- Kannada News Photo gallery Holige Festival in Chitradurga, Holige offering for deitee, Know speciality adnd detaile here in Kannada
ಕೋಟೆನಾಡು ಚಿತ್ರದುರ್ಗದಲ್ಲಿ ಹೋಳಿಗೆ ಹಬ್ಬ, ರಾಶಿ ರಾಶಿ ಹೋಳಿಗೆ ನೈವೇದ್ಯ; ಏನಿದರ ವಿಶೇಷ? ಇಲ್ಲಿದೆ ನೋಡಿ
ಹಬ್ಬ ಹುಣ್ಣಿಮೆಗಳ ಸಂದರ್ಭದಲ್ಲಿ ಹೋಳಿಗೆ ಮಾಡುವುದು ಸಹಜ. ವಿಶೇಷ ಸಂದರ್ಭಗಳಲ್ಲಿ ಆರಾಧ್ಯ ದೇವರಿಗೆ ನೈವೇದ್ಯ ಅರ್ಪಿಸುವ ಆಚರಣೆಗಳು ಜಾರಿಯಲ್ಲಿವೆ. ಆದರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಹೋಳಿಗೆ ಹಬ್ಬವನ್ನೇ ಆಚರಿಸಲಾಗುತ್ತದೆ. ದೇಗುಲದಲ್ಲಿ ರಾಶಿ ರಾಶಿ ಹೋಳಿಗೆ ನೈವೇದ್ಯ ಅರ್ಪಿಸಲಾಗುತ್ತದೆ. ಏನಿದರ ವಿಶೇಷ? ಇಲ್ಲಿದೆ ಮಾಹಿತಿ.
Updated on: Aug 02, 2024 | 10:49 AM

ದೇವಿಯ ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗೆ ನೈವೇದ್ಯ. ಆರಾಧ್ಯ ದೇವಿಯ ದರ್ಶನ ಪಡೆದ ಭಕ್ತರಲ್ಲಿ ಕೃತಾರ್ಥ ಭಾವ. ಇದು ದುರ್ಗದಲ್ಲಿ ಹೋಳಿಗೆ ಹಬ್ಬ ಆಚರಿಸುವ ವಿಶೇಷ ಝಲಕ್.

ಕೋಟೆನಾಡು ಚಿತ್ರದುರ್ಗ ನಗರದ ಕರುವಿನಕಟ್ಟೆ ವೃತ್ತದ ಬಳಿಯ ಶ್ರೀ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ದೇಗುಲ ಬಳಿಯ ದೃಶ್ಯವಿದು. ಪ್ರತಿ ವರ್ಷ ಆಷಾಢ ಮಾಸದ ಕೊನೆಯಲ್ಲಿ ಹೋಳಿಗೆ ಹಬ್ಬ ಆಚರಣೆ ಆಚರಿಸಲಾಗುತ್ತದೆ.

ಭಕ್ತರು ಪ್ರತಿ ಮನೆಗಳಲ್ಲಿ ಹೋಳಿಗೆ ಮಾಡಿ ದೇವಿಗೆ ನೈವೇದ್ಯ ತರುತ್ತಾರೆ. ದೇಗುಲದ ಅಂಗಳದಲ್ಲಿ ರಾಶಿ ರಾಶಿ ಹೋಳಿಗಗಳನ್ನಿಟ್ಟು ಪೂಜಿಸಿ ದೇವಿಗೆ ಅರ್ಪಿಸಲಾಗುತ್ತದೆ. ಆ ಮೂಲಕ ಮಕ್ಕಳಿಗೆ ರೋಗ ರುಜನಿಗಳು ಕಾಡದಿರಲಿ ಎಂದು ಪ್ರಾರ್ಥಿಸಲಾಗುತ್ತದೆ.

ಹೋಳಿಗೆ ಜತೆಗೆ ಕುಡಿಕೆ, ಮೊಸರನ್ನ, ಬೇವು, ತೆಂಗಿನ ಕಾಯಿ, ಬಾಳೇಹಣ್ಣು ಮತ್ತಿತರೆ ವಸ್ತುಗಳನ್ನು ನೈವೇದ್ಯವನ್ನಾಗಿ ದೇವಿಗೆ ಅರ್ಪಿಸಲಾಗುತ್ತದೆ. ಸಂಜೆ ವೇಳೆಗೆ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯುತ್ತದೆ. ಬಳಿಕ ಮದ್ಯರಾತ್ರಿ ವೇಳೆಗೆ ದೇವಿಗೆ ಅರ್ಪಿಸಿದ ನೈವೇದ್ಯವನ್ನು ಟ್ರ್ಯಾಕ್ಟರ್ನಲ್ಲಿ ತುಂಬಿ ಊರಸೀಮೆಗೆ ಕೊಂಡೊಯ್ದು ಹಾಕಲಾಗುತ್ತದೆ.

ಈ ಆಚರಣೆಯಿಂದ ನಾಡಿನ ಜನರಿಗೆ ರೋಗ ರುಜನಿಗಳು ಬಾಧಿಸಲ್ಲ. ಮಳೆ ಬೆಳೆ ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಒಂದು ಕಡೆ ರೋಗ ರುಜಿನ ದೂರವಾಗಿ ಮಳೆ ಬೆಳೆ ಸಮೃದ್ಧಿ ಆಗಿರುತ್ತದೆಂಬ ನಂಬಿಕೆ ಜನರಲ್ಲಿದೆ. ಮತ್ತೊಂದು ಕಡೆ ಆಷಾಢ ಮಾಸದಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರದ ಕೊರತೆ ಆಗಿರುತ್ತದೆ. ಹೀಗಾಗಿ, ಊರ ಸೀಮೆಯಲ್ಲಿ ಆಹಾರ ಹಾಕಿದರೆ ಪ್ರಾಣಿ ಪಕ್ಷಿಗಳಿಗೆ ಆಹಾರ ದಕ್ಕುತ್ತದೆಂಬ ವೈಚಾರಿಕ ಚಿಂತನೆಯೂ ಈ ಆಚರಣೆಯ ಹಿಂದಿದೆ ಎನ್ನಲಾಗುತ್ತದೆ.

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
Read More