AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕುತೂಹಲಕಾರಿ ಸಿನಿಮಾಗಳು, ಪಟ್ಟಿ ಇಲ್ಲಿದೆ

OTT Release this week: ಪ್ರತಿ ವಾರದಂತೆ ಈ ವಾರವೂ ಒಟಿಟಿಗೆ ಕೆಲವು ಆಸಕ್ತಿಕರ ಸಿನಿಮಾ ಮತ್ತು ವೆಬ್ ಸರಣಿಗಳು ಬಂದಿವೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆದ ಕೆಲ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿರುವುದು ವಿಶೇಷ. ಜೊತೆಗೆ ಹಾರರ್, ಥ್ರಿಲ್ಲರ್, ಕಾಮಿಡಿ, ಆಕ್ಷನ್ ಹೀಗೆ ಹಲವು ಜಾನರ್​​ನ ಹೊಸ ಸಿನಿಮಾ ಮತ್ತು ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಇಲ್ಲಿದೆ ನೋಡಿ ಪಟ್ಟಿ...

ಮಂಜುನಾಥ ಸಿ.
|

Updated on: Jul 04, 2026 | 3:27 PM

Share
‘ಮುತ್ತಸ್ಸಿ’ ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿನ ಕಾಡು ಹಳ್ಳಿಯೊಂದರಲ್ಲಿ ನಡೆಯುವ ಕತೆಯನ್ನು ಆಧರಿಸಿದ ವೆಬ್ ಸರಣಿ ‘ಮುತ್ತಸ್ಸಿ’ ಮಲಯಾಳಂ ಭಾಷೆಯ ವೆಬ್ ಸರಣಿಯಾದರೂ ತುಳು ಭಾಷೆ, ಕನ್ನಡದ ಬಳಕೆಯೂ ಸಾಕಷ್ಟಿದೆ. ಸೂಪರ್ ನ್ಯಾಚುರಲ್ ಕತೆಯನ್ನು ಒಳಗೊಂಡಿರುವ ಈ ವೆಬ್ ಸರಣಿ ಇದೀಗ ಜೀ5ನಲ್ಲಿ ಬಿಡುಗಡೆ ಆಗಿದೆ.

‘ಮುತ್ತಸ್ಸಿ’ ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿನ ಕಾಡು ಹಳ್ಳಿಯೊಂದರಲ್ಲಿ ನಡೆಯುವ ಕತೆಯನ್ನು ಆಧರಿಸಿದ ವೆಬ್ ಸರಣಿ ‘ಮುತ್ತಸ್ಸಿ’ ಮಲಯಾಳಂ ಭಾಷೆಯ ವೆಬ್ ಸರಣಿಯಾದರೂ ತುಳು ಭಾಷೆ, ಕನ್ನಡದ ಬಳಕೆಯೂ ಸಾಕಷ್ಟಿದೆ. ಸೂಪರ್ ನ್ಯಾಚುರಲ್ ಕತೆಯನ್ನು ಒಳಗೊಂಡಿರುವ ಈ ವೆಬ್ ಸರಣಿ ಇದೀಗ ಜೀ5ನಲ್ಲಿ ಬಿಡುಗಡೆ ಆಗಿದೆ.

1 / 5
ನಸ್ಲಿನ್ ಗಫೂರ್ ನಟಿಸಿರುವ ಮಲಯಾಳಂ ಸಿನಿಮಾ ‘ಮಾಲಿವುಡ್ ಟೈಮ್ಸ್’ ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ವಿಮರ್ಶಕರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

ನಸ್ಲಿನ್ ಗಫೂರ್ ನಟಿಸಿರುವ ಮಲಯಾಳಂ ಸಿನಿಮಾ ‘ಮಾಲಿವುಡ್ ಟೈಮ್ಸ್’ ಕೆಲ ದಿನಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಕಂಡಿತ್ತು. ಸಿನಿಮಾದ ವಿಮರ್ಶಕರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

2 / 5
ವಿಶ್ವ ವಿಖ್ಯಾತ ‘ಗೇಮ್ ಆಫ್ ಥ್ರೋನ್ಸ್’ ವೆಬ್ ಸರಣಿಯ ಪ್ರೀಕ್ವೆಲ್ ಆಗಿರುವ ‘ಹೌಸ್ ಆಫ್ ದಿ ಡ್ರ್ಯಾಗನ್’ನ ಮೂರನೇ ಸೀಸನ್​​ನ ಮೂರನೇ ಎಪಿಸೋಡ್ ಇದೇ ಭಾನುವಾರ ಬಿಡುಗಡೆ ಆಗಲಿದೆ. ಈ ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

ವಿಶ್ವ ವಿಖ್ಯಾತ ‘ಗೇಮ್ ಆಫ್ ಥ್ರೋನ್ಸ್’ ವೆಬ್ ಸರಣಿಯ ಪ್ರೀಕ್ವೆಲ್ ಆಗಿರುವ ‘ಹೌಸ್ ಆಫ್ ದಿ ಡ್ರ್ಯಾಗನ್’ನ ಮೂರನೇ ಸೀಸನ್​​ನ ಮೂರನೇ ಎಪಿಸೋಡ್ ಇದೇ ಭಾನುವಾರ ಬಿಡುಗಡೆ ಆಗಲಿದೆ. ಈ ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

3 / 5
‘3 ಇಡಿಯಟ್ಸ್’, ‘ಪಿಕೆ’, ‘ಮುನ್ನಾಭಾಯಿ’, ‘ಲಗೆ ರಹೊ ಮುನ್ನಾಭಾಯಿ’ ಅಂಥಹಾ ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿರುವ ಮೊದಲ ವೆಬ್ ಸರಣಿ ‘ಪ್ರೀತಂ ಆಂಡ್ ಪೆದ್ರೊ’ ಈ ವಾರ ಒಟಿಟಿಗೆ ಬಂದಿದೆ. ಅರ್ಷದ್ ವಾರ್ಸಿ, ವಿಕ್ರಾಂತ್ ಮಾಸ್ಸಿ ಇನ್ನೂ ಕೆಲವರು ನಟಿಸಿರುವ ಈ ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

‘3 ಇಡಿಯಟ್ಸ್’, ‘ಪಿಕೆ’, ‘ಮುನ್ನಾಭಾಯಿ’, ‘ಲಗೆ ರಹೊ ಮುನ್ನಾಭಾಯಿ’ ಅಂಥಹಾ ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿರುವ ಮೊದಲ ವೆಬ್ ಸರಣಿ ‘ಪ್ರೀತಂ ಆಂಡ್ ಪೆದ್ರೊ’ ಈ ವಾರ ಒಟಿಟಿಗೆ ಬಂದಿದೆ. ಅರ್ಷದ್ ವಾರ್ಸಿ, ವಿಕ್ರಾಂತ್ ಮಾಸ್ಸಿ ಇನ್ನೂ ಕೆಲವರು ನಟಿಸಿರುವ ಈ ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

4 / 5
ಮಲಯಾಳಂ ಚಿತ್ರರಂಗ ಹಾರರ್, ಥ್ರಿಲ್ಲರ್ ಸಿನಿಮಾಗಳನ್ನು ಅದ್ಭುತವಾಗಿ ತೆರೆಗೆ ತರುತ್ತಾರೆ. ಇದೀಗ ‘ಕರಕ್ಕಂ’ ಹೆಸರಿನ ಹಾರರ್ ಸಿನಿಮಾ ಒಟಿಟಿಗೆ ಬಂದಿದೆ. ಮಲಯಾಳಂನ ಈ ಸಿನಿಮಾ ಹಾರರ್ ಜೊತೆಗೆ ಹಾಸ್ಯವನ್ನೂ ಸಹ ಒಳಗೊಂಡಿದೆ. ಸಿನಿಮಾವನ್ನು ಸೋನಿ ಲಿವ್​​ನಲ್ಲಿ ವೀಕ್ಷಿಸಬಹುದಾಗಿದೆ.

ಮಲಯಾಳಂ ಚಿತ್ರರಂಗ ಹಾರರ್, ಥ್ರಿಲ್ಲರ್ ಸಿನಿಮಾಗಳನ್ನು ಅದ್ಭುತವಾಗಿ ತೆರೆಗೆ ತರುತ್ತಾರೆ. ಇದೀಗ ‘ಕರಕ್ಕಂ’ ಹೆಸರಿನ ಹಾರರ್ ಸಿನಿಮಾ ಒಟಿಟಿಗೆ ಬಂದಿದೆ. ಮಲಯಾಳಂನ ಈ ಸಿನಿಮಾ ಹಾರರ್ ಜೊತೆಗೆ ಹಾಸ್ಯವನ್ನೂ ಸಹ ಒಳಗೊಂಡಿದೆ. ಸಿನಿಮಾವನ್ನು ಸೋನಿ ಲಿವ್​​ನಲ್ಲಿ ವೀಕ್ಷಿಸಬಹುದಾಗಿದೆ.

5 / 5
Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ