- Kannada News Photo gallery In Bagalakote Entry by removal of Nose jewel of female examinees appearing for village administrator examination, Kannada News
ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟಿಗೆ ಬಂತು ಕುತ್ತು; ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ
ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ ಕಳಿಸಲಾಗಿದೆ.
Updated on: Sep 29, 2024 | 3:00 PM

ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ ಕಳಿಸಲಾಗಿದೆ.

ಅಷ್ಟೇ ಅಲ್ಲ, ಕಿವಿಯೋಲೆಯನ್ನು ಕೂಡ ತೆಗೆಸಿ ಪರೀಕ್ಷೆ ಕೇಂದ್ರದ ಒಳಬಿಡಲಾಗಿದೆ. ಈ ಹಿನ್ನಲೆ ಕೆಲವರು ನಕಲು ತಡೆಯಲು ಈ ಮೂಲಕ ಹಿಂದೂ ಸಂಪ್ರದಾಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೂ ಕೆಲವರು ಆಧುನಿಕ ಉಪಕರಣ ನಿರ್ಬಂಧ ಒಕೆ, ಮೂಗುಬೊಟ್ಟು ಕಿವಿಯೋಲೆ ತೆಗೆಯೋದೇಕೆ? ನಕಲು ತಡೆಯಲು ಇದೆಂತಾ ವಿಚಿತ್ರ ಕ್ರಮ ಎಂದು ಪ್ರಶ್ನಿಸಿದರು.

ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಬ್ಲ್ಯೂ ಟೂತ್, ವೈರ್ಲೆಸ್, ಮೊಬೈಲ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಆಭರಣ ಧರಿಸುವಂತಿಲ್ಲ ಎಂದು ಹಾಲ್ ಟಿಕೆಟ್ನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆ ಸಿಬ್ಬಂದಿ, ಮೂಗುಬೊಟ್ಟು, ಕಿವಿಯೋಲೆಯನ್ನು ತೆಗೆಸಿದ್ದಾರೆ.

ಜೀನ್ಸ್ ಪ್ಯಾಂಟ್, ಉದ್ದ ತೋಳಿನ ಬಟ್ಟೆ ಹಾಕಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಧುನಿಕ ಉಪಕರಣ ತರುವಂತಿಲ್ಲ ಎಂದು ಕಂಡೀಷನ್ ಇದೆ. ಆದರೆ, ಒಂದು ಧರ್ಮದ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಕೆಲಸ ಉಳಿತಲ್ಲ ಎಂದರು

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.
Read More




