AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ಪ್ರವಾಸದಲ್ಲಿರುವ ಶ್ರೀಲಂಕಾಕ್ಕೆ ಬೆಂಬಿಡದೆ ಕಾಡುತ್ತಿದೆ ಈ ಸಮಸ್ಯೆ

T20I ಸರಣಿಯಲ್ಲಿ ಪ್ರಮುಖ ಆಟಗಾರರನ್ನು ಗಾಯದಿಂದ ಕಳೆದುಕೊಂಡ ಬಳಿಕ ಟೆಸ್ಟ್ ಸರಣಿಯಲ್ಲೂ ಇದೇ ಸಮಸ್ಯೆ ಎದುರಿಸುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ನ ಎರಡನೇ ದಿನದಂದು ಶ್ರೀಲಂಕಾದ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಗಾಯಗೊಂಡಿದ್ದು, ಪಂದ್ಯದಿಂದ ಹೊರಗುಳಿದಿದ್ದಾರೆ.

Vinay Bhat
|

Updated on:Mar 14, 2022 | 9:41 AM

Share
ಭಾರತ ಪ್ರವಾಸಕ್ಕೆ ಬಂದ ನಂತರ ಶ್ರೀಲಂಕಾ ತಂಡವು ತನ್ನ ಆಟಗಾರರ ಫಿಟ್ನೆಸ್ ಸಮಸ್ಯೆಯಿಂದ ನಿರಂತರವಾಗಿ ತೊಂದರೆಗೊಳಗಾಗುತ್ತಿದೆ. T20I ಸರಣಿಯಲ್ಲಿ ಪ್ರಮುಖ ಆಟಗಾರರನ್ನು ಗಾಯದಿಂದ ಕಳೆದುಕೊಂಡ ಬಳಿಕ ಟೆಸ್ಟ್ ಸರಣಿಯಲ್ಲೂ ಇದೇ ಸಮಸ್ಯೆ ಎದುರಿಸುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಡೇ-ನೈಟ್ ಟೆಸ್ಟ್ನ ಎರಡನೇ ದಿನದಂದು ಶ್ರೀಲಂಕಾದ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ಗಾಯಗೊಂಡಿದ್ದು, ಪಂದ್ಯದಿಂದ ಹೊರಗುಳಿದಿದ್ದಾರೆ.

1 / 4
ಎರಡನೇ ಟೆಸ್ಟ್ನ ಎರಡನೇ ದಿನದ ಭಾರತ ಬ್ಯಾಟಿಂಗ್ನ ಎರಡನೇ ಇನಿಂಗ್ಸ್ನ ಏಳನೇ ಓವರ್ನಲ್ಲಿ, ಜಯವಿಕ್ರಮ ರೋಹಿತ್ ಶರ್ಮಾ ಅವರಿಗೆ ಬಾಲ್ ಹಾಕುವಾಗ ತಮ್ಮ ಮೊಣಕಾಲು ಗಾಯಗೊಂಡರು. ಈ ಸಂದರ್ಭ ಅವರು ತುಂಬಾ ನೋವಿನಿಂದ ಬಳಲಿದರು. ಶ್ರೀಲಂಕಾ ತಂಡದ ಫಿಸಿಯೋ ಜಯವಿಕ್ರಮ ಅವರನ್ನು ಪರೀಕ್ಷಿಸಿ ಮೈದಾನದಿಂದ ಹೊರಗೆ ಕರೆದುಕೊಂಡು ಹೋದರು. ಇವರಿಗೆ ನಡೆಯಲೂ ಸಾಧ್ಯವಾಗದ ಕಾರಣ ಇಬ್ಬರು ಆಟಗಾರರ ನೆರವಿನಿಂದ ಜಯವಿಕ್ರಮ ಪೆವಿಲಿಯನ್ ಮೆಟ್ಟಿಲೇರಿದರು.

2 / 4
ಎಡಗೈ ಸ್ಪಿನ್ನರ್ ಜಯವಿಕ್ರಮ ಗಾಯಗೊಂಡಿರುವುದು ಪರಿಣಾಮ ಶ್ರೀಲಂಕಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ . ಜಯವಿಕ್ರಮ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ತಂಡಕ್ಕೆ ಮಾರಕವಾಗಿ ಪರಿಣಮಿಸಿದ್ದರು. ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಒಟ್ಟು 3 ವಿಕೆಟ್ ಪಡೆದಿದ್ದರು.

3 / 4
ಈ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿರುವ ಶ್ರೀಲಂಕಾದ ಮೊದಲ ಆಟಗಾರ ಜಯವಿಕ್ರಮ ಅಲ್ಲ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಅವರಿಗಿಂತ ಮೊದಲು, ವೇಗದ ಬೌಲರ್ ಲಹಿರು ಕುಮಾರ ಮಂಡಿರಜ್ಜು ಗಾಯದಿಂದ ಹೊರಗುಳಿದಿದ್ದರು. ಇನ್ನು ಎರಡನೇ ಟೆಸ್ಟ್ಗೆ ಎರಡು ದಿನ ಇರುವಾಗ ಬ್ಯಾಟರ್ ಪಾತುಮ್ ನಿಸಂಕಾ ಕೂಡ ಬೆನ್ನುಮೂಳೆಯ ಸಮಸ್ಯೆಯಿಂದಾಗಿ ಬೆಂಗಳೂರು ಟೆಸ್ಟ್ನಿಂದ ಹೊರಗುಳಿದಿದ್ದರು.

4 / 4

Published On - 9:09 am, Mon, 14 March 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ