AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಒಂದೇ ಮನೆಯಲ್ಲಿ 3000 ಗೊಂಬೆಗಳ ಪ್ರತಿಷ್ಠಾಪನೆ

ನವರಾತ್ರಿ ಹಬ್ಬದ ನಿಮಿತ್ತ ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ವಿವೇಕ ಬಿರಾದಾರ

Updated on: Oct 06, 2024 | 8:02 PM

Installation of 3000 dolls in single house at dharwad

ನವರಾತ್ರಿ ಹಬ್ಬವನ್ನು ಹಳೇ ಮೈಸೂರು ಭಾಗ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ನವರಾತ್ರಿಗೆ ಹಳೇ ಮೈಸೂರು ಭಾಗದಲ್ಲಿ ಮನೆಗಳಲ್ಲಿ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಈ ಆಚರಣೆ ಉತ್ತರ ಕರ್ನಾಟಕ ಭಾಗದಲ್ಲಿ ಅಷ್ಟಾಗಿ ಕಂಡು ಬರುವುದಿಲ್ಲ. ಆದರೆ, ಧಾರವಾಡದ ಮನೆಯೊಂದರಲ್ಲಿ 3000 ಗೊಂಬೆಗಳನ್ನು ಕೂರಿಸಲಾಗಿದೆ.

1 / 6
Installation of 3000 dolls in single house at dharwad

ಧಾರವಾಡ ನಗರದ ಕೆಐಎಡಿಬಿ ಕಾಲನಿಯಲ್ಲಿರುವ ಚಂದ್ರಿಕಾ ಕಟ್ಟಿ ಎಂಬುವರ ಮನೆಯಲ್ಲಿ 3 ಸಾವಿರ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ. ದಾವಣಗೆರೆ ಮೂಲದ ಚಂದ್ರಿಕಾ ಅವರು ಕಳೆದ 27 ವರ್ಷಗಳಿಂದ ಗೊಂಬೆಗಳ ಪ್ರತಿಷ್ಠಾಪನೆ ಮಾಡುತ್ತಾ ಬಂದಿದ್ದಾರೆ.

2 / 6
Installation of 3000 dolls in single house at dharwad

ರಾಮಾಯಣ ಮತ್ತು ಮಹಾಭಾರತದ ಕತೆಗಳನ್ನು ಆಯಾ ಗೊಂಬೆಗಳ ಮೂಲಕವೇ ಪ್ರಸ್ತುತಪಡಿಸುವ ಪ್ರಯತ್ನ ಮಾಡಲಾಗಿದೆ. ಮಣ್ಣು, ಪೇಪರ್, ಮರ, ಹಿತ್ತಾಳೆ, ಕಂಚು, ಹತ್ತಿ, ಬಟ್ಟೆ ಹಾಗೂ ಮಧುರೈ ಮಣ್ಣಿನಿಂದ ತಯಾರಿಸಿದ ಗೊಂಬೆಗಳನ್ನು ಇಡಲಾಗಿದೆ.

3 / 6
Installation of 3000 dolls in single house at dharwad

ಒಂದಿಷ್ಟು ಗೊಂಬೆಗಳನ್ನು ಬೇರೆ ಕಡೆಯಿಂದ ತರಿಸಿದ್ದರೆ, ಹಲವಾರು ಗೊಂಬೆಗಳನ್ನು ಕುಟುಂಬದವರೆಲ್ಲ ಸೇರಿ ತಯಾರಿಸಿದ್ದಾರೆ. ಪಟ್ಟದ ಗೊಂಬೆಗಳು, ನವದುರ್ಗೆಯರು, ಮೈಸೂರು ಜಂಬು ಸವಾರಿ ಚಿತ್ರಣ, ನಾಗರಿಕತೆ ಬೆಳೆದು ಬಂದ ವಿಧಾನ, ಸ್ವಾತಂತ್ರ್ಯ ಹೋರಾಟಗಾರರು, ರಾವಣ ದರ್ಬಾರ್ ಹೀಗೆ ಇಡೀ ಗೊಂಬೆಗಳ ಜಗತ್ತೇ ಚಂದ್ರಿಕಾ ಅವರ ಮನೆಯಲ್ಲಿ ಅನಾವರಣಗೊಂಡಿದೆ. ಒಟ್ಟು 3000 ಗೊಂಬೆಗಳನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ್ದಾರೆ.

4 / 6
Installation of 3000 dolls in single house at dharwad

ಪೂರ್ವಜರಿಂದ ನಡೆದುಕೊಂಡು ಬಂದಿರುವ ಗೊಂಬೆಗಳನ್ನು ಕೂರಿಸುವ ಸಂಪ್ರದಾಯವನ್ನು ತಾವಿರುವ ಊರು ಬಿಟ್ಟು ಬೇರೆ ಕಡೆ ಬಂದರೂ ಚಂದ್ರಿಕಾ ಅವರು ಪಾಲಿಸುತ್ತಿದ್ದಾರೆ. ಗೊಂಬೆಗಳನ್ನು ತಯಾರಿಸಲು ಕುಟುಂಬ ಒಂದೂವರೆ ತಿಂಗಳು ಶ್ರಮ ಹಾಕಿದೆ.

5 / 6
Installation of 3000 dolls in single house at dharwad

ಉತ್ತರ ಕರ್ನಾಟಕದಲ್ಲಿ ಗೊಂಬೆ ಪ್ರತಿಷ್ಠಾಪನೆ ಹೊಸತು ಆಗಿದ್ದು, ಜನರು ಕುತೂಹಲದಿಂದಲೇ ಆಗಮಿಸಿ ವೀಕ್ಷಿಸುತ್ತಿದ್ದಾರೆ. ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿರುವುದು ಶ್ಲಾಘನೀಯವಾಗಿದೆ.

6 / 6
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ