AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

Movies on OTT this week: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಈ ವಾರ ಪರಭಾಷೆಯ ಕೆಲವು ಸಿನಿಮಾಗಳು ಸಹ ಬಿಡುಗಡೆ ಆಗಿವೆ. ದೀಪಾವಳಿ ಪ್ರಯುಕ್ತ ಚಿತ್ರಮಂದಿರಗಳಲ್ಲಿ ಕೆಲವಾರು ಸಿನಿಮಾಗಳು ಬಿಡುಗಡೆ ಆಗಿವೆ. ಅದರಂತೆ ಒಟಿಟಿಯಲ್ಲಿಯೂ ಸಹ ದೀಪಾವಳಿ ಪ್ರಯುಕ್ತ ಕೆಲವು ಒಳ್ಳೆಯ ಸಿನಿಮಾಗಳು ಬಿಡುಗಡೆ ಆಗಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Oct 18, 2025 | 5:04 PM

Share
ವಿನಯ್ ರಾಜ್​​ಕುಮಾರ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಗಮನ ಸೆಳೆಯಿತು. ಹೆಸರಿನಂತೆ ಕೆಲ ದಶಕಗಳ ಹಿಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು.

Andondithu Kaalaವಿನಯ್ ರಾಜ್​​ಕುಮಾರ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಗಮನ ಸೆಳೆಯಿತು. ಹೆಸರಿನಂತೆ ಕೆಲ ದಶಕಗಳ ಹಿಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು.

1 / 7
ಕನ್ನಡದ ನಿರ್ದೇಶಕ ಎ ಹರ್ಷ ನಿರ್ದೇಶನ ಮಾಡಿರುವ ಮೊದಲ ಹಿಂದಿ ಸಿನಿಮಾ ‘ಭಾಗಿ 4’ ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರದರ್ಶನ ಕಂಡಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ಈ ವಾರ ಸ್ಟ್ರೀಮಿಂಗ್ ಆರಂಭಿಸಿದೆ.

ಕನ್ನಡದ ನಿರ್ದೇಶಕ ಎ ಹರ್ಷ ನಿರ್ದೇಶನ ಮಾಡಿರುವ ಮೊದಲ ಹಿಂದಿ ಸಿನಿಮಾ ‘ಭಾಗಿ 4’ ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರದರ್ಶನ ಕಂಡಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ಈ ವಾರ ಸ್ಟ್ರೀಮಿಂಗ್ ಆರಂಭಿಸಿದೆ.

2 / 7
ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾಗಳಲ್ಲಿ ಒಂದು ಒಳ್ಳೆಯ ಸಿನಿಮಾ ಎಂದರೆ ‘ಏಳುಮಲೆ’. ತರುಣ್ ಸುಧೀರ್ ನಿರ್ಮಾಣ ಮಾಡಿ ಪುನೀತ್ ರಂಗಸ್ವಾಮಿ ನಿರ್ದೇಶಿಸಿರುವ ಸಿನಿಮಾನಲ್ಲಿ ರಾಣಾ ನಾಯಕ. ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿಯಾಯ್ತು. ಇದೀಗ ಸಿನಿಮಾ ಜೀ 5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾಗಳಲ್ಲಿ ಒಂದು ಒಳ್ಳೆಯ ಸಿನಿಮಾ ಎಂದರೆ ‘ಏಳುಮಲೆ’. ತರುಣ್ ಸುಧೀರ್ ನಿರ್ಮಾಣ ಮಾಡಿ ಪುನೀತ್ ರಂಗಸ್ವಾಮಿ ನಿರ್ದೇಶಿಸಿರುವ ಸಿನಿಮಾನಲ್ಲಿ ರಾಣಾ ನಾಯಕ. ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿಯಾಯ್ತು. ಇದೀಗ ಸಿನಿಮಾ ಜೀ 5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 7
ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಫೈನಲ್ ಡೆಸ್ಟಿನೇಷನ್: ಬ್ಲಡ್​​ಲೈನ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಫೈನಲ್ ಡೆಸ್ಟಿನೇಷನ್: ಬ್ಲಡ್​​​ಲೈನ್’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಒಟಿಟಿಗೆ ಬಂದಿದೆ.

ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಫೈನಲ್ ಡೆಸ್ಟಿನೇಷನ್: ಬ್ಲಡ್​​ಲೈನ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಫೈನಲ್ ಡೆಸ್ಟಿನೇಷನ್: ಬ್ಲಡ್​​​ಲೈನ್’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಒಟಿಟಿಗೆ ಬಂದಿದೆ.

4 / 7
ತೆಲುಗಿನ ‘ಕಿಷ್ಕಿಂಧಾಪುರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್, ಅನುಪಮಾ ಪರಮೇಶ್ವರನ್ ಅವರುಗಳು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಸಿನಿಮಾ ಇದೀಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತೆಲುಗಿನ ‘ಕಿಷ್ಕಿಂಧಾಪುರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್, ಅನುಪಮಾ ಪರಮೇಶ್ವರನ್ ಅವರುಗಳು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಸಿನಿಮಾ ಇದೀಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 7
ಹೊಸದಾಗಿ ಮದುವೆ ಆಗಿರುವ ಸವದೇವನ್ ಎಂಬಾತ ಪತ್ನಿ ಹಾಕಿರುವ ಸುಳ್ಳು ದೌರ್ಜನ್ಯ ಮತ್ತು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಆತ ಹೇಗೆ ಹೊರಗೆ ಬರುತ್ತಾನೆ ಎಂಬುದು ಸಿನಿಮಾದ ಕತೆ. ಈ ಸಿನಿಮಾ ಈಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಹೊಸದಾಗಿ ಮದುವೆ ಆಗಿರುವ ಸವದೇವನ್ ಎಂಬಾತ ಪತ್ನಿ ಹಾಕಿರುವ ಸುಳ್ಳು ದೌರ್ಜನ್ಯ ಮತ್ತು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಆತ ಹೇಗೆ ಹೊರಗೆ ಬರುತ್ತಾನೆ ಎಂಬುದು ಸಿನಿಮಾದ ಕತೆ. ಈ ಸಿನಿಮಾ ಈಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 7
ವಿದೇಶದಿಂದ ಆಸ್ಕರ್​​ಗೆ ಕಳಿಸಲ್ಪಟ್ಟಿರುವ ಭಾರತದ ಸಿನಿಮಾ ‘ಸಂತೋಷ್’. ವಿಧವೆ ಯುವತಿಯೊಬ್ಬಾಕೆ ಪತಿಯ ಪೊಲೀಸ್ ಉದ್ಯೋಗವನ್ನು ಪಡೆದುಕೊಂಡು ದಲಿತ ಯುವತಿಯ ಹತ್ಯೆ ಪ್ರಕರಣದ ತನಿಖೆಗೆ ಇಳಿಯುತ್ತಾಳೆ. ಇದೊಂದು ಅದ್ಭುತ ಸಿನಿಮಾ ಆಗಿದ್ದು ಸಿನಿಮಾ ಅನ್ನು ಲಯನ್ಸ್​​ಗೇಟ್​​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

ವಿದೇಶದಿಂದ ಆಸ್ಕರ್​​ಗೆ ಕಳಿಸಲ್ಪಟ್ಟಿರುವ ಭಾರತದ ಸಿನಿಮಾ ‘ಸಂತೋಷ್’. ವಿಧವೆ ಯುವತಿಯೊಬ್ಬಾಕೆ ಪತಿಯ ಪೊಲೀಸ್ ಉದ್ಯೋಗವನ್ನು ಪಡೆದುಕೊಂಡು ದಲಿತ ಯುವತಿಯ ಹತ್ಯೆ ಪ್ರಕರಣದ ತನಿಖೆಗೆ ಇಳಿಯುತ್ತಾಳೆ. ಇದೊಂದು ಅದ್ಭುತ ಸಿನಿಮಾ ಆಗಿದ್ದು ಸಿನಿಮಾ ಅನ್ನು ಲಯನ್ಸ್​​ಗೇಟ್​​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

7 / 7
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ