AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಖಾಸಗಿ ಶಾಲೆಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆ; ಏನೇನಿದೆ ವಿಶೇಷತೆ?

ಸರ್ಕಾರಿ ಶಾಲೆಗಳು ಬದಲಾಗುತ್ತಿವೆ‌. ಖಾಸಗಿ ಶಾಲೆಗಳ ಅಬ್ಬರದ ನಡುವೆಯೋ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿವೆ. ಇದಕ್ಕೆ ವಿಜಯಪುರದ ಸರ್ಕಾರಿ ಶಾಲೆಗಳು ಉದಾಹರಣೆಯಾಗಿದೆ. ಯಾಕೆ ಅಂತೀರಾ? ಈ ಸ್ಟೋರಿ ಓದಿ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 17, 2024 | 8:35 PM

Share
ಸರ್ಕಾರಿ ಶಾಲೆಗಳು ಅಂದರೆ ಸಾಕು ಜನರಿಗೆ ಅಸಡ್ಯ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಕಲಿಸೋರು ಇಲ್ಲ. ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವುದು ಪೋಷಕರ ಮಾತು. ಇದಕ್ಕೆ ತದ್ವಿರುದ್ಧವಾಗಿ ಬದಲಾಗುತ್ತಿವೆ ವಿಜಯಪುರದ ಸರ್ಕಾರಿ ಶಾಲೆಗಳು.

ಸರ್ಕಾರಿ ಶಾಲೆಗಳು ಅಂದರೆ ಸಾಕು ಜನರಿಗೆ ಅಸಡ್ಯ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಕಲಿಸೋರು ಇಲ್ಲ. ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವುದು ಪೋಷಕರ ಮಾತು. ಇದಕ್ಕೆ ತದ್ವಿರುದ್ಧವಾಗಿ ಬದಲಾಗುತ್ತಿವೆ ವಿಜಯಪುರದ ಸರ್ಕಾರಿ ಶಾಲೆಗಳು.

1 / 6
ಅದರಲ್ಲೂ ವಿಜಯಪುರದ ಇಬ್ರಾಹಿಂಪುರದ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ನಂಬರ್ 6 ಶಾಲೆ ನೋಡಿದರೆ ನಿಮಗೆ ಆಶ್ಚರ್ಯ ಆಗೋದರಲ್ಲಿ ಅನುಮಾನವೇ ಇಲ್ಲ. ಖಾಸಗಿ ಶಾಲೆಯಲ್ಲಿರುವಂತೆ ಸೌಲಭ್ಯಗಳು, ಹೈಟೆಕ್ ಕ್ಲಾಸ್, ಆಟವಾಡಲು ಮೈದಾನ ಎಲ್ಲವೂ ಇದೆ.

ಅದರಲ್ಲೂ ವಿಜಯಪುರದ ಇಬ್ರಾಹಿಂಪುರದ ಬಳಿಯ ಸರ್ಕಾರಿ ಪ್ರಾಥಮಿಕ ಶಾಲೆ ನಂಬರ್ 6 ಶಾಲೆ ನೋಡಿದರೆ ನಿಮಗೆ ಆಶ್ಚರ್ಯ ಆಗೋದರಲ್ಲಿ ಅನುಮಾನವೇ ಇಲ್ಲ. ಖಾಸಗಿ ಶಾಲೆಯಲ್ಲಿರುವಂತೆ ಸೌಲಭ್ಯಗಳು, ಹೈಟೆಕ್ ಕ್ಲಾಸ್, ಆಟವಾಡಲು ಮೈದಾನ ಎಲ್ಲವೂ ಇದೆ.

2 / 6
ಇದೊಂದು ಶಾಲೆ ಕೇವಲ ಉದಾಹರಣೆ. ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳು ಬದಲಾಗುತ್ತಿದ್ದು, ಖಾಸಗಿ ಶಾಲೆ ಎಲ್ಲ ಕಾರ್ಯವನ್ನ ಅಳವಡಿಸಿ ಬದಲಾವಣೆ ಮಾಡಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಕ್ಕಳು ಹಾಗೂ ಪೋಷಕರ ಸಭೆ ನಡೆಸುತ್ತಿದ್ದಾರೆ.

ಇದೊಂದು ಶಾಲೆ ಕೇವಲ ಉದಾಹರಣೆ. ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆಗಳು ಬದಲಾಗುತ್ತಿದ್ದು, ಖಾಸಗಿ ಶಾಲೆ ಎಲ್ಲ ಕಾರ್ಯವನ್ನ ಅಳವಡಿಸಿ ಬದಲಾವಣೆ ಮಾಡಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಕ್ಕಳು ಹಾಗೂ ಪೋಷಕರ ಸಭೆ ನಡೆಸುತ್ತಿದ್ದಾರೆ.

3 / 6
ಕಳೆದ ಎರಡು ವರ್ಷಗಳಿಂದ ತಿಂಗಳ ಮೂರನೇ ‌ಶನಿವಾರ ಕಡ್ಡಾಯವಾಗಿ ಪೋಷಕರ ಸಭೆ ನಡೆಸುತ್ತಿದ್ದು, ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರಿಗೆ ಮಾಹಿತಿ ನೀಡುತ್ತಿದ್ದಾರೆ. ಜೊತೆಗೆ ಮಕ್ಕಳ ಬೆಳೆವಣಿಗೆಗೆ ಬೇಕಾದ ಸಲಹೆ ಸೂಚನೆ ವಿನಿಮಯ ಮಾಡಿಕೊಳುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ ತಿಂಗಳ ಮೂರನೇ ‌ಶನಿವಾರ ಕಡ್ಡಾಯವಾಗಿ ಪೋಷಕರ ಸಭೆ ನಡೆಸುತ್ತಿದ್ದು, ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರಿಗೆ ಮಾಹಿತಿ ನೀಡುತ್ತಿದ್ದಾರೆ. ಜೊತೆಗೆ ಮಕ್ಕಳ ಬೆಳೆವಣಿಗೆಗೆ ಬೇಕಾದ ಸಲಹೆ ಸೂಚನೆ ವಿನಿಮಯ ಮಾಡಿಕೊಳುತ್ತಿದ್ದಾರೆ.

4 / 6
ಶಿಕ್ಷಣ ಇಲಾಖೆಯ ಅಧಿಕಾರಿಗಳ ಈ ವಿಶಿಷ್ಟವಾದ ಪ್ರಯತ್ನ, ಸರ್ಕಾರಿ ಶಾಲೆ ಮಕ್ಕಳ ಪೋಷಕರ ಸಂತಸಕ್ಕೆ ಕಾರಣವಾಗಿದೆ. ಖಾಸಗಿ ಶಾಲೆಯ ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಸಭೆ ಕರೆಯುತ್ತಿದ್ದರು. ಆದರೆ, ಬಡವರ ಮಕ್ಕಳು ಕಲಿಯುವ ಸರ್ಕಾರಿ‌ ಶಾಲೆಯಲ್ಲಿ ಸಭೆ ಇರಲಿಲ್ಲ. ಇದರಿಂದ ನಮ್ಮ ಮಕ್ಕಳು ಓದುತ್ತಾರೋ, ಇಲ್ಲವೋ ಗೊತ್ತಾಗುತ್ತಿರಲಿಲ್ಲ. ಇದೀಗ ಸಭೆ ನಡೆಸುತ್ತಿರುವುದರಿಂದ ನಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ ಈ ವಿಶಿಷ್ಟವಾದ ಪ್ರಯತ್ನ, ಸರ್ಕಾರಿ ಶಾಲೆ ಮಕ್ಕಳ ಪೋಷಕರ ಸಂತಸಕ್ಕೆ ಕಾರಣವಾಗಿದೆ. ಖಾಸಗಿ ಶಾಲೆಯ ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಸಭೆ ಕರೆಯುತ್ತಿದ್ದರು. ಆದರೆ, ಬಡವರ ಮಕ್ಕಳು ಕಲಿಯುವ ಸರ್ಕಾರಿ‌ ಶಾಲೆಯಲ್ಲಿ ಸಭೆ ಇರಲಿಲ್ಲ. ಇದರಿಂದ ನಮ್ಮ ಮಕ್ಕಳು ಓದುತ್ತಾರೋ, ಇಲ್ಲವೋ ಗೊತ್ತಾಗುತ್ತಿರಲಿಲ್ಲ. ಇದೀಗ ಸಭೆ ನಡೆಸುತ್ತಿರುವುದರಿಂದ ನಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಮಾಹಿತಿ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

5 / 6
ಜಿಲ್ಲೆಯ ಸುಮಾರು 1500 ಶಾಲೆಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆಯುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಉತ್ತಮ ಬದಲಾವಣೆ ಕಾಣುತ್ತಿದೆ ಎಂದು ಸಂತಸ ಪಟ್ಟಿದ್ದಾರೆ. ಒಟ್ಟಾರೆ ವಿಜಯಪುರ ಜಿಲ್ಲೆಯ ಅಧಿಕಾರಿಗಳು ನಡೆಸುತ್ತಿರುವ ಈ ವಿಶಿಷ್ಟ ಕಾರ್ಯ, ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಸಂತಸ ತಂದಿದ್ದು, ಸರ್ಕಾರಿ‌ ಶಾಲೆಗಳ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎನ್ನುವುದು ಎಲ್ಲರ ಆಶಯವಾಗಿದೆ.

ಜಿಲ್ಲೆಯ ಸುಮಾರು 1500 ಶಾಲೆಗಳಲ್ಲಿ ಈ ರೀತಿಯ ಕಾರ್ಯಕ್ರಮ ನಡೆಯುತ್ತಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಉತ್ತಮ ಬದಲಾವಣೆ ಕಾಣುತ್ತಿದೆ ಎಂದು ಸಂತಸ ಪಟ್ಟಿದ್ದಾರೆ. ಒಟ್ಟಾರೆ ವಿಜಯಪುರ ಜಿಲ್ಲೆಯ ಅಧಿಕಾರಿಗಳು ನಡೆಸುತ್ತಿರುವ ಈ ವಿಶಿಷ್ಟ ಕಾರ್ಯ, ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಸಂತಸ ತಂದಿದ್ದು, ಸರ್ಕಾರಿ‌ ಶಾಲೆಗಳ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎನ್ನುವುದು ಎಲ್ಲರ ಆಶಯವಾಗಿದೆ.

6 / 6
Follow Us
SSLC ಹಿಂದಿ ಗೊಂದಲ: ಎಸ್​​ಎಸ್​ಎಲ್​​ಸಿ ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇ
SSLC ಹಿಂದಿ ಗೊಂದಲ: ಎಸ್​​ಎಸ್​ಎಲ್​​ಸಿ ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ