ಬೆಂಗಳೂರಿನಲ್ಲಿ ತಾಸುಗಟ್ಟಲೆ ನಿರಂತರ ಸುರಿದ ಮಳೆ: ಹಲವೆಡೆ ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್

ಬೆಂಗಳೂರು, ಅಕ್ಟೋಬರ್ 15: ಬೆಂಗಳೂರು ನಗರದಾದ್ಯಂತ ಮಂಗಳವಾರ ಬೆಳಗ್ಗೆಯಿಂದ ಎಡೆಬಿಡದೆ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಳ್ಳುವಂತಾಯಿತು. ಕೆಆರ್ ಮಾರುಕಟ್ಟೆ, ಓಕಳಿಪುರಂ ಸೇರಿದಂತೆ ಹಲವು ಕಡೆಗಳಲ್ಲಿ ರಸ್ತೆ, ಅಂಡರ್​ಪಾಸ್​ಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಬೆಂಗಳೂರು ಹಾಗೂ ಕರ್ನಾಟಕದ ಇತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ 3 ದಿನ ಮಳೆ ಮುನ್ಸೂಚನೆ ನೀಡಿದೆ.

|

Updated on: Oct 15, 2024 | 12:41 PM

ಮೆಜೆಸ್ಟಿಕ್ ಬಳಿಯ ಓಕಳಿಪುರ ಅಂಡರ್​ಪಾಸ್​ನಲ್ಲಿ ನೀರು ನಿಂತು ನೀರಿನಲ್ಲಿ ಎರಡು ವಾಹನಗಳು ಕೆಟ್ಟುನಿಂತವು. ಪರಿಣಾಮವಾಗಿ ಓಕಳಿಪುರದ ಸುತ್ತಮುತ್ತ ಟ್ರಾಫಿಕ್​ಜಾಮ್​​​ ಉಂಟಾಯಿತು. ನಿಧಾನಗತಿಯಲ್ಲಿ ಚಲಿಸುತ್ತಿರುವ ವಾಹನಗಳ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರ ಪರದಾಟಪಟ್ಟರು. ಅಂಡರ್​ಪಾಸ್​ ಬಳಿ ಟ್ರಾಫಿಕ್​ನಲ್ಲಿ ಸಿಲುಕಿ ಌಂಬುಲೆನ್ಸ್ ಕೂಡ ಪರದಾಡುವಂತಾಯಿತು.

ಮೆಜೆಸ್ಟಿಕ್ ಬಳಿಯ ಓಕಳಿಪುರ ಅಂಡರ್​ಪಾಸ್​ನಲ್ಲಿ ನೀರು ನಿಂತು ನೀರಿನಲ್ಲಿ ಎರಡು ವಾಹನಗಳು ಕೆಟ್ಟುನಿಂತವು. ಪರಿಣಾಮವಾಗಿ ಓಕಳಿಪುರದ ಸುತ್ತಮುತ್ತ ಟ್ರಾಫಿಕ್​ಜಾಮ್​​​ ಉಂಟಾಯಿತು. ನಿಧಾನಗತಿಯಲ್ಲಿ ಚಲಿಸುತ್ತಿರುವ ವಾಹನಗಳ ದಟ್ಟಣೆಯಲ್ಲಿ ಸಿಲುಕಿ ವಾಹನ ಸವಾರರ ಪರದಾಟಪಟ್ಟರು. ಅಂಡರ್​ಪಾಸ್​ ಬಳಿ ಟ್ರಾಫಿಕ್​ನಲ್ಲಿ ಸಿಲುಕಿ ಌಂಬುಲೆನ್ಸ್ ಕೂಡ ಪರದಾಡುವಂತಾಯಿತು.

1 / 5
ಮುಂಜಾನೆಯಿಂದ ಬಿಟ್ಟೂಬಿಡದೆ ಮಳೆ ಸುರಿದಿದ್ದರಿಂದ ಬೆಳಗ್ಗೆ ಕಚೇರಿ, ಶಾಲೆಗಳಿಗೆ ತೆರಳುವ ಮಕ್ಕಳು ಸಂಕಷ್ಟಕ್ಕೀಡಾದರು. ಒಮ್ಮೆ ಧೋ ಎಂದು ಸುರಿಯುವ ಮಳೆ, ನಂತರ ಜಿಟಿಜಿಟಿ ಜಿನುಗುವ ಮಳೆಯಿಂದ ಬೈಕ್ ಸವಾರರು ಒದ್ದಾಡಿದರು. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ ಆಗಿ ಸವಾರರಿಗೆ ಸಂಕಷ್ಟ ಎದುರಾಯಿತು.

ಮುಂಜಾನೆಯಿಂದ ಬಿಟ್ಟೂಬಿಡದೆ ಮಳೆ ಸುರಿದಿದ್ದರಿಂದ ಬೆಳಗ್ಗೆ ಕಚೇರಿ, ಶಾಲೆಗಳಿಗೆ ತೆರಳುವ ಮಕ್ಕಳು ಸಂಕಷ್ಟಕ್ಕೀಡಾದರು. ಒಮ್ಮೆ ಧೋ ಎಂದು ಸುರಿಯುವ ಮಳೆ, ನಂತರ ಜಿಟಿಜಿಟಿ ಜಿನುಗುವ ಮಳೆಯಿಂದ ಬೈಕ್ ಸವಾರರು ಒದ್ದಾಡಿದರು. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಜಾಮ್ ಆಗಿ ಸವಾರರಿಗೆ ಸಂಕಷ್ಟ ಎದುರಾಯಿತು.

2 / 5
ಮಳೆ ಆರ್ಭಟಕ್ಕೆ ಯಶವಂತಪುರ, ಗೊರಗುಂಟೆಪಾಳ್ಯ ಸುತ್ತ ಕಿಲೋ ಮೀಟರ್​​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತವು. ಕಚೇರಿ, ಶಾಲಾ-ಕಾಲೇಜುಗಳಿಗೆ ಹೋಗುವವರು ಸಂಕಷ್ಟ ಅನುಭವಿಸಿದರು.

ಮಳೆ ಆರ್ಭಟಕ್ಕೆ ಯಶವಂತಪುರ, ಗೊರಗುಂಟೆಪಾಳ್ಯ ಸುತ್ತ ಕಿಲೋ ಮೀಟರ್​​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತವು. ಕಚೇರಿ, ಶಾಲಾ-ಕಾಲೇಜುಗಳಿಗೆ ಹೋಗುವವರು ಸಂಕಷ್ಟ ಅನುಭವಿಸಿದರು.

3 / 5
ಬೆಂಗಳೂರಿನ 8ನೇ ಮೈಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. 8ನೇ ಮೈಲಿನಿಂದ ಹೆಸರಘಟ್ಟ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿ ಸವಾರರು ಪರದಾಡಿದರು. ದೇವನಹಳ್ಳಿಯಲ್ಲಿ ಮಳೆಯಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡಿದರು. ದೊಡ್ಡಬಳ್ಳಾಪುರ, ಹೊಸಕೋಟೆ ಭಾಗದಲ್ಲೂ ಜಿಟಿಜಿಟಿ ಮಳೆಯಾಗಿದೆ.

ಬೆಂಗಳೂರಿನ 8ನೇ ಮೈಲಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. 8ನೇ ಮೈಲಿನಿಂದ ಹೆಸರಘಟ್ಟ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿ ಸವಾರರು ಪರದಾಡಿದರು. ದೇವನಹಳ್ಳಿಯಲ್ಲಿ ಮಳೆಯಿಂದ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡಿದರು. ದೊಡ್ಡಬಳ್ಳಾಪುರ, ಹೊಸಕೋಟೆ ಭಾಗದಲ್ಲೂ ಜಿಟಿಜಿಟಿ ಮಳೆಯಾಗಿದೆ.

4 / 5
ಹೆಚ್​ಎಂಟಿ ಲೇಔಟ್​​ನಲ್ಲಿ ಬೃಹತ್ ಮರ ಧರೆಗುರುಳಿ ಕಾರೊಂದು ಸಂಪೂರ್ಣ ಜಖಂಗೊಂಡಿತು. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿತ್ತು. ಮರ ತೆರವಿಗೆ ಬಿಬಿಎಂಪಿಗೆ ದೂರು ನೀಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿತ್ತು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಧರೆಗುರುಳಿದ್ದು, ಜನಸಂಚಾರ ಕಡಿಮೆ ಇದ್ದಿದ್ದಕ್ಕೆ ದೊಡ್ಡ ಅನಾಹುತ ತಪ್ಪಿದೆ.

ಹೆಚ್​ಎಂಟಿ ಲೇಔಟ್​​ನಲ್ಲಿ ಬೃಹತ್ ಮರ ಧರೆಗುರುಳಿ ಕಾರೊಂದು ಸಂಪೂರ್ಣ ಜಖಂಗೊಂಡಿತು. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿತ್ತು. ಮರ ತೆರವಿಗೆ ಬಿಬಿಎಂಪಿಗೆ ದೂರು ನೀಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿತ್ತು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಧರೆಗುರುಳಿದ್ದು, ಜನಸಂಚಾರ ಕಡಿಮೆ ಇದ್ದಿದ್ದಕ್ಕೆ ದೊಡ್ಡ ಅನಾಹುತ ತಪ್ಪಿದೆ.

5 / 5
Follow us
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್