AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

ನವರಾತ್ರಿ ಹಬ್ಬದ ನಿಮಿತ್ತ ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 06, 2024 | 8:02 PM

Share
Installation of 3000 dolls in single house at dharwad

ನವರಾತ್ರಿ ಹಬ್ಬವನ್ನು ಹಳೇ ಮೈಸೂರು ಭಾಗ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ನವರಾತ್ರಿಗೆ ಹಳೇ ಮೈಸೂರು ಭಾಗದಲ್ಲಿ ಮನೆಗಳಲ್ಲಿ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಈ ಆಚರಣೆ ಉತ್ತರ ಕರ್ನಾಟಕ ಭಾಗದಲ್ಲಿ ಅಷ್ಟಾಗಿ ಕಂಡು ಬರುವುದಿಲ್ಲ. ಆದರೆ, ಧಾರವಾಡದ ಮನೆಯೊಂದರಲ್ಲಿ 3000 ಗೊಂಬೆಗಳನ್ನು ಕೂರಿಸಲಾಗಿದೆ.

1 / 6
Installation of 3000 dolls in single house at dharwad

ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ದಾವಣಗೆರೆ ಮೂಲದ ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

2 / 6
Installation of 3000 dolls in single house at dharwad

ರಾಮಾಯಣ ಮತ್ತು ಮಹಾಭಾರತದ ಕತೆಗಳನ್ನು ಆಯಾ ಗೊಂಬೆಗಳ ಮೂಲಕವೇ ಪ್ರಸ್ತುತಪಡಿಸುವ ಪ್ರಯತ್ನ ಮಾಡಲಾಗಿದೆ. ಮಣ್ಣು, ಪೇಪರ್, ಮರ, ಹಿತ್ತಾಳೆ, ಕಂಚು, ಹತ್ತಿ, ಬಟ್ಟೆ ಹಾಗೂ ಮಧುರೈ ಮಣ್ಣಿನಿಂದ ತಯಾರಿಸಿದ ಗೊಂಬೆಗಳನ್ನು ಇಡಲಾಗಿದೆ.

3 / 6
Installation of 3000 dolls in single house at dharwad

ಒಂದಿಷ್ಟು ಗೊಂಬೆಗಳನ್ನು ಬೇರೆ ಕಡೆಯಿಂದ ತರಿಸಿದ್ದರೆ, ಹಲವಾರು ಗೊಂಬೆಗಳನ್ನು ಕುಟುಂಬದವರೆಲ್ಲ ಸೇರಿ ತಯಾರಿಸಿದ್ದಾರೆ. ಪಟ್ಟದ ಗೊಂಬೆಗಳು, ನವದುರ್ಗೆಯರು, ಮೈಸೂರು ಜಂಬು ಸವಾರಿ ಚಿತ್ರಣ, ನಾಗರಿಕತೆ ಬೆಳೆದು ಬಂದ ವಿಧಾನ, ಸ್ವಾತಂತ್ರ್ಯ ಹೋರಾಟಗಾರರು, ರಾವಣ ದರ್ಬಾರ್ ಹೀಗೆ ಇಡೀ ಗೊಂಬೆಗಳ ಜಗತ್ತೇ ಚಂದ್ರಿಕಾ ಅವರ ಮನೆಯಲ್ಲಿ ಅನಾವರಣಗೊಂಡಿದೆ. ಒಟ್ಟು 3000 ಗೊಂಬೆಗಳನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

4 / 6
Installation of 3000 dolls in single house at dharwad

ಪೂರ್ವಜರಿಂದ ನಡೆದುಕೊಂಡು ಬಂದಿರುವ ಗೊಂಬೆಗಳನ್ನು ಕೂರಿಸುವ ಸಂಪ್ರದಾಯವನ್ನು ತಾವಿರುವ ಊರು ಬಿಟ್ಟು ಬೇರೆ ಕಡೆ ಬಂದರೂ ಚಂದ್ರಿಕಾ ಅವರು ಪಾಲಿಸುತ್ತಿದ್ದಾರೆ. ಗೊಂಬೆಗಳನ್ನು ತಯಾರಿಸಲು ಕುಟುಂಬ ಒಂದೂವರೆ ತಿಂಗಳು ಶ್ರಮ ಹಾಕಿದೆ.

5 / 6
Installation of 3000 dolls in single house at dharwad

ಉತ್ತರ ಕರ್ನಾಟಕದಲ್ಲಿ ಗೊಂಬೆ ಪ್ರತಿಷ್ಠಾಪನೆ ಹೊಸತು ಆಗಿದ್ದು, ಜನರು ಕುತೂಹಲದಿಂದಲೇ ಆಗಮಿಸಿ ವೀಕ್ಷಿಸುತ್ತಿದ್ದಾರೆ. ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿರುವುದು ಶ್ಲಾಘನೀಯವಾಗಿದೆ.

6 / 6
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ