ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ
ಹೃತಿಕ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 26, 2024 | 8:57 AM

ಯಶಸ್ಸು ಸಿಕ್ಕ ಮೇಲೆ ಅಥವಾ ಒಂದು ಹಂತ ದಾಟಿದ ಮೇಲೆ ಖುಷಿ ಸಿಗುತ್ತದೆ ಎಂದು ಅನೇಕರು ಭಾವಿಸಿರುತ್ತಾರೆ. ಇದು ಸಮಾಜದಲ್ಲಿರುವ ನಂಬಿಕೆ ಕೂಡ ಹೌದು. ಆದರೆ, ಸಕ್ಸಸ್​​ನ ಆಸ್ವಾದಿಸಿದವರಿಗೆ ಖುಷಿಯ ಅನುಭವ ಆಗುತ್ತದೆಯೇ? ಇಲ್ಲ ಎನ್ನುತ್ತಾರೆ ಹೃತಿಕ್ ರೋಷನ್. ಬಾಲಿವುಡ್​ನ ಯಶಸ್ವಿ ಹೀರೋಗಳಲ್ಲಿ ಅವರೂ ಒಬ್ಬರು. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

‘ಯಶಸ್ಸು ಸಿಕ್ಕ ಬಳಿಕ ಖುಷಿ ಸಿಗುತ್ತದೆ ಎಂದು ಯಾರೋ ಹೇಳಿದ್ದರು. ಸಕ್ಸಸ್ ಹಾಗೂ ಖುಷಿ ಎರಡೂ ಒಂದೇ ಎಂದು ಹೇಳಿದ್ದರು. ನಾನು ಹೋಗಿ ಹುಡುಕಿದೆ. ಆದರೆ ಸಿಕ್ಕಿಲ್ಲ. ಖುಷಿಯಾಗಿರೋದು ಒಂದು ಪ್ರ್ಯಾಕ್ಟಿಸ್. ಅದನ್ನು ನಾವು ನಿತ್ಯವೂ ಮಾಡಬೇಕು. ಅದನ್ನು ಎಲ್ಲರಿಗೂ ಹೇಳಿಕೊಡಬೇಕು. ಅಂದಾಗ ಮಾತ್ರ ಖುಷಿಯಿಂದ ಇರಲು ಸಾಧ್ಯ’ ಎಂದಿದ್ದಾರೆ ಅವರು.

ಹೃತಿಕ್ ರೋಷನ್ ಅವರ ಮಾತನ್ನು ಅನೇಕರು ಒಪ್ಪಿದ್ದಾರೆ. ಈ ವಿಡಿಯೋಗೆ ನಾನಾ ವಿವಿಧ ಕಮೆಂಟ್​ಗಳು ಬಂದಿವೆ. ‘ಹೌದು, ಖುಷಿ ಅನ್ನೋದು ಯಾವುದೋ ಸ್ಥಾನದಲ್ಲಿ ಇರುವುದಿಲ್ಲ. ಅದು ನಮ್ಮಲ್ಲೇ ಇರುತ್ತದೆ. ಅದನ್ನು ಎಂದಿಗೂ ಹುಡುಕಲು ಹೋಗಬಾರದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಹೃತಿಕ್ ಅವರು ಖುಷಿಯಿಂದ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಹೃತಿಕ್ ರೋಷನ್ ಅವರು ಸ್ಟಾರ್ ಕಿಡ್. ಅವರ ತಂದೆ ರಾಕೇಶ್ ರೋಶನ್ ಖ್ಯಾತ ನಿರ್ದೇಶಕರು ಹಾಗೂ ನಿರ್ಮಾಪಕರು. ಈ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. ಅವರು ನಂತರ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು. ಹೃತಿಕ್ ಬೇಡಿಕೆ ಈಗ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ಹೃತಿಕ್ ರೋಷನ್​ ಫ್ಯಾಮಿಲಿ ಬಗ್ಗೆ ನೆಟ್​ಫ್ಲಿಕ್ಸ್​ ಡಾಕ್ಯುಮೆಂಟರಿ; ಯಾವಾಗ ಪ್ರಸಾರ?

ಹೃತಿಕ ಅವರು ‘ವಾರ್’ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ವರ್ಷ ರಿಲೀಸ್ ಆದ ಅವರ ನಟನೆಯ ‘ಫೈಟರ್’ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ದಕ್ಷಿಣದ ಹೀರೋ ಜೂನಿಯರ್ ಎನ್​ಟಿಆರ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್