AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ
ಹೃತಿಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 26, 2024 | 8:57 AM

Share

ಯಶಸ್ಸು ಸಿಕ್ಕ ಮೇಲೆ ಅಥವಾ ಒಂದು ಹಂತ ದಾಟಿದ ಮೇಲೆ ಖುಷಿ ಸಿಗುತ್ತದೆ ಎಂದು ಅನೇಕರು ಭಾವಿಸಿರುತ್ತಾರೆ. ಇದು ಸಮಾಜದಲ್ಲಿರುವ ನಂಬಿಕೆ ಕೂಡ ಹೌದು. ಆದರೆ, ಸಕ್ಸಸ್​​ನ ಆಸ್ವಾದಿಸಿದವರಿಗೆ ಖುಷಿಯ ಅನುಭವ ಆಗುತ್ತದೆಯೇ? ಇಲ್ಲ ಎನ್ನುತ್ತಾರೆ ಹೃತಿಕ್ ರೋಷನ್. ಬಾಲಿವುಡ್​ನ ಯಶಸ್ವಿ ಹೀರೋಗಳಲ್ಲಿ ಅವರೂ ಒಬ್ಬರು. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

‘ಯಶಸ್ಸು ಸಿಕ್ಕ ಬಳಿಕ ಖುಷಿ ಸಿಗುತ್ತದೆ ಎಂದು ಯಾರೋ ಹೇಳಿದ್ದರು. ಸಕ್ಸಸ್ ಹಾಗೂ ಖುಷಿ ಎರಡೂ ಒಂದೇ ಎಂದು ಹೇಳಿದ್ದರು. ನಾನು ಹೋಗಿ ಹುಡುಕಿದೆ. ಆದರೆ ಸಿಕ್ಕಿಲ್ಲ. ಖುಷಿಯಾಗಿರೋದು ಒಂದು ಪ್ರ್ಯಾಕ್ಟಿಸ್. ಅದನ್ನು ನಾವು ನಿತ್ಯವೂ ಮಾಡಬೇಕು. ಅದನ್ನು ಎಲ್ಲರಿಗೂ ಹೇಳಿಕೊಡಬೇಕು. ಅಂದಾಗ ಮಾತ್ರ ಖುಷಿಯಿಂದ ಇರಲು ಸಾಧ್ಯ’ ಎಂದಿದ್ದಾರೆ ಅವರು.

ಹೃತಿಕ್ ರೋಷನ್ ಅವರ ಮಾತನ್ನು ಅನೇಕರು ಒಪ್ಪಿದ್ದಾರೆ. ಈ ವಿಡಿಯೋಗೆ ನಾನಾ ವಿವಿಧ ಕಮೆಂಟ್​ಗಳು ಬಂದಿವೆ. ‘ಹೌದು, ಖುಷಿ ಅನ್ನೋದು ಯಾವುದೋ ಸ್ಥಾನದಲ್ಲಿ ಇರುವುದಿಲ್ಲ. ಅದು ನಮ್ಮಲ್ಲೇ ಇರುತ್ತದೆ. ಅದನ್ನು ಎಂದಿಗೂ ಹುಡುಕಲು ಹೋಗಬಾರದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಹೃತಿಕ್ ಅವರು ಖುಷಿಯಿಂದ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಹೃತಿಕ್ ರೋಷನ್ ಅವರು ಸ್ಟಾರ್ ಕಿಡ್. ಅವರ ತಂದೆ ರಾಕೇಶ್ ರೋಶನ್ ಖ್ಯಾತ ನಿರ್ದೇಶಕರು ಹಾಗೂ ನಿರ್ಮಾಪಕರು. ಈ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. ಅವರು ನಂತರ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು. ಹೃತಿಕ್ ಬೇಡಿಕೆ ಈಗ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ಹೃತಿಕ್ ರೋಷನ್​ ಫ್ಯಾಮಿಲಿ ಬಗ್ಗೆ ನೆಟ್​ಫ್ಲಿಕ್ಸ್​ ಡಾಕ್ಯುಮೆಂಟರಿ; ಯಾವಾಗ ಪ್ರಸಾರ?

ಹೃತಿಕ ಅವರು ‘ವಾರ್’ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ವರ್ಷ ರಿಲೀಸ್ ಆದ ಅವರ ನಟನೆಯ ‘ಫೈಟರ್’ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ದಕ್ಷಿಣದ ಹೀರೋ ಜೂನಿಯರ್ ಎನ್​ಟಿಆರ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!