ಧಾರವಾಡ: ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

ನವರಾತ್ರಿ ಹಬ್ಬದ ನಿಮಿತ್ತ ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

| Updated By: ವಿವೇಕ ಬಿರಾದಾರ

Updated on: Oct 06, 2024 | 8:02 PM

Installation of 3000 dolls in single house at dharwad

ನವರಾತ್ರಿ ಹಬ್ಬವನ್ನು ಹಳೇ ಮೈಸೂರು ಭಾಗ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ನವರಾತ್ರಿಗೆ ಹಳೇ ಮೈಸೂರು ಭಾಗದಲ್ಲಿ ಮನೆಗಳಲ್ಲಿ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಈ ಆಚರಣೆ ಉತ್ತರ ಕರ್ನಾಟಕ ಭಾಗದಲ್ಲಿ ಅಷ್ಟಾಗಿ ಕಂಡು ಬರುವುದಿಲ್ಲ. ಆದರೆ, ಧಾರವಾಡದ ಮನೆಯೊಂದರಲ್ಲಿ 3000 ಗೊಂಬೆಗಳನ್ನು ಕೂರಿಸಲಾಗಿದೆ.

1 / 6
Installation of 3000 dolls in single house at dharwad

ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ದಾವಣಗೆರೆ ಮೂಲದ ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

2 / 6
Installation of 3000 dolls in single house at dharwad

ರಾಮಾಯಣ ಮತ್ತು ಮಹಾಭಾರತದ ಕತೆಗಳನ್ನು ಆಯಾ ಗೊಂಬೆಗಳ ಮೂಲಕವೇ ಪ್ರಸ್ತುತಪಡಿಸುವ ಪ್ರಯತ್ನ ಮಾಡಲಾಗಿದೆ. ಮಣ್ಣು, ಪೇಪರ್, ಮರ, ಹಿತ್ತಾಳೆ, ಕಂಚು, ಹತ್ತಿ, ಬಟ್ಟೆ ಹಾಗೂ ಮಧುರೈ ಮಣ್ಣಿನಿಂದ ತಯಾರಿಸಿದ ಗೊಂಬೆಗಳನ್ನು ಇಡಲಾಗಿದೆ.

3 / 6
Installation of 3000 dolls in single house at dharwad

ಒಂದಿಷ್ಟು ಗೊಂಬೆಗಳನ್ನು ಬೇರೆ ಕಡೆಯಿಂದ ತರಿಸಿದ್ದರೆ, ಹಲವಾರು ಗೊಂಬೆಗಳನ್ನು ಕುಟುಂಬದವರೆಲ್ಲ ಸೇರಿ ತಯಾರಿಸಿದ್ದಾರೆ. ಪಟ್ಟದ ಗೊಂಬೆಗಳು, ನವದುರ್ಗೆಯರು, ಮೈಸೂರು ಜಂಬು ಸವಾರಿ ಚಿತ್ರಣ, ನಾಗರಿಕತೆ ಬೆಳೆದು ಬಂದ ವಿಧಾನ, ಸ್ವಾತಂತ್ರ್ಯ ಹೋರಾಟಗಾರರು, ರಾವಣ ದರ್ಬಾರ್ ಹೀಗೆ ಇಡೀ ಗೊಂಬೆಗಳ ಜಗತ್ತೇ ಚಂದ್ರಿಕಾ ಅವರ ಮನೆಯಲ್ಲಿ ಅನಾವರಣಗೊಂಡಿದೆ. ಒಟ್ಟು 3000 ಗೊಂಬೆಗಳನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

4 / 6
Installation of 3000 dolls in single house at dharwad

ಪೂರ್ವಜರಿಂದ ನಡೆದುಕೊಂಡು ಬಂದಿರುವ ಗೊಂಬೆಗಳನ್ನು ಕೂರಿಸುವ ಸಂಪ್ರದಾಯವನ್ನು ತಾವಿರುವ ಊರು ಬಿಟ್ಟು ಬೇರೆ ಕಡೆ ಬಂದರೂ ಚಂದ್ರಿಕಾ ಅವರು ಪಾಲಿಸುತ್ತಿದ್ದಾರೆ. ಗೊಂಬೆಗಳನ್ನು ತಯಾರಿಸಲು ಕುಟುಂಬ ಒಂದೂವರೆ ತಿಂಗಳು ಶ್ರಮ ಹಾಕಿದೆ.

5 / 6
Installation of 3000 dolls in single house at dharwad

ಉತ್ತರ ಕರ್ನಾಟಕದಲ್ಲಿ ಗೊಂಬೆ ಪ್ರತಿಷ್ಠಾಪನೆ ಹೊಸತು ಆಗಿದ್ದು, ಜನರು ಕುತೂಹಲದಿಂದಲೇ ಆಗಮಿಸಿ ವೀಕ್ಷಿಸುತ್ತಿದ್ದಾರೆ. ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿರುವುದು ಶ್ಲಾಘನೀಯವಾಗಿದೆ.

6 / 6
Follow us
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?