AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ: ಇಲ್ಲಿವೆ ಫೋಟೋಸ್​ 

ರಾಜ್ಯದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಬಿಜೆಪಿ ರಾಜ್ಯ ಕಚೇರಿಯಲ್ಲಿಯೂ ಧ್ವಜಾರೋಹಣ ನಡೆಯಿತು. ಇದರ ಫೋಟೋಸ್​ ಇಲ್ಲಿವೆ.

ಗಂಗಾಧರ​ ಬ. ಸಾಬೋಜಿ
|

Updated on: Aug 15, 2025 | 12:48 PM

Share
ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

1 / 7
ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

2 / 7
ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

3 / 7
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

4 / 7
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್​.ಎಂ.ರೇವಣ್ಣ ಉಪಸ್ಥಿತರಿದ್ದರು.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್​.ಎಂ.ರೇವಣ್ಣ ಉಪಸ್ಥಿತರಿದ್ದರು.

5 / 7
ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

6 / 7
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.

7 / 7
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us