AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳ ನಿರ್ಲಕ್ಷ್ಯ; ಕೆಸರುಗದ್ದೆಯಂತಾಗಿರೋ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿರುವ ರಸ್ತೆಗಳು ಕೆಸರು ಗದ್ದೆಗಳಂತಾಗಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಸ್ತೆಗಳು ಹಾಳಾಗಿ ಹೋಗಿವೆ. ರಸ್ತೆ ದುರಸ್ಥಿ ಮಾಡಿ ಎಂದು ಜನರು ಗೋಗರೆದರೂ ಕೂಡ ಯಾರೊಬ್ಬರು ಸ್ಪಂಧಿಸುತ್ತಿಲ್ಲ. ಹೀಗಾಗಿ ಜನರು ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 04, 2024 | 2:52 PM

Share
ಕೊಪ್ಪಳ ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದು ಜನರ ಸಂಭ್ರಮವನ್ನು ಎಷ್ಟು ಹೆಚ್ಚಿಸಿದೆಯೋ ಅಷ್ಟೇ ಸಮಸ್ಯೆಗಳನ್ನು ಕೂಡ ತಂದೊಡ್ಡಿದ್ದು, ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ, ಕನಕಗಿರಿ ತಾಲೂಕಿನ ಯರಡೋಣಾ, ಬಿಜನಳ್ಳಿ ಸೇರಿದಂತೆ ಜಿಲ್ಲೆಯ ಹಲವು ಗ್ರಾಮಗಳಲ್ಲಿನ ರಸ್ತೆಗಳು ಕೆಸರ ಗದ್ದೆಯಂತಾಗಿವೆ. ಹೆಚ್ಚಿನ ಕಡೆ ನೀರು ನಿಂತಿದ್ದರಿಂದ ದೊಡ್ಡ ಹೊಂಡಗಳಾಗಿದ್ದರೆ, ಅನೇಕ ಕಡೆ ಕೆಸರಿನಿಂದಾಗಿ ಕೆಸರು ಗದ್ದೆಗಳಂತಾಗಿ ಮಾರ್ಪಾಡಾಗಿವೆ.

ಕೊಪ್ಪಳ ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದು ಜನರ ಸಂಭ್ರಮವನ್ನು ಎಷ್ಟು ಹೆಚ್ಚಿಸಿದೆಯೋ ಅಷ್ಟೇ ಸಮಸ್ಯೆಗಳನ್ನು ಕೂಡ ತಂದೊಡ್ಡಿದ್ದು, ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ, ಕನಕಗಿರಿ ತಾಲೂಕಿನ ಯರಡೋಣಾ, ಬಿಜನಳ್ಳಿ ಸೇರಿದಂತೆ ಜಿಲ್ಲೆಯ ಹಲವು ಗ್ರಾಮಗಳಲ್ಲಿನ ರಸ್ತೆಗಳು ಕೆಸರ ಗದ್ದೆಯಂತಾಗಿವೆ. ಹೆಚ್ಚಿನ ಕಡೆ ನೀರು ನಿಂತಿದ್ದರಿಂದ ದೊಡ್ಡ ಹೊಂಡಗಳಾಗಿದ್ದರೆ, ಅನೇಕ ಕಡೆ ಕೆಸರಿನಿಂದಾಗಿ ಕೆಸರು ಗದ್ದೆಗಳಂತಾಗಿ ಮಾರ್ಪಾಡಾಗಿವೆ.

1 / 6
ಇಂತಹ ದುಸ್ಥಿತಿಯಿದ್ದರೂ ಕೂಡ ರಸ್ತೆ ದುರಸ್ಥಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿಲ್ಲ. ಇದೇ ಕಾರಣಕ್ಕೆ ಇಂದು ಬಹದ್ದೂರಬಂಡಿ ಗ್ರಾಮದ ನಿವಾಸಿಗಳು ತಮ್ಮೂರಿನ ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ಭತ್ತವನ್ನು ನಾಟಿ ಮಾಡುವ ಮೂಲಕ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ದುಸ್ಥಿತಿಯಿದ್ದರೂ ಕೂಡ ರಸ್ತೆ ದುರಸ್ಥಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿಲ್ಲ. ಇದೇ ಕಾರಣಕ್ಕೆ ಇಂದು ಬಹದ್ದೂರಬಂಡಿ ಗ್ರಾಮದ ನಿವಾಸಿಗಳು ತಮ್ಮೂರಿನ ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ಭತ್ತವನ್ನು ನಾಟಿ ಮಾಡುವ ಮೂಲಕ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದರು.

2 / 6
ಬಹದ್ದೂರಬಂಡಿಯಿಂದ ಹೂವಿನಾಳ ಗ್ರಾಮಕ್ಕೆ ಹೋಗುವ ರಸ್ತೆ ಹಾಳಾಗಿ ಅನೇಕ ವರ್ಷಗಳೆ ಕಳೆದಿವೆ. ಅನೇಕ ಬಾರಿ ರಸ್ತೆ ದುರಸ್ಥಿ ಮಾಡಿ ಎಂದು ಮನವಿ ಮಾಡಿದರೂ ಕೂಡ ಯಾರು ಸ್ಪಂಧಿಸುತ್ತಿಲ್ಲ. ಇದೀಗ ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಾಗಿದೆ. ಇದರಿಂದ ಜನರು ನಡೆದಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೈಕ್​ಗಳು ಸ್ಕಿಡ್ ಆಗುತ್ತಿದ್ದು, ಅನೇಕರು ಬಿದ್ದು ಗಾಯಗೊಳ್ಳುತ್ತಿದ್ದಾರೆ.

ಬಹದ್ದೂರಬಂಡಿಯಿಂದ ಹೂವಿನಾಳ ಗ್ರಾಮಕ್ಕೆ ಹೋಗುವ ರಸ್ತೆ ಹಾಳಾಗಿ ಅನೇಕ ವರ್ಷಗಳೆ ಕಳೆದಿವೆ. ಅನೇಕ ಬಾರಿ ರಸ್ತೆ ದುರಸ್ಥಿ ಮಾಡಿ ಎಂದು ಮನವಿ ಮಾಡಿದರೂ ಕೂಡ ಯಾರು ಸ್ಪಂಧಿಸುತ್ತಿಲ್ಲ. ಇದೀಗ ಮಳೆಗಾಲದಲ್ಲಿ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಾಗಿದೆ. ಇದರಿಂದ ಜನರು ನಡೆದಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ. ಬೈಕ್​ಗಳು ಸ್ಕಿಡ್ ಆಗುತ್ತಿದ್ದು, ಅನೇಕರು ಬಿದ್ದು ಗಾಯಗೊಳ್ಳುತ್ತಿದ್ದಾರೆ.

3 / 6
ವಯೋವೃದ್ದರು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಭತ್ತವನ್ನು ನಾಟಿ ಮಾಡುತ್ತಿದ್ದೇವೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಕೇವಲ ಬಹದ್ದೂರಬಂಡಿ ಗ್ರಾಮ ಮಾತ್ರವಲ್ಲ, ಜಿಲ್ಲೆಯ ಕನಕಗಿರಿ, ಕಾರಟಗಿ, ಗಂಗಾವತಿ, ಕುಷ್ಟಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಇದೇ ಸ್ಥಿತಿಯಿದೆ.

ವಯೋವೃದ್ದರು, ಮಕ್ಕಳು ರಸ್ತೆಯಲ್ಲಿ ನಡೆದುಕೊಂಡು ಹೋಗಲು ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಭತ್ತವನ್ನು ನಾಟಿ ಮಾಡುತ್ತಿದ್ದೇವೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಕೇವಲ ಬಹದ್ದೂರಬಂಡಿ ಗ್ರಾಮ ಮಾತ್ರವಲ್ಲ, ಜಿಲ್ಲೆಯ ಕನಕಗಿರಿ, ಕಾರಟಗಿ, ಗಂಗಾವತಿ, ಕುಷ್ಟಗಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಇದೇ ಸ್ಥಿತಿಯಿದೆ.

4 / 6
ಅನೇಕ ಕಡೆ ಗುಂಡಿಗಳು ಕೆರೆಯಂತೆ ಕಾಣುತ್ತಿವೆ. ಗ್ರಾಮಗಳಲ್ಲಿಯೇ ರಸ್ತೆಗಳು ಹಾಳಾಗಿ ಹೋಗಿದ್ದರಿಂದ ಜನರು ಸಾಕಷ್ಟು ಸಂಕಷ್ಟ ಪಡುತ್ತಿದ್ದಾರೆ. ಹಳ್ಳಿಗಳ ರಸ್ತೆಗಾಗಿ ಕೋಟಿ ಕೋಟಿ ಹಣ ಖರ್ಚು ಮಾಡಲಾಗಿದೆ. ಆದ್ರೆ, ಕಳಪೆ ಕಾಮಾಗರಿಗಳಿಂದ ರಸ್ತೆಗಳು ಒಂದೇ ವರ್ಷಕ್ಕೆ ಹಾಳಾಗಿ ಹೋಗುತ್ತಿವೆ. ಇನ್ನು ಅನೇಕ ಕಡೆ ರಸ್ತೆ ಕಾಮಗಾರಿಗಳನ್ನೇ ಮಾಡದೇ ಇರುವುದರಿಂದ ಕೆಸರು ಗದ್ದೆಗಳಾಗುತ್ತಿವೆ. ಇಷ್ಟಾದರೂ ಕೂಡ ರಸ್ತೆಯನ್ನು ದುರಸ್ಥಿ ಮಾಡೋ ಕೆಲಸವನ್ನು ಯಾವೊಬ್ಬ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುತ್ತಿಲ್ಲ.

ಅನೇಕ ಕಡೆ ಗುಂಡಿಗಳು ಕೆರೆಯಂತೆ ಕಾಣುತ್ತಿವೆ. ಗ್ರಾಮಗಳಲ್ಲಿಯೇ ರಸ್ತೆಗಳು ಹಾಳಾಗಿ ಹೋಗಿದ್ದರಿಂದ ಜನರು ಸಾಕಷ್ಟು ಸಂಕಷ್ಟ ಪಡುತ್ತಿದ್ದಾರೆ. ಹಳ್ಳಿಗಳ ರಸ್ತೆಗಾಗಿ ಕೋಟಿ ಕೋಟಿ ಹಣ ಖರ್ಚು ಮಾಡಲಾಗಿದೆ. ಆದ್ರೆ, ಕಳಪೆ ಕಾಮಾಗರಿಗಳಿಂದ ರಸ್ತೆಗಳು ಒಂದೇ ವರ್ಷಕ್ಕೆ ಹಾಳಾಗಿ ಹೋಗುತ್ತಿವೆ. ಇನ್ನು ಅನೇಕ ಕಡೆ ರಸ್ತೆ ಕಾಮಗಾರಿಗಳನ್ನೇ ಮಾಡದೇ ಇರುವುದರಿಂದ ಕೆಸರು ಗದ್ದೆಗಳಾಗುತ್ತಿವೆ. ಇಷ್ಟಾದರೂ ಕೂಡ ರಸ್ತೆಯನ್ನು ದುರಸ್ಥಿ ಮಾಡೋ ಕೆಲಸವನ್ನು ಯಾವೊಬ್ಬ ಅಧಿಕಾರಿಗಳು, ಜನಪ್ರತಿನಿಧಿಗಳು ಮಾಡುತ್ತಿಲ್ಲ.

5 / 6
ಸದ್ಯ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಇನ್ನಾದರೂ ಕೂಡ ಹದಗೆಟ್ಟ ರಸ್ತೆಗಳ ದುರಸ್ಥಿ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಜನರ ನೆಮ್ಮದಿಯ ಬದುಕಿಗೆ ಬೇಕಾದ ಕ್ರಮಗಳನ್ನು ಸರ್ಕಾರ ಮಾಡಬೇಕಿದೆ.

ಸದ್ಯ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಇನ್ನಾದರೂ ಕೂಡ ಹದಗೆಟ್ಟ ರಸ್ತೆಗಳ ದುರಸ್ಥಿ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಜನರ ನೆಮ್ಮದಿಯ ಬದುಕಿಗೆ ಬೇಕಾದ ಕ್ರಮಗಳನ್ನು ಸರ್ಕಾರ ಮಾಡಬೇಕಿದೆ.

6 / 6
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್