ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ, ಫೋಟೋಸ್ ಇಲ್ಲಿದೆ

Edited By: ಆಯೇಷಾ ಬಾನು

Updated on: Dec 03, 2023 | 1:21 PM

Mysuru Chamundi Betta: ಇಂದು ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ 18ನೇ ವರ್ಷದ ಮಹಾಭಿಷೇಕ ನಡೆದಿದೆ. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂದಿ ವಿಗ್ರಹಕ್ಕೆ 32 ಬಗೆಯ ಅಭಿಷೇಕಗಳನ್ನು ನೆರವೇರಿಸಲಾಯಿತು.

1 / 6
ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ  ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ನಂದಿ ವಿಗ್ರಹಕ್ಕೆ ಇಂದು ವಿಜೃಂಭಣೆಯಿಂದ ಮಹಾಭಿಷೇಕ ನಡೆಯಿತು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಮಹಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

2 / 6
ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

ಇಂದು ನಡೆದ 18ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ದರು. ಮಹಾಭಿಷೇಕ ಕಾರ್ಯಕ್ರಮದಲ್ಲಿ ಸುತ್ತೂರು ದೇಶೀಕೇಂದ್ರ ಶ್ರೀಗಳು, ಹೊಸಮಠದ ಚಿದಾನಂದಾ ಶ್ರೀಗಳು ಭಾಗಿಯಾಗಿದ್ದರು.

3 / 6
ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32  ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

ಕ್ಷೀರಾಭಿಷೇಕ, ಗಂಧಾಭಿಷೇಕ, ಕುಂಕುಮಾಭಿಷೇಕ, ಅರಿಶಿನ ಅಭಿಷೇಕ ಸೇರಿದಂತೆ ಸುಮಾರು 32 ಬಗೆಯ ಅಭಿಷೇಕಗಳನ್ನು ಸುತ್ತೂರು ಶ್ರೀಗಳು ನೆರವೇರಿಸಿದರು.

4 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಬಗೆ ಬಗೆಯ ಫಲ ಪುಷ್ಪಗಳ ಮಿಶ್ರಿತ ಅಭಿಷೇಕ ಮಾಡಲಾಯಿತು. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿರುವ ಐತಿಹಾಸಿಕ ನಂದಿ ವಿಗ್ರಹಕ್ಕೆ ಮಹಾಭಿಷೇಕ ವಿಜೃಂಭಣೆಯಿಂದ ನೆರವೇರಿತು.

5 / 6
ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಇಂದು ನಡೆದ ಮಹಾಭಿಷೇಕವನ್ನು ನೂರಾರು ಜನರು ಕಣ್ತುಂಬಿಕೊಂಡರು.

6 / 6
ಮೂರನೇ ಕಾರ್ತಿಕ  ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಮೂರನೇ ಕಾರ್ತಿಕ ಸೋಮವಾರಕ್ಕೂ ಮುನ್ನ ಭಾನುವಾರ ಮಹಾಭಿಷೇಕ ಜರುಗಿದೆ. ಬೆಟ್ಟದ ಬಳಗ ಟ್ರಸ್ಟ್ ನ ಪ್ರಕಾಶನ್ ಕಾರ್ಯದರ್ಶಿ ಗೋವಿಂದ ಅವರ ನೇತೃತ್ವದಲ್ಲಿ ಮಹಾಭಿಷೇಕಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us