AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ಪ್ರವಾಸದಲ್ಲಿರುವ ಶ್ರೀಲಂಕಾಕ್ಕೆ ಬೆಂಬಿಡದೆ ಕಾಡುತ್ತಿದೆ ಈ ಸಮಸ್ಯೆ

T20I ಸರಣಿಯಲ್ಲಿ ಪ್ರಮುಖ ಆಟಗಾರರನ್ನು ಗಾಯದಿಂದ ಕಳೆದುಕೊಂಡ ಬಳಿಕ ಟೆಸ್ಟ್ ಸರಣಿಯಲ್ಲೂ ಇದೇ ಸಮಸ್ಯೆ ಎದುರಿಸುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ನ ಎರಡನೇ ದಿನದಂದು ಶ್ರೀಲಂಕಾದ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಗಾಯಗೊಂಡಿದ್ದು, ಪಂದ್ಯದಿಂದ ಹೊರಗುಳಿದಿದ್ದಾರೆ.

Vinay Bhat
|

Updated on:Mar 14, 2022 | 9:41 AM

Share
ಭಾರತ ಪ್ರವಾಸಕ್ಕೆ ಬಂದ ನಂತರ ಶ್ರೀಲಂಕಾ ತಂಡವು ತನ್ನ ಆಟಗಾರರ ಫಿಟ್ನೆಸ್ ಸಮಸ್ಯೆಯಿಂದ ನಿರಂತರವಾಗಿ ತೊಂದರೆಗೊಳಗಾಗುತ್ತಿದೆ. T20I ಸರಣಿಯಲ್ಲಿ ಪ್ರಮುಖ ಆಟಗಾರರನ್ನು ಗಾಯದಿಂದ ಕಳೆದುಕೊಂಡ ಬಳಿಕ ಟೆಸ್ಟ್ ಸರಣಿಯಲ್ಲೂ ಇದೇ ಸಮಸ್ಯೆ ಎದುರಿಸುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ನ ಎರಡನೇ ದಿನದಂದು ಶ್ರೀಲಂಕಾದ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಗಾಯಗೊಂಡಿದ್ದು, ಪಂದ್ಯದಿಂದ ಹೊರಗುಳಿದಿದ್ದಾರೆ.

1 / 4
ಎರಡನೇ ಟೆಸ್ಟ್ನ ಎರಡನೇ ದಿನದ ಭಾರತ ಬ್ಯಾಟಿಂಗ್ನ ಎರಡನೇ ಇನಿಂಗ್ಸ್ನ ಏಳನೇ ಓವರ್ನಲ್ಲಿ, ಜಯವಿಕ್ರಮ ರೋಹಿತ್ ಶರ್ಮಾ ಅವರಿಗೆ ಬಾಲ್ ಹಾಕುವಾಗ ತಮ್ಮ ಮೊಣಕಾಲು ಗಾಯಗೊಂಡರು. ಈ ಸಂದರ್ಭ ಅವರು ತುಂಬಾ ನೋವಿನಿಂದ ಬಳಲಿದರು. ಶ್ರೀಲಂಕಾ ತಂಡದ ಫಿಸಿಯೋ ಜಯವಿಕ್ರಮ ಅವರನ್ನು ಪರೀಕ್ಷಿಸಿ ಮೈದಾನದಿಂದ ಹೊರಗೆ ಕರೆದುಕೊಂಡು ಹೋದರು. ಇವರಿಗೆ ನಡೆಯಲೂ ಸಾಧ್ಯವಾಗದ ಕಾರಣ ಇಬ್ಬರು ಆಟಗಾರರ ನೆರವಿನಿಂದ ಜಯವಿಕ್ರಮ ಪೆವಿಲಿಯನ್ ಮೆಟ್ಟಿಲೇರಿದರು.

2 / 4
ಎಡಗೈ ಸ್ಪಿನ್ನರ್ ಜಯವಿಕ್ರಮ ಗಾಯಗೊಂಡಿರುವುದು ಪರಿಣಾಮ ಶ್ರೀಲಂಕಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ . ಜಯವಿಕ್ರಮ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ತಂಡಕ್ಕೆ ಮಾರಕವಾಗಿ ಪರಿಣಮಿಸಿದ್ದರು. ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಒಟ್ಟು 3 ವಿಕೆಟ್ ಪಡೆದಿದ್ದರು.

3 / 4
ಈ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿರುವ ಶ್ರೀಲಂಕಾದ ಮೊದಲ ಆಟಗಾರ ಜಯವಿಕ್ರಮ ಅಲ್ಲ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಅವರಿಗಿಂತ ಮೊದಲು, ವೇಗದ ಬೌಲರ್ ಲಹಿರು ಕುಮಾರ ಮಂಡಿರಜ್ಜು ಗಾಯದಿಂದ ಹೊರಗುಳಿದಿದ್ದರು. ಇನ್ನು ಎರಡನೇ ಟೆಸ್ಟ್ಗೆ ಎರಡು ದಿನ ಇರುವಾಗ ಬ್ಯಾಟರ್ ಪಾತುಮ್ ನಿಸಂಕಾ ಕೂಡ ಬೆನ್ನುಮೂಳೆಯ ಸಮಸ್ಯೆಯಿಂದಾಗಿ ಬೆಂಗಳೂರು ಟೆಸ್ಟ್ನಿಂದ ಹೊರಗುಳಿದಿದ್ದರು.

4 / 4

Published On - 9:09 am, Mon, 14 March 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?