೆ ಚಾಲನೆ ನೀಡಿದರು. ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಈ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

2 / 6
ಇತ್ತೀಚೆಗೆ ಮರೆಯಾಗುತ್ತಿರುವ ಈ ಗ್ರಾಮೀಣ ಕ್ರೀಡೆ ಆಯೋಜಿಸಿದ್ದು ಕೃಷಿಗೆ ಉತ್ತೇಜನ ನೀಡುತ್ತದೆ. ಪ್ರಥಮ ,ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುತ್ತಿದ್ದು ಇದು ಜೂಜಾಟವಲ್ಲ. ಪಕ್ಕಾ ಗ್ರಾಮೀಣಕ್ರೀಡೆ ಎನ್ನುತ್ತಾರೆ ರೈತ ಸಂಘದ ಜಿಲ್ಲಾದ್ಯಕ್ಷರು.

ಇತ್ತೀಚೆಗೆ ಮರೆಯಾಗುತ್ತಿರುವ ಈ ಗ್ರಾಮೀಣ ಕ್ರೀಡೆ ಆಯೋಜಿಸಿದ್ದು ಕೃಷಿಗೆ ಉತ್ತೇಜನ ನೀಡುತ್ತದೆ. ಪ್ರಥಮ ,ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುತ್ತಿದ್ದು ಇದು ಜೂಜಾಟವಲ್ಲ. ಪಕ್ಕಾ ಗ್ರಾಮೀಣಕ್ರೀಡೆ ಎನ್ನುತ್ತಾರೆ ರೈತ ಸಂಘದ ಜಿಲ್ಲಾದ್ಯಕ್ಷರು.

3 / 6
ಇನ್ನು ಕಳೆದ ಮೂರು ವರ್ಷಗಳಿಂದ ಹುಣಸೇಕಟ್ಟೆ ವಾಲ್ಮೀಕಿ ಗೆಳೆಯರ ಬಳಗ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುತ್ತಿದೆ. ಯುಗಾದಿ ಸಂದರ್ಭದಲ್ಲಿ ಅನೇಕ ಕಡೆ ಜೂಜಾಟ ಆಡಲಾಗುತ್ತದೆ. ಆದರೆ ನಮ್ಮೂರಲ್ಲಿ ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಮತ್ತು ಕೃಷಿಗೆ ಉತ್ತೇಜನ ನೀಡುವ ಕಾರಣಕ್ಕೆ ಈ ಕ್ರೀಡೆ ಆಯೋಜಿಸಿದ್ದೇವೆ.

ಇನ್ನು ಕಳೆದ ಮೂರು ವರ್ಷಗಳಿಂದ ಹುಣಸೇಕಟ್ಟೆ ವಾಲ್ಮೀಕಿ ಗೆಳೆಯರ ಬಳಗ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುತ್ತಿದೆ. ಯುಗಾದಿ ಸಂದರ್ಭದಲ್ಲಿ ಅನೇಕ ಕಡೆ ಜೂಜಾಟ ಆಡಲಾಗುತ್ತದೆ. ಆದರೆ ನಮ್ಮೂರಲ್ಲಿ ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ಮತ್ತು ಕೃಷಿಗೆ ಉತ್ತೇಜನ ನೀಡುವ ಕಾರಣಕ್ಕೆ ಈ ಕ್ರೀಡೆ ಆಯೋಜಿಸಿದ್ದೇವೆ.

4 / 6
ಫ್ರಿಡ್ಜ್, ಟಿವಿ ಮತ್ತು ಫ್ಯಾನ್ ಹಾಗೂ ಪಾರಿತೋಷಕವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನಾಗಿ ನೀಡಲಾಗುತ್ತಿದೆ ಅಂತಾರೆ ಗ್ರಾಮದ ರೈತ ಕಾಂತರಾಜ್.

ಫ್ರಿಡ್ಜ್, ಟಿವಿ ಮತ್ತು ಫ್ಯಾನ್ ಹಾಗೂ ಪಾರಿತೋಷಕವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವನ್ನಾಗಿ ನೀಡಲಾಗುತ್ತಿದೆ ಅಂತಾರೆ ಗ್ರಾಮದ ರೈತ ಕಾಂತರಾಜ್.

5 / 6
ಒಟ್ಟಾರೆಯಾಗಿ ಕೋಟೆನಾಡಿನ ಹುಣಸೇಕಟ್ಟೆ ಗ್ರಾಮದಲ್ಲಿ ಜೋಡೆತ್ತಿನ ಗಾಡಿಯ ಓಟದ ಸ್ಪರ್ದೆ ನಡೆಯಿತು. ಸುಮಾರು 30ಕ್ಕೂ ಹೆಚ್ಚು ಸುತ್ತುಗಳಲ್ಲಿ ಓಟದ ಸ್ಪರ್ಧೆ ನಡೆದಿದೆ. ಬೆಳಗ್ಗೆ 10ಗಂಟೆಯಿಂದ ಸಂಜೆಯವರೆಗೆ ನಡೆದ ಗ್ರಾಮೀಣ ಕ್ರೀಡೆಯಲ್ಲಿ ಈ ಭಾಗದ ಅನೇಕ ಗ್ರಾಮಗಳ ಜನರು ಭಾಗಿಯಾಗಿ ಏಂಜಾಯ್ ಮಾಡಿದರು.

ಒಟ್ಟಾರೆಯಾಗಿ ಕೋಟೆನಾಡಿನ ಹುಣಸೇಕಟ್ಟೆ ಗ್ರಾಮದಲ್ಲಿ ಜೋಡೆತ್ತಿನ ಗಾಡಿಯ ಓಟದ ಸ್ಪರ್ದೆ ನಡೆಯಿತು. ಸುಮಾರು 30ಕ್ಕೂ ಹೆಚ್ಚು ಸುತ್ತುಗಳಲ್ಲಿ ಓಟದ ಸ್ಪರ್ಧೆ ನಡೆದಿದೆ. ಬೆಳಗ್ಗೆ 10ಗಂಟೆಯಿಂದ ಸಂಜೆಯವರೆಗೆ ನಡೆದ ಗ್ರಾಮೀಣ ಕ್ರೀಡೆಯಲ್ಲಿ ಈ ಭಾಗದ ಅನೇಕ ಗ್ರಾಮಗಳ ಜನರು ಭಾಗಿಯಾಗಿ ಏಂಜಾಯ್ ಮಾಡಿದರು.

6 / 6

Published On - 3:20 pm, Fri, 24 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ