AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: ಒತ್ತಡದಿಂದ ಮುಖ ಕಳೆಗುಂದಿದೆಯೇ? ಚರ್ಮದ ಆರೋಗ್ಯಕ್ಕೆ ಇಲ್ಲಿವೆ ಸಿಂಪಲ್ ಟಿಪ್ಸ್

Stress on face: ಕೆಲಸದ ಹೊರೆ ಮತ್ತು ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಹೆಚ್ಚಿನ ಜನರ ಮುಖದಲ್ಲಿ ಒತ್ತಡವು ಸದಾ ಇರುತ್ತದೆ. ಈ ಒತ್ತಡವನ್ನು ತೆಗೆದುಹಾಕಿ ಚರ್ಮವನ್ನು ಆರಾಮವಾಗಿರುವಂತೆ ಮಾಡಲು ನೀವು ಈ ಪದಾರ್ಥಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಸೌತೇಕಾಯಿ ರಸ, ಗ್ರೀನ್ ಟೀ, ರೋಸ್ ವಾಟರ್, ಕಲ್ಲಂಗಡಿ ಮೊದಲಾದವುಗಳು ಚರ್ಮದ ತ್ವಚೆ ಚೆನ್ನಾಗಿಡಲು ಸಹಾಯ ಮಾಡುತ್ತವೆ.

TV9 Web
| Edited By: |

Updated on: Apr 10, 2022 | 9:02 AM

Share
ಸೌತೆಕಾಯಿ ರಸ: ಚರ್ಮದ ತ್ವಚೆಯನ್ನು ತಾಜಾವಾಗಿಡಲು ಸೌತೇಕಾಯಿ ಸಹಕಾರಿ. ಇದರ ವಿಶೇಷತೆ ಏನೆಂದರೆ, ಹಲವು ತ್ವಚೆಯ ಸಮಸ್ಯೆಗಳನ್ನು ಸೌತೇಕಾಯಿ ದೂರ ಮಾಡುತ್ತದೆ. ತುರಿದ ಸೌತೆಕಾಯಿಯ ರಸವನ್ನು ತೆಗೆದುಕೊಂಡು ಅದನ್ನು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ ಮತ್ತು ಒಣಗಿದ ನಂತರ ತೊಳೆಯಿರಿ.

1 / 5
ಗ್ರೀನ್ ಟೀ: ತೂಕ ಇಳಿಕೆಗೆ ಸಹಕಾರಿಯಾಗಿರುವ ಗ್ರೀನ್ ಟೀ ತ್ವಚೆಯ ಆರೈಕೆಗೂ ಬಳಸಬಹುದು. ಹಸಿರು ಚಹಾದ ಟೋನರನ್ನು ತಯಾರಿಸಿ, ರಾತ್ರಿ ಮಲಗುವ ಮುನ್ನ ಇದನ್ನು ಹಚ್ಚಿ. ಇದರಿಂದ ಚರ್ಮ ಕಾಂತಿಯುತವಾಗಿರುತ್ತದೆ.

2 / 5
ರೋಸ್ ವಾಟರ್: ಅತ್ಯುತ್ತಮ ರೋಸ್ ವಾಟರ್ ತ್ವಚೆಯ ಆರೈಕೆಗೆ ಸಹಕಾರಿ. ಅದಕ್ಕಾಗಿಯೇ ಇದನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತದೆ.

3 / 5
ಕಲ್ಲಂಗಡಿ: ದೇಹವನ್ನು ತೇವಾಂಶದಿಂದ ಇಡುವ ಕಲ್ಲಂಗಡಿ, ತ್ವಚೆಯಲ್ಲಿ ತೇವಾಂಶವನ್ನು ಉಳಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ಮ್ಯಾಶ್ ಮಾಡಿ ಅದರ ರಸವನ್ನು ತೆಗೆದು ಸ್ಪ್ರೇ ಸಹಾಯದಿಂದ ಮುಖಕ್ಕೆ ಹಚ್ಚಿ. ಕಲ್ಲಂಗಡಿಯಲ್ಲಿರುವ ಅಂಶಗಳು ತ್ವಚೆಯನ್ನು ಆರೋಗ್ಯಕರವಾಗಿಸುತ್ತದೆ.

4 / 5
ಮೊಸರು ಮತ್ತು ಸ್ಟ್ರಾಬೆರಿ: ಈ ಎರಡೂ ಪದಾರ್ಥಗಳು ಚರ್ಮದ ಆರೈಕೆಯಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಇವುಗಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಫ್ರೆಶ್ ಆಗಿರುತ್ತದೆ. ಒಂದು ಬಟ್ಟಲಿನಲ್ಲಿ ಎರಡರಿಂದ ಮೂರು ಸ್ಟ್ರಾಬೆರಿಗಳನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ ಒಂದು ಚಮಚ ಮೊಸರು ಸೇರಿಸಿ. ಈ ಪೇಸ್ಟ್ ಒಣಗಿದಾಗ ಅದರಿಂದ ತಣ್ಣೀರಿನ ಮೂಲಕ ಮುಖವನ್ನು ತೊಳೆಯಿರಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ