AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದ ಪುಸ್ತಕ ಮೇಳಕ್ಕೆ ಓದುಗರಿಂದ ಭರ್ಜರಿ ರೆಸ್ಪಾನ್ಸ್: ವೀಕೆಂಡ್​ನಲ್ಲಿ ಜನರಿಂದ ತುಂಬಿ ತುಳುಕಿದ ಶಕ್ತಿ ಸೌಧ

ವಿಧಾನಸೌಧದಲ್ಲಿ ನಡೆದ ಪುಸ್ತಕ ಮೇಳಕ್ಕೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಾವಿರಾರು ಜನರು ಭೇಟಿ ನೀಡಿ ಪುಸ್ತಕಗಳನ್ನು ಖರೀದಿಸಿದರು. ರಾಜ್ಯಪಾಲರು ಮತ್ತು ವಿಧಾನಸಭಾ ಸ್ಪೀಕರ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಓದುವ ಅಭ್ಯಾಸವನ್ನು ಹೆಚ್ಚಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿತ್ತು. ನಾಳೆ ಮೇಳಕ್ಕೆ ತೆರೆ ಬೀಳಲಿದೆ.

Anil Kalkere
| Edited By: |

Updated on:Mar 02, 2025 | 9:29 PM

Share
ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಮೇಳಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿದ್ದು, ಪುಸ್ತಕ ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಮೇಳಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿದ್ದು, ಪುಸ್ತಕ ಖರೀದಿಯಲ್ಲಿ ಬ್ಯುಸಿಯಾಗಿದ್ದರು.

1 / 6
ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶಕ್ತಿ ಸೌಧ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಸಾಹಿತ್ಯ ಕ್ಷೇತ್ರ ಮತ್ತಷ್ಟು ವಿಸ್ತರಿಸಬೇಕು ಮತ್ತು ಯುವಕರಲ್ಲಿ ಓದಿನ ಪ್ರಮಾಣ ಹೆಚ್ಚು ಮಾಡಬೇಕೆಂಬ ಉದ್ದೇಶದಿಂದ ವಿಧಾನಸಭೆ ಸ್ಪೀಕರ್ ಯು.ಟಿ‌ ಖಾದರ್ ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶಕ್ತಿ ಸೌಧ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಸಾಹಿತ್ಯ ಕ್ಷೇತ್ರ ಮತ್ತಷ್ಟು ವಿಸ್ತರಿಸಬೇಕು ಮತ್ತು ಯುವಕರಲ್ಲಿ ಓದಿನ ಪ್ರಮಾಣ ಹೆಚ್ಚು ಮಾಡಬೇಕೆಂಬ ಉದ್ದೇಶದಿಂದ ವಿಧಾನಸಭೆ ಸ್ಪೀಕರ್ ಯು.ಟಿ‌ ಖಾದರ್ ವಿಭಿನ್ನ ಹೆಜ್ಜೆ ಇಟ್ಟಿದ್ದಾರೆ.

2 / 6
ಕರ್ನಾಟಕ ವಿಧಾನಸಭಾ ಸಚಿವಾಲಯ, ದೇಶದಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿದೆ. ಐದು ದಿನಗಳ ದಿನಗಳ ಕಾಲ ಈ ಪುಸ್ತಕ ಮೇಳಕ್ಕೆ ಅಧಿಕೃತವಾಗಿ ನಾಳೆ ತೆರಬೀಳಲಿದೆ. ಮೊದಲ ದಿನವೇ 15 ಸಾವಿರಕ್ಕೂ ಅಧಿಕ ಜನ ವೀಕ್ಷಣೆ ನಡೆಸಿದ್ದು, ನಾಳೆ ಭೇಟಿ ನೀಡಿದವರ ಒಟ್ಟು ಅಂಕಿ‌ ಅಂಶ ಮಾಹಿತಿ ತಿಳಿಯಲಿದೆ.

ಕರ್ನಾಟಕ ವಿಧಾನಸಭಾ ಸಚಿವಾಲಯ, ದೇಶದಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿದೆ. ಐದು ದಿನಗಳ ದಿನಗಳ ಕಾಲ ಈ ಪುಸ್ತಕ ಮೇಳಕ್ಕೆ ಅಧಿಕೃತವಾಗಿ ನಾಳೆ ತೆರಬೀಳಲಿದೆ. ಮೊದಲ ದಿನವೇ 15 ಸಾವಿರಕ್ಕೂ ಅಧಿಕ ಜನ ವೀಕ್ಷಣೆ ನಡೆಸಿದ್ದು, ನಾಳೆ ಭೇಟಿ ನೀಡಿದವರ ಒಟ್ಟು ಅಂಕಿ‌ ಅಂಶ ಮಾಹಿತಿ ತಿಳಿಯಲಿದೆ.

3 / 6
ಇನ್ನೂ ಪುಸ್ತಕ ಮೇಳ ವೀಕ್ಷಣೆಗೆ ಇಂದು ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ್ದರು. ಪುಸ್ತಕಗಳ ಸ್ಟಾಲ್ ಗಳಿಗೆ ಭೇಟಿ ನೀಡಿ ರಾಜ್ಯಪಾಲರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ‌ ಸೇರಿದಂತೆ ಹಲವರ ಉಪಸ್ಥಿತರಿದ್ದರು.

ಇನ್ನೂ ಪುಸ್ತಕ ಮೇಳ ವೀಕ್ಷಣೆಗೆ ಇಂದು ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದ್ದರು. ಪುಸ್ತಕಗಳ ಸ್ಟಾಲ್ ಗಳಿಗೆ ಭೇಟಿ ನೀಡಿ ರಾಜ್ಯಪಾಲರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ‌ ಸೇರಿದಂತೆ ಹಲವರ ಉಪಸ್ಥಿತರಿದ್ದರು.

4 / 6
ಇದೇ ವೇಳೆ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ವಿಧಾನ ಪರಿಷತ್, ವಿಧಾನಸಭೆ ಸಚಿವಾಲಯದಿಂದ ಉತ್ತಮ ಕಾರ್ಯಕ್ರಮ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ನನ್ನನ್ನ ಆಹ್ವಾನಿಸಿದರು. ಇದು ಬಹಳ ಸಂತೋಷದ ವಿಚಾರ. ಸಾವಿರಾರು ಜನ ಪುಸ್ತಕ ಮೇಳ ವೀಕ್ಷಣೆ ಮಾಡುತ್ತಿದ್ದಾರೆ, ಖರೀದಿ ಮಾಡಿದ್ದಾರೆ. ಪುಸ್ತಕ ಖರೀದಿ ಮಾಡುವವರು ಓದೇ ಓದುತ್ತಾರೆ. ಓದುವುದರಿಂದ ದೇಶ, ಧರ್ಮ ಮತ್ತು ಸಂಸ್ಕೃತಿ, ಕನ್ನಡ ಭಾಷೆಯ ಬಗ್ಗೆ ಜ್ಞಾನ ಸಿಗುತ್ತೆ ಅಂತ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್, ವಿಧಾನ ಪರಿಷತ್, ವಿಧಾನಸಭೆ ಸಚಿವಾಲಯದಿಂದ ಉತ್ತಮ ಕಾರ್ಯಕ್ರಮ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ನನ್ನನ್ನ ಆಹ್ವಾನಿಸಿದರು. ಇದು ಬಹಳ ಸಂತೋಷದ ವಿಚಾರ. ಸಾವಿರಾರು ಜನ ಪುಸ್ತಕ ಮೇಳ ವೀಕ್ಷಣೆ ಮಾಡುತ್ತಿದ್ದಾರೆ, ಖರೀದಿ ಮಾಡಿದ್ದಾರೆ. ಪುಸ್ತಕ ಖರೀದಿ ಮಾಡುವವರು ಓದೇ ಓದುತ್ತಾರೆ. ಓದುವುದರಿಂದ ದೇಶ, ಧರ್ಮ ಮತ್ತು ಸಂಸ್ಕೃತಿ, ಕನ್ನಡ ಭಾಷೆಯ ಬಗ್ಗೆ ಜ್ಞಾನ ಸಿಗುತ್ತೆ ಅಂತ ತಿಳಿಸಿದ್ದಾರೆ.

5 / 6
ನಾಳೆಯಿಂದ ಬಜೆಟ್ ಅಧಿವೇಶನ ಆರಂಭ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪುಸ್ತಕ ಮೇಳಕ್ಕೆ ನಾಳೆ ತೆರೆ ಬೀಳಲಿದೆ. ಸಾರ್ವಜನಿಕರ ಪ್ರವೇಶಕ್ಕೆ ನಾಳೆ ಅವಕಾಶ ಇಲ್ಲದ ಕಾರಣ, ಇಂದೇ ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸೌಧ ಹಾಗೂ ಪುಸ್ತಕ ಮೇಳಕ್ಕೆ ಲಗ್ಗೆ ಇಟ್ಟಿದ್ದಾರೆ.

ನಾಳೆಯಿಂದ ಬಜೆಟ್ ಅಧಿವೇಶನ ಆರಂಭ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪುಸ್ತಕ ಮೇಳಕ್ಕೆ ನಾಳೆ ತೆರೆ ಬೀಳಲಿದೆ. ಸಾರ್ವಜನಿಕರ ಪ್ರವೇಶಕ್ಕೆ ನಾಳೆ ಅವಕಾಶ ಇಲ್ಲದ ಕಾರಣ, ಇಂದೇ ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸೌಧ ಹಾಗೂ ಪುಸ್ತಕ ಮೇಳಕ್ಕೆ ಲಗ್ಗೆ ಇಟ್ಟಿದ್ದಾರೆ.

6 / 6

Published On - 9:28 pm, Sun, 2 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್