ಗದಗ ಜಿಲ್ಲೆಯೊಂದರಲ್ಲಿ ವಿಶಿಷ್ಟ ಜಾತ್ರೆ: ನೋಡುಗರ ಮೈನವಿರೇಳಿಸುವ ದೃಶ್ಯಗಳು, ಫೋಟೋಸ್​ ನೋಡಿ

Edited By: ವಿವೇಕ ಬಿರಾದಾರ

Updated on: Feb 05, 2025 | 8:25 AM

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವೀರಭದ್ರೇಶ್ವರ ದೇವಾಲಯದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶ್ರೀಶೈಲ ಶ್ರೀಗಳು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಭಕ್ತರು ತಮ್ಮ ಭಕ್ತಿಯನ್ನು ಪ್ರದರ್ಶಿಸಿದರು. ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 5
ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದ ಜನರು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ವೀರಭದ್ರೇಶ್ವರ ದೇಗುಲ ಕಟ್ಟಿದ್ದಾರೆ. ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸಡಗರದಿಂದ ನಡೆಯಿತು.

2 / 5
ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಪ್ರಾಣಪ್ರತಿಷ್ಠಾಪನೆಗೂ ಮುನ್ನ ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಶ್ರೀಶೈಲ ಶ್ರೀಗಳು ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್​ ಸದಸ್ಯ ಎಸ್​.ವಿ.ಸಂಕನೂರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

3 / 5
ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

ಪುರುವಂತರು ಬಾಯಿಗೆ ಸಲಾಕೆಯಿಂದ ಚುಚ್ಚಿಕೊಂಡರು.ದವಡೆಯಿಂದ ದಾರ ಹಾಕಿ ಎಳೆಯುವ ದೃಶ್ಯ ಮೈ ಜುಮ್ಮೆನಿಸುವಂತಿತ್ತು.

4 / 5
ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

ಇದೇ ದೇಗುಲದಲ್ಲಿ ವೀರಭದ್ರೇಶ್ವರ, ಭದ್ರಕಾಳಿ, ಸುಬ್ರಹ್ಮಣ್ಯ ದೇವರ ಪ್ರಾಣ ಪ್ರತಿಷ್ಠಾಪನೆ ಕೂಡ ಮಾಡಲಾಯಿತು.ಈ ವೇಳೆ ಹರಕೆ ಹೊತ್ತ ಭಕ್ತರು ಕೈಗೆ, ಕೆನ್ನೆಗೆ ಮತ್ತು ನಾಲಿಗೆಗೆ ಶಸ್ತ್ರ ಚುಚ್ಕಿಕೊಂಡು ಭಕ್ತಿ ಪರಾಕಾಷ್ಠೆ ಮೆರೆದರು.

5 / 5
ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

ಆಧುನಿಕ ಕಾಲದಲ್ಲೂ ಇಂತಹ ಆಚರಣೆಗಳು ಅಲ್ಲಲ್ಲಿ ನಡೆಯುತ್ತಿವೆ. ಶಸ್ತ್ರ ಪವಾಡ ಎನ್ನುವ ಭಕ್ತಿಯ ಪರಾಕಾಷ್ಠೆಗೆ ಜನರು ಅಬ್ಬಾ ಅಂತ ಉದ್ಘರಿಸಿದರು. ಇದರಿಂದ ಏನೂ ಅಪಾಯ ಆಗಲ್ಲ ಎಂಬ ಬಲವಾದ ನಂಬಿಕೆ ಭಕ್ತರದ್ದು.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us