AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ
ಹೃತಿಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 26, 2024 | 8:57 AM

Share

ಯಶಸ್ಸು ಸಿಕ್ಕ ಮೇಲೆ ಅಥವಾ ಒಂದು ಹಂತ ದಾಟಿದ ಮೇಲೆ ಖುಷಿ ಸಿಗುತ್ತದೆ ಎಂದು ಅನೇಕರು ಭಾವಿಸಿರುತ್ತಾರೆ. ಇದು ಸಮಾಜದಲ್ಲಿರುವ ನಂಬಿಕೆ ಕೂಡ ಹೌದು. ಆದರೆ, ಸಕ್ಸಸ್​​ನ ಆಸ್ವಾದಿಸಿದವರಿಗೆ ಖುಷಿಯ ಅನುಭವ ಆಗುತ್ತದೆಯೇ? ಇಲ್ಲ ಎನ್ನುತ್ತಾರೆ ಹೃತಿಕ್ ರೋಷನ್. ಬಾಲಿವುಡ್​ನ ಯಶಸ್ವಿ ಹೀರೋಗಳಲ್ಲಿ ಅವರೂ ಒಬ್ಬರು. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

‘ಯಶಸ್ಸು ಸಿಕ್ಕ ಬಳಿಕ ಖುಷಿ ಸಿಗುತ್ತದೆ ಎಂದು ಯಾರೋ ಹೇಳಿದ್ದರು. ಸಕ್ಸಸ್ ಹಾಗೂ ಖುಷಿ ಎರಡೂ ಒಂದೇ ಎಂದು ಹೇಳಿದ್ದರು. ನಾನು ಹೋಗಿ ಹುಡುಕಿದೆ. ಆದರೆ ಸಿಕ್ಕಿಲ್ಲ. ಖುಷಿಯಾಗಿರೋದು ಒಂದು ಪ್ರ್ಯಾಕ್ಟಿಸ್. ಅದನ್ನು ನಾವು ನಿತ್ಯವೂ ಮಾಡಬೇಕು. ಅದನ್ನು ಎಲ್ಲರಿಗೂ ಹೇಳಿಕೊಡಬೇಕು. ಅಂದಾಗ ಮಾತ್ರ ಖುಷಿಯಿಂದ ಇರಲು ಸಾಧ್ಯ’ ಎಂದಿದ್ದಾರೆ ಅವರು.

ಹೃತಿಕ್ ರೋಷನ್ ಅವರ ಮಾತನ್ನು ಅನೇಕರು ಒಪ್ಪಿದ್ದಾರೆ. ಈ ವಿಡಿಯೋಗೆ ನಾನಾ ವಿವಿಧ ಕಮೆಂಟ್​ಗಳು ಬಂದಿವೆ. ‘ಹೌದು, ಖುಷಿ ಅನ್ನೋದು ಯಾವುದೋ ಸ್ಥಾನದಲ್ಲಿ ಇರುವುದಿಲ್ಲ. ಅದು ನಮ್ಮಲ್ಲೇ ಇರುತ್ತದೆ. ಅದನ್ನು ಎಂದಿಗೂ ಹುಡುಕಲು ಹೋಗಬಾರದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಹೃತಿಕ್ ಅವರು ಖುಷಿಯಿಂದ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಹೃತಿಕ್ ರೋಷನ್ ಅವರು ಸ್ಟಾರ್ ಕಿಡ್. ಅವರ ತಂದೆ ರಾಕೇಶ್ ರೋಶನ್ ಖ್ಯಾತ ನಿರ್ದೇಶಕರು ಹಾಗೂ ನಿರ್ಮಾಪಕರು. ಈ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. ಅವರು ನಂತರ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು. ಹೃತಿಕ್ ಬೇಡಿಕೆ ಈಗ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ಹೃತಿಕ್ ರೋಷನ್​ ಫ್ಯಾಮಿಲಿ ಬಗ್ಗೆ ನೆಟ್​ಫ್ಲಿಕ್ಸ್​ ಡಾಕ್ಯುಮೆಂಟರಿ; ಯಾವಾಗ ಪ್ರಸಾರ?

ಹೃತಿಕ ಅವರು ‘ವಾರ್’ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ವರ್ಷ ರಿಲೀಸ್ ಆದ ಅವರ ನಟನೆಯ ‘ಫೈಟರ್’ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ದಕ್ಷಿಣದ ಹೀರೋ ಜೂನಿಯರ್ ಎನ್​ಟಿಆರ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್