AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು; ಟ್ರ್ಯಾಕ್ಟರ್, ಚಕ್ಕಡಿಗಳಲ್ಲಿ ಕಾಲೇಜಿಗೆ ಎಂಟ್ರಿ

ಶಾಲೆ, ಕಾಲೇಜು ಅಂದ ಕೂಡಲೇ ಓದು, ಆಟ, ಶಿಸ್ತು ಇರಬೇಕಾಗಿದ್ದೇ. ಇದೆಲ್ಲದರ ಜೊತೆಗೆ ವಿದ್ಯಾರ್ಥಿಗಳಿಗೆ ಬೇರೆ ಬೇರೆಯ ಚಟುವಟಿಕೆಗಳೂ ಇರಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಖುಷಿಯಿಂದ ಕಾಲೇಜಿಗೆ ಬರುತ್ತಾರೆ. ಇದೇ ಕಾರಣಕ್ಕೆ ಧಾರವಾಡದ ಒಂದು ಕಾಲೇಜಿನಲ್ಲಿ ಒಂದು ವಾರದವರೆಗೆ ಫನ್ ವೀಕ್ ಎಂದು ಆಚರಿಸಲಾಯಿತು. ಈ ವಾರದ ಕೊನೆಯ ದಿನ ಸಾಂಪ್ರದಾಯಿಕ ದಿನ ಆಚರಿಸೋ ಮೂಲಕ ಶಾಲೆಯ ಆವರಣದಲ್ಲಿ ಹೊಸ ಜಗತ್ತನ್ನೇ ನಿರ್ಮಾಣ ಮಾಡಲಾಗಿತ್ತು.

ಕಿರಣ್ ಹನುಮಂತ್​ ಮಾದಾರ್
|

Updated on: May 25, 2024 | 8:01 PM

Share
ಇಳಕಲ್ ಸೀರೆ, ಸೊಂಟಕ್ಕೆ ಡಾಬು, ತಲೆ ತುಂಬ ಸೆರಗು, ಮೂಗಿಗೆ ಫಳ ಫಳ ಹೊಳೆಯೋ ಮೂಗುತಿ, ಕಿವಿಯಲ್ಲಿ ನೇತಾಡುತ್ತಿರುವ ಬೆಂಡೋಲಿ(ಕಿವಿ ಓಲೆ). ಇಲ್ಲಿ ಯಾವುದೋ ಸೌಂದರ್ಯ ಸ್ಪರ್ಧೆ ಅಥವಾ ಉಡುಗೆ ಸ್ಪರ್ಧೆ ನಡೆದಿಲ್ಲ. ಇದೆಲ್ಲ ನಡೆದಿದ್ದು ಧಾರವಾಡದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಾಲೇಜಿನ ಆವರಣದಲ್ಲಿ.

ಇಳಕಲ್ ಸೀರೆ, ಸೊಂಟಕ್ಕೆ ಡಾಬು, ತಲೆ ತುಂಬ ಸೆರಗು, ಮೂಗಿಗೆ ಫಳ ಫಳ ಹೊಳೆಯೋ ಮೂಗುತಿ, ಕಿವಿಯಲ್ಲಿ ನೇತಾಡುತ್ತಿರುವ ಬೆಂಡೋಲಿ(ಕಿವಿ ಓಲೆ). ಇಲ್ಲಿ ಯಾವುದೋ ಸೌಂದರ್ಯ ಸ್ಪರ್ಧೆ ಅಥವಾ ಉಡುಗೆ ಸ್ಪರ್ಧೆ ನಡೆದಿಲ್ಲ. ಇದೆಲ್ಲ ನಡೆದಿದ್ದು ಧಾರವಾಡದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಾಲೇಜಿನ ಆವರಣದಲ್ಲಿ.

1 / 6
ಈ ಕಾಲೇಜಿನ ಪದವಿ ವಿದ್ಯಾರ್ಥಿ-ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕರು ಒಂದು ವಾರದವರೆಗೆ ಫನ್ ಡೇ ಆಚರಿಸಿದ್ದರು. ನಿತ್ಯವೂ ಒಂದೊಂದು ಬಗೆಯ ಬಟ್ಟೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಕೊನೆಯ ದಿನದಂದು ಸಾಂಪ್ರದಾಯಿಕ ಉಡುಗೆ ಧರಿಸಲು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶರ್ಟ್, ಲುಂಗಿ ಧರಿಸಿ ಬಂದಿದ್ದರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆ ಉಟ್ಟುಕೊಂಡು ಬಂದು ಸಂಭ್ರಮಿಸಿದರು.

ಈ ಕಾಲೇಜಿನ ಪದವಿ ವಿದ್ಯಾರ್ಥಿ-ವಿದ್ಯಾರ್ಥಿಗಳಿಗಾಗಿ ಉಪನ್ಯಾಸಕರು ಒಂದು ವಾರದವರೆಗೆ ಫನ್ ಡೇ ಆಚರಿಸಿದ್ದರು. ನಿತ್ಯವೂ ಒಂದೊಂದು ಬಗೆಯ ಬಟ್ಟೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಕೊನೆಯ ದಿನದಂದು ಸಾಂಪ್ರದಾಯಿಕ ಉಡುಗೆ ಧರಿಸಲು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶರ್ಟ್, ಲುಂಗಿ ಧರಿಸಿ ಬಂದಿದ್ದರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆ ಉಟ್ಟುಕೊಂಡು ಬಂದು ಸಂಭ್ರಮಿಸಿದರು.

2 / 6
ಕಾಲೇಜಿಗೆ ಟ್ರ್ಯಾಕ್ಟರ್ ಹಾಗೂ ಚಕ್ಕಡಿಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು, ಸಂಭ್ರಮದ ವಾತಾವರಣ ನಿರ್ಮಾಣ ಮಾಡಿದ್ದರು. ಬಳಿಕ ಕಾಲೇಜಿನ ಆವರಣದಲ್ಲಿ ಚಕ್ಕಡಿಯಲ್ಲಿ ಸುತ್ತಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮದುವೆ ದಿಬ್ಬಣದ ವಾತಾವರಣ ನಿರ್ಮಾಣ ಮಾಡಿದರು.

ಕಾಲೇಜಿಗೆ ಟ್ರ್ಯಾಕ್ಟರ್ ಹಾಗೂ ಚಕ್ಕಡಿಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು, ಸಂಭ್ರಮದ ವಾತಾವರಣ ನಿರ್ಮಾಣ ಮಾಡಿದ್ದರು. ಬಳಿಕ ಕಾಲೇಜಿನ ಆವರಣದಲ್ಲಿ ಚಕ್ಕಡಿಯಲ್ಲಿ ಸುತ್ತಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮದುವೆ ದಿಬ್ಬಣದ ವಾತಾವರಣ ನಿರ್ಮಾಣ ಮಾಡಿದರು.

3 / 6
ವಿದ್ಯಾರ್ಥಿಗಳು ಶರ್ಟ್, ಲುಂಗಿ ಧರಿಸಿ ಬಂದಿದ್ದರೆ, ವಿದ್ಯಾರ್ಥಿನಿಯರು ಮಾತ್ರ ಸಾಂಪ್ರದಾಯಿಕ ಶೈಲಿಯಲ್ಲಿ ಶೃಂಗರಿಸಿಕೊಂಡು ಬಂದಿದ್ದರು. ಥೇಟ್ ಹಳ್ಳಿ ಮಹಿಳೆಯರಂತೆ ಕಾಣುತ್ತಿದ್ದ ವಿದ್ಯಾರ್ಥಿನಿಯರು ಆವರಣದ ತುಂಬೆಲ್ಲಾ ಓಡಾಡಿ ಸಂಭ್ರಮಿಸಿದರು.

ವಿದ್ಯಾರ್ಥಿಗಳು ಶರ್ಟ್, ಲುಂಗಿ ಧರಿಸಿ ಬಂದಿದ್ದರೆ, ವಿದ್ಯಾರ್ಥಿನಿಯರು ಮಾತ್ರ ಸಾಂಪ್ರದಾಯಿಕ ಶೈಲಿಯಲ್ಲಿ ಶೃಂಗರಿಸಿಕೊಂಡು ಬಂದಿದ್ದರು. ಥೇಟ್ ಹಳ್ಳಿ ಮಹಿಳೆಯರಂತೆ ಕಾಣುತ್ತಿದ್ದ ವಿದ್ಯಾರ್ಥಿನಿಯರು ಆವರಣದ ತುಂಬೆಲ್ಲಾ ಓಡಾಡಿ ಸಂಭ್ರಮಿಸಿದರು.

4 / 6
ಬಗೆ ಬಗೆಯ ಮುತ್ತುಗಳನ್ನು ಹೊಂದಿರೋ ನತ್ತು, ಕಿವಿಗೆ ದೊಡ್ಡ ದೊಡ್ಡ ಬೆಂಡೋಲೆ, ಕೈಗೆ ಬಗೆ ಬಗೆಯ ಬಳೆ, ಕೊರಳಲ್ಲಿ ಕಾಸಿನ ಸರ ಧರಿಸಿದ್ದ ವಿದ್ಯಾರ್ಥಿನಿಯರ ಸಂಭ್ರಮ ಹೇಳತೀರದು. ನಿತ್ಯವೂ ಪಾಠ-ಪ್ರವಚನ ಅಂತಾ ಕಾಲ ಕಳೆಯೋ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮ ಒಂದು ಹೊಸ ಬಗೆಯ ಅನುಭವ ನೀಡಿತ್ತು.

ಬಗೆ ಬಗೆಯ ಮುತ್ತುಗಳನ್ನು ಹೊಂದಿರೋ ನತ್ತು, ಕಿವಿಗೆ ದೊಡ್ಡ ದೊಡ್ಡ ಬೆಂಡೋಲೆ, ಕೈಗೆ ಬಗೆ ಬಗೆಯ ಬಳೆ, ಕೊರಳಲ್ಲಿ ಕಾಸಿನ ಸರ ಧರಿಸಿದ್ದ ವಿದ್ಯಾರ್ಥಿನಿಯರ ಸಂಭ್ರಮ ಹೇಳತೀರದು. ನಿತ್ಯವೂ ಪಾಠ-ಪ್ರವಚನ ಅಂತಾ ಕಾಲ ಕಳೆಯೋ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮ ಒಂದು ಹೊಸ ಬಗೆಯ ಅನುಭವ ನೀಡಿತ್ತು.

5 / 6
ಆಧುನಿಕ ದಿನಗಳಲ್ಲಿ ಸಾಂಪ್ರದಾಯಿಕ ಉಡುಗೆ-ತೊಡುಗೆಗಳು ಮರೆಯಾಗುತ್ತಿವೆ. ನಮ್ಮ ಸಾಂಪ್ರದಾಯಿಕ ಉಡುಗೆಯನ್ನು ಮತ್ತು ಆಭರಣಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕಾಗಿದ್ದು ಅನಿವಾರ್ಯ. ಇದೇ ಕಾರಣಕ್ಕೆ ಈ ಕಾಲೇಜಿನಲ್ಲಿ ಆಯೋಜಿಸಿದ್ದ ಈ ಸಾಂಪ್ರದಾಯಿಕ ದಿನ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಹೊಸ ಅನುಭವ ನೀಡಿದ್ದಂತೂ ಸತ್ಯ.

ಆಧುನಿಕ ದಿನಗಳಲ್ಲಿ ಸಾಂಪ್ರದಾಯಿಕ ಉಡುಗೆ-ತೊಡುಗೆಗಳು ಮರೆಯಾಗುತ್ತಿವೆ. ನಮ್ಮ ಸಾಂಪ್ರದಾಯಿಕ ಉಡುಗೆಯನ್ನು ಮತ್ತು ಆಭರಣಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕಾಗಿದ್ದು ಅನಿವಾರ್ಯ. ಇದೇ ಕಾರಣಕ್ಕೆ ಈ ಕಾಲೇಜಿನಲ್ಲಿ ಆಯೋಜಿಸಿದ್ದ ಈ ಸಾಂಪ್ರದಾಯಿಕ ದಿನ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಹೊಸ ಅನುಭವ ನೀಡಿದ್ದಂತೂ ಸತ್ಯ.

6 / 6
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!