AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ತೆರೆಗೆ ಬರುತ್ತಿವೆ ಹಲವು ಸಿನಿಮಾಗಳು, ಇಲ್ಲಿದೆ ಪಟ್ಟಿ

Friday release: ಪ್ರತಿ ಬಾರಿಯಂತೆ ಮತ್ತೊಂದು ಶುಕ್ರವಾರ ಬಂದಿದೆ. ಚಿತ್ರ ತಂಡಗಳು ತಿಂಗಳಾನುಗಟ್ಟಲೆ ಕಷ್ಟಪಟ್ಟು, ಕನಸುಗಳ ಹೊತ್ತು ನಿರ್ಮಿಸಿದ ಸಿನಿಮಾಗಳು ತೆರೆಗೆ ಬರುವ ವಾರ ಶುಕ್ರವಾರ. ಈ ವಾರವೂ ಸಹ ಪ್ರತಿ ಬಾರಿಯಂತೆ ಕೆಲವು ಹೊಸ ಸಿನಿಮಾಗಳು ಚಿತ್ರಮಂದಿರಗಳಿಗೆ ಬಂದಿವೆ. ಈ ವಾರ ಬಿಡುಗಡೆ ಆದ ಪ್ರಮುಖ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Nov 20, 2025 | 5:43 PM

Share
ಹೆಸರಿಗೆ ತಕ್ಕಂತೆ ಹಾಸ್ಯಮಯ ಪ್ರೇಮಕತೆಯನ್ನು ಒಳಗೊಂಡಿರುವ ‘ಫುಲ್ ಮೀಲ್ಸ್’ ಕನ್ನಡ ಸಿನಿಮಾ ಇದೇ ವಾರ ಬಿಡುಗಡೆ ಆಗುತ್ತಿದೆ. ಸಿನಿಮಾನಲ್ಲಿ ಖುಷಿ ರವಿ, ತೇಜಸ್ವಿನಿ ಶರ್ಮಾ ನಾಯಕಿಯರು. ಲಿಖಿತ್ ಶೆಟ್ಟಿ ನಾಯಕ. ಇವರ ಜೊತೆಗೆ ರಂಗಾಯಣ ರಘು, ರಾಜೇಶ್ ನಟರಂಗ, ವಿಜಯ್ ಚೆಂಡೂರು ಅವರುಗಳು ನಟಿಸಿದ್ದಾರೆ. ಎನ್ ವಿನಾಯಕ ಈ ಸಿನಿಮಾದ ನಿರ್ದೇಶಕ. ನಾಯಕ ಲಿಖಿತ್ ಶೆಟ್ಟಿ ನಿರ್ಮಾಣವನ್ನೂ ಮಾಡಿದ್ದಾರೆ.

ಹೆಸರಿಗೆ ತಕ್ಕಂತೆ ಹಾಸ್ಯಮಯ ಪ್ರೇಮಕತೆಯನ್ನು ಒಳಗೊಂಡಿರುವ ‘ಫುಲ್ ಮೀಲ್ಸ್’ ಕನ್ನಡ ಸಿನಿಮಾ ಇದೇ ವಾರ ಬಿಡುಗಡೆ ಆಗುತ್ತಿದೆ. ಸಿನಿಮಾನಲ್ಲಿ ಖುಷಿ ರವಿ, ತೇಜಸ್ವಿನಿ ಶರ್ಮಾ ನಾಯಕಿಯರು. ಲಿಖಿತ್ ಶೆಟ್ಟಿ ನಾಯಕ. ಇವರ ಜೊತೆಗೆ ರಂಗಾಯಣ ರಘು, ರಾಜೇಶ್ ನಟರಂಗ, ವಿಜಯ್ ಚೆಂಡೂರು ಅವರುಗಳು ನಟಿಸಿದ್ದಾರೆ. ಎನ್ ವಿನಾಯಕ ಈ ಸಿನಿಮಾದ ನಿರ್ದೇಶಕ. ನಾಯಕ ಲಿಖಿತ್ ಶೆಟ್ಟಿ ನಿರ್ಮಾಣವನ್ನೂ ಮಾಡಿದ್ದಾರೆ.

1 / 5
ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ‘ಮಾರುತ’ ಸಿನಿಮಾ ಈ ವಾರ ಬಿಡುಗಡೆ ಆಗುತ್ತಿದೆ. ಸಿನಿಮಾನಲ್ಲಿ ಶ್ರೇಯಸ್ ಮಂಜು ಜೊತೆಗೆ ದುನಿಯಾ ವಿಜಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ರವಿಚಂದ್ರನ್ ಸಹ ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಬೃಂದಾ ಆಚಾರ್ಯ ಮತ್ತು ನಿಶ್ವಿಕಾ ನಾಯ್ಡು ನಟಿಸಿದ್ದಾರೆ. ಎಸ್ ನಾರಾಯಣ್, ಈ ಸಿನಿಮಾ ನಿರ್ದೇಶಿಸಿದ್ದಾರೆ.

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ‘ಮಾರುತ’ ಸಿನಿಮಾ ಈ ವಾರ ಬಿಡುಗಡೆ ಆಗುತ್ತಿದೆ. ಸಿನಿಮಾನಲ್ಲಿ ಶ್ರೇಯಸ್ ಮಂಜು ಜೊತೆಗೆ ದುನಿಯಾ ವಿಜಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟ ರವಿಚಂದ್ರನ್ ಸಹ ಪ್ರಮುಖ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಬೃಂದಾ ಆಚಾರ್ಯ ಮತ್ತು ನಿಶ್ವಿಕಾ ನಾಯ್ಡು ನಟಿಸಿದ್ದಾರೆ. ಎಸ್ ನಾರಾಯಣ್, ಈ ಸಿನಿಮಾ ನಿರ್ದೇಶಿಸಿದ್ದಾರೆ.

2 / 5
ಅಜಯ್ ರಾವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಥ್ರಿಲ್ಲರ್ ಸಿನಿಮಾ ‘ರಾಧೆಯಾ’ ನಾಳೆ (ನವೆಂಬರ್ 22) ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಸೋನಲ್ ಮೊಂಟೇರೊ ನಾಯಕಿ. ಧನ್ಯಾ ಬಾಲಕೃಷ್ಣ ಸಹ ಸಿನಿಮಾನಲ್ಲಿ ನಟಿಸಿದ್ದಾರೆ. ವೇದ ಗುರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಗಮನ ಸೆಳೆದಿದೆ.

ಅಜಯ್ ರಾವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಥ್ರಿಲ್ಲರ್ ಸಿನಿಮಾ ‘ರಾಧೆಯಾ’ ನಾಳೆ (ನವೆಂಬರ್ 22) ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಸೋನಲ್ ಮೊಂಟೇರೊ ನಾಯಕಿ. ಧನ್ಯಾ ಬಾಲಕೃಷ್ಣ ಸಹ ಸಿನಿಮಾನಲ್ಲಿ ನಟಿಸಿದ್ದಾರೆ. ವೇದ ಗುರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಗಮನ ಸೆಳೆದಿದೆ.

3 / 5
ಕ್ರೈಂ ಥ್ರಿಲ್ಲರ್ ಕತೆಯನ್ನು ಒಳಗೊಂಡ ‘ಟಾಸ್ಕ್’ ಸಿನಿಮಾ ಇದೇ ವಾರ ತೆರೆಗೆ ಬರುತ್ತಿದೆ. ಸಿನಿಮಾ ಅನ್ನು ರಘು ಶಿವಮೊಗ್ಗ ನಿರ್ದೇಶನ ಮಾಡಿದ್ದಾರೆ. ಜಯ ಸೂರ್ಯ ಆಜಾದ್, ಸಾಗರ್ ರಾಮ್, ಅಚ್ಯುತ್ ಕುಮಾರ್, ಸಂಗೀತಾ ಭಟ್, ಬಾಲಾಜಿ ಮನೋಹರ್ ಇನ್ನೂ ಕೆಲವು ಪ್ರತಿಭಾವಂತ ನಟರು ಈ ಸಿನಿಮಾದ ಭಾಗವಾಗಿದ್ದಾರೆ.

ಕ್ರೈಂ ಥ್ರಿಲ್ಲರ್ ಕತೆಯನ್ನು ಒಳಗೊಂಡ ‘ಟಾಸ್ಕ್’ ಸಿನಿಮಾ ಇದೇ ವಾರ ತೆರೆಗೆ ಬರುತ್ತಿದೆ. ಸಿನಿಮಾ ಅನ್ನು ರಘು ಶಿವಮೊಗ್ಗ ನಿರ್ದೇಶನ ಮಾಡಿದ್ದಾರೆ. ಜಯ ಸೂರ್ಯ ಆಜಾದ್, ಸಾಗರ್ ರಾಮ್, ಅಚ್ಯುತ್ ಕುಮಾರ್, ಸಂಗೀತಾ ಭಟ್, ಬಾಲಾಜಿ ಮನೋಹರ್ ಇನ್ನೂ ಕೆಲವು ಪ್ರತಿಭಾವಂತ ನಟರು ಈ ಸಿನಿಮಾದ ಭಾಗವಾಗಿದ್ದಾರೆ.

4 / 5
ಹಾಸ್ಯಮಿಶ್ರಿತ ಪ್ರೇಮಕತೆ ಹೊಂದಿರುವ ‘ಕಂಗ್ರಾಜುಲೇಷನ್ ಬ್ರದರ್’ ಸಿನಿಮಾ ಇದೇ ಶುಕ್ರವಾರ ಬಿಡುಗಡೆ ಆಗುತ್ತಿದೆ. ರಕ್ಷಿತ್ ನಾಗ್ ಈ ಸಿನಿಮಾದ ನಾಯಕ. ಸಂಜನಾ ದಾಸ್ ಮತ್ತು ಅನುಷಾ ಎ ನಾಯಕಿ. ಖ್ಯಾತ ನಟ ಶಶಿಕುಮಾರ್ ಅವರು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಾಪ್ ಗಂಧರ್ವ ಈ ಸಿನಿಮಾದ ನಿರ್ದೇಶಕ.

ಹಾಸ್ಯಮಿಶ್ರಿತ ಪ್ರೇಮಕತೆ ಹೊಂದಿರುವ ‘ಕಂಗ್ರಾಜುಲೇಷನ್ ಬ್ರದರ್’ ಸಿನಿಮಾ ಇದೇ ಶುಕ್ರವಾರ ಬಿಡುಗಡೆ ಆಗುತ್ತಿದೆ. ರಕ್ಷಿತ್ ನಾಗ್ ಈ ಸಿನಿಮಾದ ನಾಯಕ. ಸಂಜನಾ ದಾಸ್ ಮತ್ತು ಅನುಷಾ ಎ ನಾಯಕಿ. ಖ್ಯಾತ ನಟ ಶಶಿಕುಮಾರ್ ಅವರು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಾಪ್ ಗಂಧರ್ವ ಈ ಸಿನಿಮಾದ ನಿರ್ದೇಶಕ.

5 / 5
Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ